AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕುಡಿದು ಟೈಟ್‌ ಆದ ಮಾಲೀಕನನ್ನು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋದ ಗೂಳಿ; ವಿಡಿಯೋ ವೈರಲ್‌

ಸಾಕು ಪ್ರಾಣಿಗಳನ್ನು ನಾವು ಎಷ್ಟು ಪ್ರೀತಿಸುತ್ತೇವೆಯೋ ಅದಕ್ಕಿಂತ 10 ಪಟ್ಟು ಅವುಗಳು ನಮ್ಮ ಮೇಲೆ ನಿಷ್ಠೆ, ಪ್ರೀತಿಯನ್ನು ತೋರಿಸುತ್ತವೆ. ಮಾಲೀಕ ಹಾಗೂ ಸಾಕು ಪ್ರಾಣಿಗಳ ಬಾಂಧವ್ಯಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಕಂಠ ಪೂರ್ತಿ ಕುಡಿದು ಟೈಟ್‌ ಆದ ಮಾಲೀಕ ಎಣ್ಣೆ ಮತ್ತಿನಲ್ಲಿ ಬೀಳದಂತೆ ಆತನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 03, 2025 | 12:09 PM

Share

ಕಂಠಪೂರ್ತಿ ಕುಡಿದು ಇತರರೊಂದಿಗೆ ಜಗಳವಾಡಿ ರಂಪಾಟ ಮಾಡುವವರು ಒಂದೆಡೆಯಾದರೆ, ಕುಡಿದು ತೂರಾಡಿ ರೋಡ್‌ ಮಧ್ಯೆ, ಚರಂಡಿಯಲ್ಲಿ ಬೀಳುವವರು ಇನ್ನೊಂದು ಕಡೆ. ಕುಡುಕರ ಅವಾಂತರಗಳಿಗೆ ಸಂಬಂಧಿಸಿದ ಇಂತಹ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲೂ ಕೂಡಾ ಹರಿದಾಡುತ್ತಿರುತ್ತವೆ. ಇದೀಗ ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ಕಂಠಪೂರ್ತಿ ಕುಡಿದು ನಡೆದಾಡಲು ಕೂಡಾ ಸಾಧ್ಯವಾಗದ ಮಾಲೀಕನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಹೌದು ಕುಡಿದು ಎಲ್ಲೂ ಬೀಳಬಾರದೆಂದು ಗೂಳಿ ಸ್ವತಃ ಮಾಲೀಕನನ್ನು ಕರೆದುಕೊಂಡು ಹೋಗಿದೆ. ಮಾಲೀಕ ಹಾಗೂ ಗೂಳಿಯ ಬಾಂಧವ್ಯದ ಮುದ್ದಾದ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಬ್ರೆಜಿಲ್‌ ದೇಶದಲ್ಲಿ ನಡೆದ ಘಟನೆ ಇದಾಗಿದ್ದು, ನಿಷ್ಠಾವಂತ ಗೂಳಿಯೊಂದು ಕಂಠಪೂರ್ತಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಮನೆಗೆ ಜೋಪಾನವಾಗಿ ಕರೆದುಕೊಂಡು ಹೋಗಿದೆ. AMAZINGNATURE ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ದೃಶ್ಯವನ್ನು ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಗೂಳಿಯೊಂದು ನಡುರಸ್ತೆಯಲ್ಲಿ ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮುದ್ದು ಕಂದನ ಮೊದಲ ಹೆಜ್ಜೆ ಕಂಡು ಸಂಭ್ರಮಿಸಿದ ತಾಯಿ; ಮುದ್ದಾದ ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರಾ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಷ್ಟು ಮುದ್ದಾಗಿದೆ ಈ ದೃಶ್ಯʼ ಎಂಬ ಕಾಮೆಂಟ್ಸ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದಲ್ಲವೇ ನಿಜವಾದ ಪ್ರೀತಿ ಅಂದ್ರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಗೂಳಿಗೆ ನಿಷ್ಠೆಯನ್ನು ಕಂಡು ಫುಲ್‌ ಫಿದಾ ಆಗಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್