AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಕುದುರೆ ಏರಿ ಮಂಟಪಕ್ಕೆ ಬಂದ ವಧು: ವೀಡಿಯೋ ವೈರಲ್​

ಇಲ್ಲೊಬ್ಬಳು ವಧು, ನಾನು ನನ್ನ ಗಂಡನನ್ನು ಪಡೆಯಲು ಹೊರಟಿದ್ದೇನೆ ಎಂದು ಕುದುರೆ ಏರಿಕೊಂಡು ಮದುವೆ ಮನೆಗೆ ಮೆರವಣಿಗೆ ಮೂಲಕ ಹೋದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. 

viral video: ಕುದುರೆ ಏರಿ ಮಂಟಪಕ್ಕೆ ಬಂದ ವಧು: ವೀಡಿಯೋ ವೈರಲ್​
ಕುದುರೆ ಏರಿ ಬಂದ ವಧು
TV9 Web
| Edited By: |

Updated on:Dec 18, 2021 | 3:43 PM

Share

ಗಯಾ: ಭಾರತೀಯ ಮದುವೆ ಸಮಾರಂಭಗಳಲ್ಲಿ ವಿಭಿನ್ನ ರೀತಿಯ ವಧುವರರ ಆಗಮನ ಇತ್ತೀಚೆಗೆ ಸರ್ವೇ ಸಾಮಾನ್ಯವಾಗಿದೆ. ವಧು ವರರನ್ನು ಉಯ್ಯಾಲೆಯಲ್ಲಿ ಕರೆತರುವುದು, ಜೆಸಿಬಿಯಲ್ಲಿ ಕರೆದುಕೊಂಡು ಬರುವುದು ಸೇರಿದಂತೆ ಈ ರೀತಿಯ ಸಾಕಷ್ಟು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈವೆಂಟ್​ ಮ್ಯಾನೇಜ್ಮೆಂಟ್​ ಕಂಪನಿಗಳು ಹುಟ್ಟಿಕೊಂಡ ಬಳಿಕ ವಧುವರರ ವೆಲ್​ಕಮ್​ ಮಾಡಲು ಹೊಸ ಹೊಸ ಐಡಿಯಾಗಳನ್ನು ಕಾಣಬಹುದು. ಹೀಗೆ ವಿಭಿನ್ನ ಐಡಿಯಾಗಳಿಗೆ ಕೆಲವೊಮ್ಮೆ ಅಪರೂಪದ ಘಟನೆಗಳೂ ಸಾಕ್ಷಿಯಾಗುತ್ತವೆ.

ಅದನ್ನು ಹೊರತುಪಡಿಸಿದರೆ ಸಾಮಾನ್ಯವಾಗಿ ಮದುವೆಯ ವರ ಕುದುರೆ ಏರಿ ಮಂಟಪಕ್ಕೆ ಬರುತ್ತಾನೆ. ಆದರೆ ಇಲ್ಲೊಬ್ಬಳು ವಧು, ನಾನು ನನ್ನ ಗಂಡನನ್ನು ಪಡೆಯಲು ಹೊರಟಿದ್ದೇನೆ ಎಂದು ಕುದುರೆ ಏರಿಕೊಂಡು ಮದುವೆ ಮನೆಗೆ ಮೆರವಣಿಗೆ ಮೂಲಕ ಹೋದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.  ಸುದ್ದಿ ಸಂಸ್ಥೆ ಎಎನ್​ಐ ಇದರ ವಿಡಿಯೋವನ್ನು ಹಂಚಿಕೊಂಡಿದೆ.

ಗಯಾ ಮೂಲದ ಅನುಷ್ಕಾ ಗುಹಾ ಎನ್ನುವವರು ಈ ರೀತಿ ಮದುವೆಗೆ ಕುದುರೆ ಏರಿ ಮೆರವಣಿಗೆ ಮೂಲಕ ಸಾಗಿದ್ದಾರೆ. ಫ್ಲೈಟ್​ ಅಟೆಂಡೆಂಟ್​ ಆಗಿರುವ ಅನುಷ್ಕಾ ಅವರು ಕೋಲ್ಕತ್ತಾ ಮೂಲದ ಉದ್ಯಮಿ ಜೀತ್​ ಮುಖರ್ಜಿ ಎನ್ನುವವರನ್ನು ವಿವಾಹವಾಗಿದ್ದಾರೆ. ಈ ವೇಳೆ ಲೆಹೆಂಗಾ ಧರಿಸಿ ಕುದುರೆ ಏರಿ ಬಂದಿದ್ದಾರೆ. ಈ ಬಗ್ಗೆ ಅನುಷ್ಕಾ ಹುಡುಗರು ಮಾತ್ರ ಏಕೆ ಕುದುರೆ ಏರಿ ಬರಬೇಕು. ನಾನು ಹುಡುಗಿ ಆದರೂ ಕುದುರೆ ಹತ್ತಿಕೊಂಡು ಬಂದಿದ್ದೇನೆ. ಇದನ್ನು ಪ್ರಶ್ನೆ ಮಾಡದ್ದಿದ್ದಕ್ಕೆ ನನ್ನ ಪತಿಗೆ ಧನ್ಯವಾದಗಳೆ ಎಂದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಧು ಅನುಷ್ಕಾ ಕುದುರೆ ಏರಿ ಬಂದ ವೀಡಿಯೋ ವೈರಲ್​ ಅಗಿದೆ. ಮದುವೆಯಲ್ಲಿ ಧರಿಸುವ ಭಾರವಾದ ಲೆಹೆಂಗಾ ಧರಿಸಿ ಕುದುರೆ ಸವಾರಿ ಮಾಡಿಕೊಂಡು ಬಂದ ಅನುಷ್ಕಾ ಅವರನ್ನು ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ

Published On - 3:36 pm, Sat, 18 December 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ