AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ವಧುವನ್ನು ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​
ವಧು
TV9 Web
| Edited By: |

Updated on: Jan 29, 2022 | 6:17 PM

Share

ಮದುವೆಗಳಲ್ಲಿ ಕೆಲವೊಂದು ದೃಶ್ಯಗಳು ನೋಡುಗರನ್ನು ಭಾವುಕರನ್ನಾಗಿ ಮಾಡುತ್ತದೆ. ಹುಟ್ಟಿದ ಮನೆಯನ್ನು, ತನ್ನವರನ್ನು ತೊರೆದು ಹೊಸದೊಂದು ಕುಟುಂಬಕ್ಕೆ ಸೇರಿಕೊಳ್ಳುವ ಗಳಿಗೆ ಎಂತಹ ಹೆಣ್ಣನ್ನು ಒಂದು ಕ್ಷಣ ದಿಗಿಲುಗೊಳಿಸುತ್ತವೆ. ಜತೆಯಲ್ಲಿ ಬೆಳೆದ ಅಣ್ಣ ತಮ್ಮಂದಿರನ್ನು, ಅಕ್ಕ ತಂಗಿಯರಿಂದ ದೂರವಾಗಿ ಬದುಕುವುದು ಆಕೆಯಿಂದ ಮಾತ್ರ ಸಾಧ್ಯ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಧುವನ್ನು (Bride) ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್ (Viral Video)​ ಆಗಿದೆ. ಇನ್ಸ್ಟಾಗ್ರಾಮ್​ (Instagram) ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವಿನ ಸಹೋದರರು ವಧು ಬರುವ ಹಾದಿಯಲ್ಲಿ ತಮ್ಮ ಅಂಗೈಗಳನ್ನು ಇಟ್ಟು ಆಕೆಯನ್ನು ಕೈಗಳ ಮೇಲೆ ನಡೆದುಕೊಂಡು ಹೋಗುವಂತೆ ಹೇಳುತ್ತಾರೆ. ಇದರಿಂದ  ಭಾವುಕಗೊಂಡ ವಧು ತನ್ನ ಪ್ರೀತಿಯ ಸಹೋದರರ ಅಂಗೈ ಮೇಲೆ ನಡೆದುಕೊಂಡು ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ‘witty_wedding’ ಎನ್ನುವ ಇನ್ಸ್ಟಾಗ್ರಾಮ್ ಖಾತೆ ಹಂಚಿಕೊಂಡಿದೆ. ಕೆಂಪು ಬಣ್ಣದ ಲೆಹೆಂಗಾ ತೊಟ್ಟು ಅದ್ದೂರಿಯಾಗಿ ತಯಾರಾದ ವಧು ಸಹೋದರರ ಅಂಗೈ ಮೇಲೆ ಬರುವುದನ್ನು ಕಂಡು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಪ್ರೀತಿಸುವ ಸಹೋದರರನ್ನು ಪಡೆದ ಆಕೆ ಅದೃಷ್ಟವಂತೆ ಎಂದಿದ್ದಾರೆ.

ಸದ್ಯ ವೈರಲ್​ ಆಗಿರುವ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ್ದು, ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವಧು ಬರುವ ದಾರಿಗೆ ಹೂವನ್ನು ಹಾಕುತ್ತಾರೆ. ಅದೇ ಹೂವಿನ ಮೇಲೆ ಆಕೆಯ ಸಹೋದರರು ಮಂಡಿಯೂರಿ ಕುಳಿತು ಅಂಗೈಯನ್ನು ಚಾಚುತ್ತಾರೆ. ಅಗ ಆಕೆ ಹೆಜ್ಜೆಯನ್ನು ಅವರ ಕೈಮೇಲೆ ಇಟ್ಟುಕೊಂಡು ಮಂಟಪಕ್ಕೆ ನಡೆದುಕೊಂಡು ಬರುತ್ತಾಳೆ.

ಇದನ್ನೂ ಓದಿ;

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು