AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ವಧುವನ್ನು ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​
ವಧು
TV9 Web
| Edited By: |

Updated on: Jan 29, 2022 | 6:17 PM

Share

ಮದುವೆಗಳಲ್ಲಿ ಕೆಲವೊಂದು ದೃಶ್ಯಗಳು ನೋಡುಗರನ್ನು ಭಾವುಕರನ್ನಾಗಿ ಮಾಡುತ್ತದೆ. ಹುಟ್ಟಿದ ಮನೆಯನ್ನು, ತನ್ನವರನ್ನು ತೊರೆದು ಹೊಸದೊಂದು ಕುಟುಂಬಕ್ಕೆ ಸೇರಿಕೊಳ್ಳುವ ಗಳಿಗೆ ಎಂತಹ ಹೆಣ್ಣನ್ನು ಒಂದು ಕ್ಷಣ ದಿಗಿಲುಗೊಳಿಸುತ್ತವೆ. ಜತೆಯಲ್ಲಿ ಬೆಳೆದ ಅಣ್ಣ ತಮ್ಮಂದಿರನ್ನು, ಅಕ್ಕ ತಂಗಿಯರಿಂದ ದೂರವಾಗಿ ಬದುಕುವುದು ಆಕೆಯಿಂದ ಮಾತ್ರ ಸಾಧ್ಯ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಧುವನ್ನು (Bride) ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್ (Viral Video)​ ಆಗಿದೆ. ಇನ್ಸ್ಟಾಗ್ರಾಮ್​ (Instagram) ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವಿನ ಸಹೋದರರು ವಧು ಬರುವ ಹಾದಿಯಲ್ಲಿ ತಮ್ಮ ಅಂಗೈಗಳನ್ನು ಇಟ್ಟು ಆಕೆಯನ್ನು ಕೈಗಳ ಮೇಲೆ ನಡೆದುಕೊಂಡು ಹೋಗುವಂತೆ ಹೇಳುತ್ತಾರೆ. ಇದರಿಂದ  ಭಾವುಕಗೊಂಡ ವಧು ತನ್ನ ಪ್ರೀತಿಯ ಸಹೋದರರ ಅಂಗೈ ಮೇಲೆ ನಡೆದುಕೊಂಡು ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ‘witty_wedding’ ಎನ್ನುವ ಇನ್ಸ್ಟಾಗ್ರಾಮ್ ಖಾತೆ ಹಂಚಿಕೊಂಡಿದೆ. ಕೆಂಪು ಬಣ್ಣದ ಲೆಹೆಂಗಾ ತೊಟ್ಟು ಅದ್ದೂರಿಯಾಗಿ ತಯಾರಾದ ವಧು ಸಹೋದರರ ಅಂಗೈ ಮೇಲೆ ಬರುವುದನ್ನು ಕಂಡು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಪ್ರೀತಿಸುವ ಸಹೋದರರನ್ನು ಪಡೆದ ಆಕೆ ಅದೃಷ್ಟವಂತೆ ಎಂದಿದ್ದಾರೆ.

ಸದ್ಯ ವೈರಲ್​ ಆಗಿರುವ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ್ದು, ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವಧು ಬರುವ ದಾರಿಗೆ ಹೂವನ್ನು ಹಾಕುತ್ತಾರೆ. ಅದೇ ಹೂವಿನ ಮೇಲೆ ಆಕೆಯ ಸಹೋದರರು ಮಂಡಿಯೂರಿ ಕುಳಿತು ಅಂಗೈಯನ್ನು ಚಾಚುತ್ತಾರೆ. ಅಗ ಆಕೆ ಹೆಜ್ಜೆಯನ್ನು ಅವರ ಕೈಮೇಲೆ ಇಟ್ಟುಕೊಂಡು ಮಂಟಪಕ್ಕೆ ನಡೆದುಕೊಂಡು ಬರುತ್ತಾಳೆ.

ಇದನ್ನೂ ಓದಿ;

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು