AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆಯಲ್ಲಿ ಹಾರವನ್ನು ಎಸೆದುಕೊಂಡ ಜೋಡಿ: ಪುಟಿನ್​ಗೂ ಇಷ್ಟು ಅಹಂಕಾರವಿಲ್ಲವೆಂದ ನೆಟ್ಟಿಗರು

ಇಲ್ಲೊಂದು ವಿಡಿಯೋದಲ್ಲಿ ಹಾರ ಬದಲಾಯಿಸಿಕೊಳ್ಳುವ ವೇಳೆ ವಧು ವರರಿಬ್ಬರೂ ಸಿಟ್ಟಿನಿಂದ ಹಾರವನ್ನು ಎಸೆದುಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಮದುವೆಯಲ್ಲಿ ಹಾರವನ್ನು ಎಸೆದುಕೊಂಡ ಜೋಡಿ: ಪುಟಿನ್​ಗೂ ಇಷ್ಟು ಅಹಂಕಾರವಿಲ್ಲವೆಂದ ನೆಟ್ಟಿಗರು
ಮದುವೆ
TV9 Web
| Edited By: |

Updated on:Mar 02, 2022 | 1:21 PM

Share

ಮದುವೆ (Wedding) ಮನೆಗಳಲ್ಲಿ ಕೆಲವು ವಿಚಿತ್ರ ಘಟನೆಗಳು ನಡೆಯುವುದು ಸಾಮಾನ್ಯ. ಸಾಮಾನ್ಯವಾಗಿ ತಮಾಷೆಯ ಘಟನೆಗಳೇ ಹೆಚ್ಚು. ವಧು ವರರನ್ನು ಕಾಲೆಳೆದು ತಮಾಷೆ ಮಾಡುವುದು ಸಹಜ, ಆದರೆ ಇಲ್ಲೊಂದು ವಿಡಿಯೋದಲ್ಲಿ ಹಾರ ಬದಲಾಯಿಸಿಕೊಳ್ಳುವ ವೇಳೆ ವಧು (Bride) ವರ (Groom)ರಿಬ್ಬರೂ ಸಿಟ್ಟಿನಿಂದ ಹಾರವನ್ನು ಎಸೆದುಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್​ ಆಗಿದೆ.  ಮದುವೆ ಮನೆಗಳಲ್ಲಿ ವಧು ವರರೇ ಮುಖ್ಯ ಆಕರ್ಷಣೆ ಮತ್ತು ಕೇಂದ್ರ ಬಿಂದುವಾಗಿರುತ್ತಾರೆ. ಹೀಗಿದ್ದಾಗ ಸೊಕ್ಕಿನಿಂದ ಹಾರ ಬದಲಾಯಿಸಿಕೊಳ್ಳುವುದನ್ನು ಕಂಡು ನೆಟ್ಟಿಗರು ಬಿದ್ದೂ ಬಿದ್ದೂ ನಕ್ಕಿದ್ದಾರೆ. ಈಗಲೇ ಈ ರೀತಿ ಇದ್ದರೆ ಮುಂದೆ ಒಟ್ಟಿಗೆ ಇದ್ದಾಗ ಗತಿ ಏನು ಎಂದು ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by memes | comedy (@ghantaa)

ಘಂಟಾ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, ಚಪ್ಪಾಳೆ ತಟ್ಟುವ ಕ್ಯಾಪ್ಷನ್​ ನೀಡಿದೆ. ವಿಡಿಯೋದಲ್ಲಿ ಮೊದಲು ಕೆಂಪು ಬಣ್ಣದ ಸೀರೆಯುಟ್ಟ ವಧು ಸಿಟ್ಟಿನಿಂದ ವರನಿಗೆ ಹಾರವನ್ನು ಎಸೆಯುತ್ತಾಳೆ. ನಂತರ ವರ ಕೂಡ ವಧುವಿನ ಕುತ್ತಿಗೆಗೆ ನಿಂತಲ್ಲೇ ನಿಂತು ಹಾರವನ್ನು ಎಸೆಯುತ್ತಾನೆ. ಇದರ ವಿಡಿಯೋವನ್ನು ನೋಡಿ ನೆಟ್ಟಿಗರು ವಿಚಿತ್ರ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ವೈರಲ್​ ಆಗಿರುವ ವಿಡಿಯೋಕ್ಕೆ ಬಳಕೆದಾರರೊಬ್ಬರು ಪುಟಿನ್​ಗೂ ಕೂಡ ಇಷ್ಟು ಅಹಂಕಾರ ಇರಲು ಸಾಧ್ಯವಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೊಬ್ಬರು ಮದುವೆಯಾಗುತ್ತಿದ್ದಾರೋ ಅಥವಾ ದ್ವೇಷ ತೀರಿಸಿಕೊಳ್ಳುತ್ತಿದ್ದಾರೋ ಎಂದು ಕಾಮೆಂಟ್​ ಮಾಡಿದ್ದಾರೆ. ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು ಸಾವಿರಕ್ಕೂ ಅಧಿಕ ಜನ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ: ರಷ್ಯಾ ಉಕ್ರೇನ್​ ಯುದ್ಧದ ಬಗ್ಗೆ ಬಾಬಾ ವಂಗಾ ಭವಿಷ್ಯ

Published On - 1:20 pm, Wed, 2 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್