AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

ಪಾಕಿಸ್ತಾನದಲ್ಲಿ ವಧು ಮತ್ತು ವರ ಜೆಸಿಬಿ ಏರಿ ಸವಾರಿ ಹೊರಟಿದ್ದಾರೆ. ಪ್ರಸ್ತುತ ಈ ವಿಡಿಯೊ ವೈರಲ್ ಆಗಿದ್ದು, ನೆಟ್ಟಿಗರು ದಂಪತಿಗಳ ಸಾಹಸಕ್ಕೆ ಮಾರುಹೋಗಿದ್ದಾರೆ.

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ
ಜೆಸಿಬಿ ಏರಿ ಸವಾರಿ ಹೊರಟಿರುವ ವಧು- ವರ
TV9 Web
| Edited By: |

Updated on: Oct 02, 2021 | 2:43 PM

Share

ಇತ್ತೀಚೆಗೆ ಮದುವೆಯ ಸಂದರ್ಭದಲ್ಲಿ ಜರುಗಿದ ತಮಾಷೆಯ, ಅಚ್ಚರಿಯ ವಿಡಿಯೊಗಳು ಹೆಚ್ಚಾಗಿ ವೈರಲ್ ಆಗುತ್ತವೆ. ಅದರಲ್ಲೂ ಸಾಮಾನ್ಯ ಜನರಿಗಿಂತ ಭಿನ್ನವಾಗಿ ಸಂಭ್ರಮ ಆಚರಿಸುವ ವಧು- ವರರು ನೆಟ್ಟಿಗರಿಂದ ಮೆಚ್ಚುಗೆಗೆ ಒಳಗಾಗುತ್ತಾರೆ. ಇಂಥದ್ದೇ ಮಾದರಿಯ ಒಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅಲ್ಲಿನ ವಧು- ವರರ ಹೊಸ ಸ್ಟೈಲ್ ಕಂಡು ಸ್ಥಳದಲ್ಲಿ ನೆರೆದಿದ್ದವರಲ್ಲದೇ, ನೆಟ್ಟಿಗರೂ ಭೇಷ್ ಎಂದಿದ್ದಾರೆ. ಹೌದು. ಅಲ್ಲಿನ ಜೋಡಿಯೊಂದು ಮದುವೆಯ ಸಂದರ್ಭದಲ್ಲಿ ಜೆಸಿಬಿಯನ್ನೇರಿ ಮೆರವಣಿಗೆ ಹೊರಟಿದ್ದಾರೆ. ಈ ಕುತೂಹಲಕರ ಸಂದರ್ಭದ ವಿಡಿಯೊ ವೈರಲ್ ಆಗಿದೆ.

ಪಾಕಿಸ್ತಾನದ ಹುಂಜಾ ಕಣಿವೆಯ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ವರದಿಯಾಗಿದೆ. ವಧು- ವರರು ಯಾವುದೇ ಅದ್ದೂರಿ ವಾಹನಗಳ ಮೊರೆ ಹೋಗದೇ, ಜೆಸಿಬಿಯ ಮೊರೆ ಹೋಗಿದ್ದಾರೆ. ಅದಕ್ಕೆ ಸಂಪೂರ್ಣವಾಗಿ ಅಲಂಕಾರ ಮಾಡಲಾಗಿದ್ದು, ವಿವಿಧ ದೀಪಗಳನ್ನೂ ಇಟ್ಟು ಶೃಂಗರಿಸಲಾಗಿದೆ. ಜೆಸಿಬಿ ಸಾಗುವಾಗ ಅಕ್ಕ ಪಕ್ಕದ ಜನ ಅದನ್ನು ನೋಡುತ್ತಿದ್ದು, ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ವೈರಲ್ ಆಗಿರುವ ಈ ವಿಡಿಯೊವನ್ನು ಪಾಕಿಸ್ತಾನದ ಪತ್ರಕರ್ತ ಗುಲಾಮ್ ಅಬ್ಬಾಸ್ ಶಾ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ನಾನಾ ವಿಧವಾಗಿ ಕಾಮೆಂಟ್ ಮಾಡಿದ್ದು, ಮದುಮಕ್ಕಳ ಹೊಸ ಟ್ರೆಂಡನ್ನು ಸ್ವಾಗತಿಸಿದ್ದಾರೆ. ಹಲವರು ‘ಇದು ಸಾಹಸವೆಂದರೆ…’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ‘ವಿಭಿನ್ನವಾಗಿ ಮಾಡಲು ಹೋಗಿ ಹಾಸ್ಯಾಸ್ಪದವಾಗಿದೆ’ ಎಂದಿದ್ದಾರೆ. ಆದರೆ, ಈ ವಿಡಿಯೊಗೆ ಬಹುತೇಕ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್ ಆಗಿರುವ ವಿಡಿಯೊ ಇಲ್ಲಿದೆ:

ಈ ಹಿಂದೆ ಭಾರತದಲ್ಲೂ ಇಂಥದ್ದೇ ಪ್ರಕರಣ ವರದಿಯಾಗಿತ್ತು. ಛತ್ತೀಸ್​ಗಡದ ಇಂಜಿನಿಯರ್ ಒಬ್ಬರು ಜೆಸಿಬಿಯಲ್ಲಿ ಸವಾರಿ ಮಾಡುತ್ತಾ ವಧುವಿನ ಮನೆಗೆ ತಲುಪಿದ್ದರು. ಆ ವಿಡಿಯೊ ಕೂಡ ನೆಟ್ಟಿಗರ ಮನಗೆದ್ದಿತ್ತು. ಇಂಥದ್ದೇ ಮತ್ತೊಂದು ಪರಕರಣ ಕರ್ನಾಟಕದಲ್ಲೂ ವರದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:

ಬಿಡದಿ ಟೊಯೊಟ ಕಿರ್ಲೋಸ್ಕರ್ ಘಟಕದ 45 ಕಾರ್ಮಿಕರು‌ ವಜಾ; ಕಾರ್ಮಿಕ ಸಂಘದ ಆಕ್ರೋಶ

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?

S M Krishna invited: ದಸರಾ ಉದ್ಘಾಟನೆಗಾಗಿ ಎಸ್.ಎಂ.ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ