AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕುಡಿದು ಟೈಟ್‌ ಆದ ಮಾಲೀಕನನ್ನು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋದ ಗೂಳಿ; ವಿಡಿಯೋ ವೈರಲ್‌

ಸಾಕು ಪ್ರಾಣಿಗಳನ್ನು ನಾವು ಎಷ್ಟು ಪ್ರೀತಿಸುತ್ತೇವೆಯೋ ಅದಕ್ಕಿಂತ 10 ಪಟ್ಟು ಅವುಗಳು ನಮ್ಮ ಮೇಲೆ ನಿಷ್ಠೆ, ಪ್ರೀತಿಯನ್ನು ತೋರಿಸುತ್ತವೆ. ಮಾಲೀಕ ಹಾಗೂ ಸಾಕು ಪ್ರಾಣಿಗಳ ಬಾಂಧವ್ಯಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಕಂಠ ಪೂರ್ತಿ ಕುಡಿದು ಟೈಟ್‌ ಆದ ಮಾಲೀಕ ಎಣ್ಣೆ ಮತ್ತಿನಲ್ಲಿ ಬೀಳದಂತೆ ಆತನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 03, 2025 | 12:09 PM

Share

ಕಂಠಪೂರ್ತಿ ಕುಡಿದು ಇತರರೊಂದಿಗೆ ಜಗಳವಾಡಿ ರಂಪಾಟ ಮಾಡುವವರು ಒಂದೆಡೆಯಾದರೆ, ಕುಡಿದು ತೂರಾಡಿ ರೋಡ್‌ ಮಧ್ಯೆ, ಚರಂಡಿಯಲ್ಲಿ ಬೀಳುವವರು ಇನ್ನೊಂದು ಕಡೆ. ಕುಡುಕರ ಅವಾಂತರಗಳಿಗೆ ಸಂಬಂಧಿಸಿದ ಇಂತಹ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲೂ ಕೂಡಾ ಹರಿದಾಡುತ್ತಿರುತ್ತವೆ. ಇದೀಗ ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ಕಂಠಪೂರ್ತಿ ಕುಡಿದು ನಡೆದಾಡಲು ಕೂಡಾ ಸಾಧ್ಯವಾಗದ ಮಾಲೀಕನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಹೌದು ಕುಡಿದು ಎಲ್ಲೂ ಬೀಳಬಾರದೆಂದು ಗೂಳಿ ಸ್ವತಃ ಮಾಲೀಕನನ್ನು ಕರೆದುಕೊಂಡು ಹೋಗಿದೆ. ಮಾಲೀಕ ಹಾಗೂ ಗೂಳಿಯ ಬಾಂಧವ್ಯದ ಮುದ್ದಾದ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಬ್ರೆಜಿಲ್‌ ದೇಶದಲ್ಲಿ ನಡೆದ ಘಟನೆ ಇದಾಗಿದ್ದು, ನಿಷ್ಠಾವಂತ ಗೂಳಿಯೊಂದು ಕಂಠಪೂರ್ತಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಮನೆಗೆ ಜೋಪಾನವಾಗಿ ಕರೆದುಕೊಂಡು ಹೋಗಿದೆ. AMAZINGNATURE ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ದೃಶ್ಯವನ್ನು ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಗೂಳಿಯೊಂದು ನಡುರಸ್ತೆಯಲ್ಲಿ ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮುದ್ದು ಕಂದನ ಮೊದಲ ಹೆಜ್ಜೆ ಕಂಡು ಸಂಭ್ರಮಿಸಿದ ತಾಯಿ; ಮುದ್ದಾದ ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರಾ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಷ್ಟು ಮುದ್ದಾಗಿದೆ ಈ ದೃಶ್ಯʼ ಎಂಬ ಕಾಮೆಂಟ್ಸ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದಲ್ಲವೇ ನಿಜವಾದ ಪ್ರೀತಿ ಅಂದ್ರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಗೂಳಿಗೆ ನಿಷ್ಠೆಯನ್ನು ಕಂಡು ಫುಲ್‌ ಫಿದಾ ಆಗಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ