AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್​ ಸ್ಟೆಪ್​ ಮೂಲಕ ಮದುವೆ ಮನೆಗೆ ಆಗಮಿಸಿದ ವಧು: ವಿಡಿಯೋ ವೈರಲ್​

ಸಭಾ ಕಪೂರ್​ ಮದುವೆಯಲ್ಲಿ, 2016ರಲ್ಲಿ ಬಿಡುಗಡೆಯಾದ ಬಾಲಿವುಡ್​ನ ಬಾರ್​ ಬಾರ್​ ದೇಖೋ ಚಿತ್ರದ ಸೌ ಆಸ್ಮಾನ್ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ.

ಸಖತ್​ ಸ್ಟೆಪ್​ ಮೂಲಕ ಮದುವೆ ಮನೆಗೆ ಆಗಮಿಸಿದ ವಧು: ವಿಡಿಯೋ ವೈರಲ್​
ಸಬಾ ಕಪೂರ್
TV9 Web
| Edited By: |

Updated on:Jan 10, 2022 | 11:54 AM

Share

ಇತ್ತೀಚಿನ ದಿನಗಳಲ್ಲಿ ಮದುವೆಗಳಲ್ಲಿ ವಧು ಮತ್ತು ವರನ ಎಂಟ್ರಿ ನೋಡುವುದೇ ಒಂದು ಕುತೂಹಲಕರ ಸಂಗತಿ. ಹೊಸ ಹೊಸ ಅವತಾರದಲ್ಲಿ ವಿಭಿನ್ನ ಕಲ್ಪನೆಗಳೊಂದಿಗೆ ಮಂಟಪಕ್ಕೆ ವಧುವರರು ಆಗಮಿಸುತ್ತಾರೆ. ಈ ಹಿಂದೆ ವಧುವರರನ್ನುಉಯ್ಯಾಲೆಯಲ್ಲಿ ಕರೆದುಕೊಂಡು ಬರುವುದು, ಎತ್ತಿನ ಗಾಡಿಲ್ಲಿ ಕರೆತರುವ ಸಾಕಷ್ಟು ವಿಡಿಯೋಗಳು ವೈರಲ್​ ಆಗಿದೆ. ಇದೀಗ ಫರ್ನಿಚರ್​ ಡಿಸೈನರ್​ ಸಭಾ ಕಪೂರ್​ ಅವರು ಅದ್ಭುತವಾಗಿ ನೃತ್ಯ ಮಾಡುವ ಮೂಲಕ ಮದುವೆ ಮನೆಗೆ ಎಂಟ್ರಿ ಕೊಡುವ ವಿಡಿಯೋ ವೈರಲ್​ ಆಗಿದೆ.  ಕಳೆದ ತಿಂಗಳು ನಡೆದ ಮದುವೆಯ ವಿಡಿಯೋ ಈಗ ವೈರಲ್​ ಅಗಿದ್ದು 2 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

ನಿವಾಸ್​ ಎನ್ನುವ ಹೋಮ್​ ಡೆಕೋರೇಟಿವ್​ ಫರ್ನಿಚರ್ ಉದ್ಯಮ ನಡೆಸುತ್ತಿರುವ ಸಬಾ ಕಪೂರ್​ ಮದುವೆಯಲ್ಲಿ, 2016ರಲ್ಲಿ ಬಿಡುಗಡೆಯಾದ ಬಾಲಿವುಡ್​ನ ಬಾರ್​ ಬಾರ್​ ದೇಖೋ ಚಿತ್ರದ ಸೌ ಆಸ್ಮಾನ್ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸಬಾ ಕಪೂರ್​ ಮದುವೆ ಮನೆಯ ಒಳಗೆ ಕಾಲಿಡುತ್ತಿದ್ದಂತೆ ನೃತ್ಯ ಆರಂಭಿಸಿದ್ದು ಅಕ್ಕಪಕ್ಕದಲ್ಲಿ ನಿಂತಿದ್ದ ಸ್ನೇಹಿತರು ಹಾಗೂ ಸಂಬಂಧಿಕರು ಸಾಥ್​ ನೀಡಿದ್ದಾರೆ. ವಿಡಿಯೋದ ಕೊನೆಯಲ್ಲಿ ಒಂದು ಅಚ್ಚರಿ ಕೂಡ ಕಾದಿದೆ.

ವಿಡಿಯೋವನ್ನು YSD ವೆಡ್ಡಿಂಗ್​ ಕೊರಿಯೋಗ್ರಫೀ ತಮ್ಮ ಇನ್ಸ್ಟಾಗ್ರಾಮ್​ ಪುಟದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ತಿಳಿ ಗುಲಾಬಿ ಬಣ್ಣದ ಗೌನ್​ ಧರಿಸಿ ಮಸ್ತ್​ ಸ್ಟೆಪ್​ ಹಾಕಿದ ವಧುವನ್ನು ಕಂಡು ನೆಟ್ಟಿಗರು ವಾವ್​ ಎಂದಿದ್ದಾರೆ. ವಿಡಿಯೋದ ಕೊನೆಯಲ್ಲಿ ವಧು ಡ್ಯಾನ್ಸ್​ ಮಾಡುತ್ತಾ ವರನ ಬಳಿ ಬಂದು ರಿಂಗ್​ ಒಂದನ್ನು ನೀಡುತ್ತಾಳೆ. ಮಂಡಿಯೂರಿ ವಧು ವರನಿಗೆ ಉಂಗುರ ನೀಡಿ ಪ್ರೀತಿಯ ನಿವೇದನೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ 6.7 ಲಕ್ಷ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Photo: ಹಸಿರು ತುಂಬಿದ ತಮಿಳುನಾಡಿನ ರಸ್ತೆಯ ಫೋಟೋವನ್ನು ರೀ ಟ್ವೀಟ್​ ಮಾಡಿದ ಆನಂದ್​ ಮಹೀಂದ್ರಾ

Published On - 11:50 am, Mon, 10 January 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ