AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ವಧುವನ್ನು ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​
ವಧು
TV9 Web
| Edited By: |

Updated on: Jan 29, 2022 | 6:17 PM

Share

ಮದುವೆಗಳಲ್ಲಿ ಕೆಲವೊಂದು ದೃಶ್ಯಗಳು ನೋಡುಗರನ್ನು ಭಾವುಕರನ್ನಾಗಿ ಮಾಡುತ್ತದೆ. ಹುಟ್ಟಿದ ಮನೆಯನ್ನು, ತನ್ನವರನ್ನು ತೊರೆದು ಹೊಸದೊಂದು ಕುಟುಂಬಕ್ಕೆ ಸೇರಿಕೊಳ್ಳುವ ಗಳಿಗೆ ಎಂತಹ ಹೆಣ್ಣನ್ನು ಒಂದು ಕ್ಷಣ ದಿಗಿಲುಗೊಳಿಸುತ್ತವೆ. ಜತೆಯಲ್ಲಿ ಬೆಳೆದ ಅಣ್ಣ ತಮ್ಮಂದಿರನ್ನು, ಅಕ್ಕ ತಂಗಿಯರಿಂದ ದೂರವಾಗಿ ಬದುಕುವುದು ಆಕೆಯಿಂದ ಮಾತ್ರ ಸಾಧ್ಯ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಧುವನ್ನು (Bride) ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್ (Viral Video)​ ಆಗಿದೆ. ಇನ್ಸ್ಟಾಗ್ರಾಮ್​ (Instagram) ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

View this post on Instagram

A post shared by Wedding Planning_witty Wedding (@witty_wedding)

ವಧುವಿನ ಸಹೋದರರು ವಧು ಬರುವ ಹಾದಿಯಲ್ಲಿ ತಮ್ಮ ಅಂಗೈಗಳನ್ನು ಇಟ್ಟು ಆಕೆಯನ್ನು ಕೈಗಳ ಮೇಲೆ ನಡೆದುಕೊಂಡು ಹೋಗುವಂತೆ ಹೇಳುತ್ತಾರೆ. ಇದರಿಂದ  ಭಾವುಕಗೊಂಡ ವಧು ತನ್ನ ಪ್ರೀತಿಯ ಸಹೋದರರ ಅಂಗೈ ಮೇಲೆ ನಡೆದುಕೊಂಡು ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ‘witty_wedding’ ಎನ್ನುವ ಇನ್ಸ್ಟಾಗ್ರಾಮ್ ಖಾತೆ ಹಂಚಿಕೊಂಡಿದೆ. ಕೆಂಪು ಬಣ್ಣದ ಲೆಹೆಂಗಾ ತೊಟ್ಟು ಅದ್ದೂರಿಯಾಗಿ ತಯಾರಾದ ವಧು ಸಹೋದರರ ಅಂಗೈ ಮೇಲೆ ಬರುವುದನ್ನು ಕಂಡು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಪ್ರೀತಿಸುವ ಸಹೋದರರನ್ನು ಪಡೆದ ಆಕೆ ಅದೃಷ್ಟವಂತೆ ಎಂದಿದ್ದಾರೆ.

ಸದ್ಯ ವೈರಲ್​ ಆಗಿರುವ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ್ದು, ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವಧು ಬರುವ ದಾರಿಗೆ ಹೂವನ್ನು ಹಾಕುತ್ತಾರೆ. ಅದೇ ಹೂವಿನ ಮೇಲೆ ಆಕೆಯ ಸಹೋದರರು ಮಂಡಿಯೂರಿ ಕುಳಿತು ಅಂಗೈಯನ್ನು ಚಾಚುತ್ತಾರೆ. ಅಗ ಆಕೆ ಹೆಜ್ಜೆಯನ್ನು ಅವರ ಕೈಮೇಲೆ ಇಟ್ಟುಕೊಂಡು ಮಂಟಪಕ್ಕೆ ನಡೆದುಕೊಂಡು ಬರುತ್ತಾಳೆ.

ಇದನ್ನೂ ಓದಿ;

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ