Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ

ಪಾಕಿಸ್ತಾನದಲ್ಲಿ ವಧು ಮತ್ತು ವರ ಜೆಸಿಬಿ ಏರಿ ಸವಾರಿ ಹೊರಟಿದ್ದಾರೆ. ಪ್ರಸ್ತುತ ಈ ವಿಡಿಯೊ ವೈರಲ್ ಆಗಿದ್ದು, ನೆಟ್ಟಿಗರು ದಂಪತಿಗಳ ಸಾಹಸಕ್ಕೆ ಮಾರುಹೋಗಿದ್ದಾರೆ.

Viral Video: ಜೆಸಿಬಿ ಏರಿ ಸವಾರಿ ಹೊರಟ ಜೋಡಿ; ನೆಟ್ಟಿಗರ ಮನಗೆದ್ದ ಈ ವಿಡಿಯೊ ನೋಡಿ
ಜೆಸಿಬಿ ಏರಿ ಸವಾರಿ ಹೊರಟಿರುವ ವಧು- ವರ
Follow us
| Updated By: shivaprasad.hs

Updated on: Oct 02, 2021 | 2:43 PM

ಇತ್ತೀಚೆಗೆ ಮದುವೆಯ ಸಂದರ್ಭದಲ್ಲಿ ಜರುಗಿದ ತಮಾಷೆಯ, ಅಚ್ಚರಿಯ ವಿಡಿಯೊಗಳು ಹೆಚ್ಚಾಗಿ ವೈರಲ್ ಆಗುತ್ತವೆ. ಅದರಲ್ಲೂ ಸಾಮಾನ್ಯ ಜನರಿಗಿಂತ ಭಿನ್ನವಾಗಿ ಸಂಭ್ರಮ ಆಚರಿಸುವ ವಧು- ವರರು ನೆಟ್ಟಿಗರಿಂದ ಮೆಚ್ಚುಗೆಗೆ ಒಳಗಾಗುತ್ತಾರೆ. ಇಂಥದ್ದೇ ಮಾದರಿಯ ಒಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅಲ್ಲಿನ ವಧು- ವರರ ಹೊಸ ಸ್ಟೈಲ್ ಕಂಡು ಸ್ಥಳದಲ್ಲಿ ನೆರೆದಿದ್ದವರಲ್ಲದೇ, ನೆಟ್ಟಿಗರೂ ಭೇಷ್ ಎಂದಿದ್ದಾರೆ. ಹೌದು. ಅಲ್ಲಿನ ಜೋಡಿಯೊಂದು ಮದುವೆಯ ಸಂದರ್ಭದಲ್ಲಿ ಜೆಸಿಬಿಯನ್ನೇರಿ ಮೆರವಣಿಗೆ ಹೊರಟಿದ್ದಾರೆ. ಈ ಕುತೂಹಲಕರ ಸಂದರ್ಭದ ವಿಡಿಯೊ ವೈರಲ್ ಆಗಿದೆ.

ಪಾಕಿಸ್ತಾನದ ಹುಂಜಾ ಕಣಿವೆಯ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ವರದಿಯಾಗಿದೆ. ವಧು- ವರರು ಯಾವುದೇ ಅದ್ದೂರಿ ವಾಹನಗಳ ಮೊರೆ ಹೋಗದೇ, ಜೆಸಿಬಿಯ ಮೊರೆ ಹೋಗಿದ್ದಾರೆ. ಅದಕ್ಕೆ ಸಂಪೂರ್ಣವಾಗಿ ಅಲಂಕಾರ ಮಾಡಲಾಗಿದ್ದು, ವಿವಿಧ ದೀಪಗಳನ್ನೂ ಇಟ್ಟು ಶೃಂಗರಿಸಲಾಗಿದೆ. ಜೆಸಿಬಿ ಸಾಗುವಾಗ ಅಕ್ಕ ಪಕ್ಕದ ಜನ ಅದನ್ನು ನೋಡುತ್ತಿದ್ದು, ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ವೈರಲ್ ಆಗಿರುವ ಈ ವಿಡಿಯೊವನ್ನು ಪಾಕಿಸ್ತಾನದ ಪತ್ರಕರ್ತ ಗುಲಾಮ್ ಅಬ್ಬಾಸ್ ಶಾ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ನಾನಾ ವಿಧವಾಗಿ ಕಾಮೆಂಟ್ ಮಾಡಿದ್ದು, ಮದುಮಕ್ಕಳ ಹೊಸ ಟ್ರೆಂಡನ್ನು ಸ್ವಾಗತಿಸಿದ್ದಾರೆ. ಹಲವರು ‘ಇದು ಸಾಹಸವೆಂದರೆ…’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ‘ವಿಭಿನ್ನವಾಗಿ ಮಾಡಲು ಹೋಗಿ ಹಾಸ್ಯಾಸ್ಪದವಾಗಿದೆ’ ಎಂದಿದ್ದಾರೆ. ಆದರೆ, ಈ ವಿಡಿಯೊಗೆ ಬಹುತೇಕ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್ ಆಗಿರುವ ವಿಡಿಯೊ ಇಲ್ಲಿದೆ:

ಈ ಹಿಂದೆ ಭಾರತದಲ್ಲೂ ಇಂಥದ್ದೇ ಪ್ರಕರಣ ವರದಿಯಾಗಿತ್ತು. ಛತ್ತೀಸ್​ಗಡದ ಇಂಜಿನಿಯರ್ ಒಬ್ಬರು ಜೆಸಿಬಿಯಲ್ಲಿ ಸವಾರಿ ಮಾಡುತ್ತಾ ವಧುವಿನ ಮನೆಗೆ ತಲುಪಿದ್ದರು. ಆ ವಿಡಿಯೊ ಕೂಡ ನೆಟ್ಟಿಗರ ಮನಗೆದ್ದಿತ್ತು. ಇಂಥದ್ದೇ ಮತ್ತೊಂದು ಪರಕರಣ ಕರ್ನಾಟಕದಲ್ಲೂ ವರದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:

ಬಿಡದಿ ಟೊಯೊಟ ಕಿರ್ಲೋಸ್ಕರ್ ಘಟಕದ 45 ಕಾರ್ಮಿಕರು‌ ವಜಾ; ಕಾರ್ಮಿಕ ಸಂಘದ ಆಕ್ರೋಶ

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?

S M Krishna invited: ದಸರಾ ಉದ್ಘಾಟನೆಗಾಗಿ ಎಸ್.ಎಂ.ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ