AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೇದಿಕೆ ಮೇಲೆ ವಧು-ವರರು ಪರಸ್ಪರ ಹೂ ಮಾಲೆಯನ್ನು ಬದಲಾಯಿಸಿಕೊಳ್ಳಲು ನಿಂತಿರುವುದನ್ನು ಗಮನಿಸಬಹುದು. ಈ ಸಂದರ್ಭದಲ್ಲಿ ವರನ ಸ್ನೇಹಿತರು ವರನನ್ನು ಮೇಲೆ ಎತ್ತಲು ಪ್ರಯತ್ನಿಸಿ ವಧುವನ್ನು ಕಾಡಿಸಲು ಮುಂದಾಗಿದ್ದಾರೆ.

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ
ಮದುವೆ ಮಂಟಪದಲ್ಲಿ ಸ್ನೇಹಿತರ ತುಂಟತನ
TV9 Web
| Edited By: |

Updated on:Dec 14, 2021 | 1:51 PM

Share

ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದು ಇತ್ತೀಚೆಗೆ ಹೊಸ ಟ್ರೆಂಡ್ ಆಗಿದೆ. ವಧು-ವರರನ್ನು ತಮಾಷೆ ಅಥವಾ ಮುಜುಗರಕ್ಕೀಡು ಮಾಡುವ ಅನೇಕ ಸಂದರ್ಭಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತದೆ. ಅದರಲ್ಲೂ ವಿವಾಹ ಎಂದರೆ ವಧು-ವರರ ಸ್ನೇಹಿತರು ತಮ್ಮದೇ ರೀತಿಯಲ್ಲಿ ವಿವಾಹಮಹೋತ್ಸವಕ್ಕೆ ಸಿದ್ಧವಾಗುತ್ತಾರೆ. ವಧು-ವರರನ್ನು ಮೆಚ್ಚಿಸಲು ಅಥವಾ ಅವರ ಕಾಲೆಳೆಯಲು ಸ್ನೇಹಿತರ ಗುಂಪು ಸದಾ ಮುಂದೆ ಇರುತ್ತದೆ. ಹೀಗೆ ಕಾಲೆಳೆಯುವ ಸ್ನೇಹಿತರಿಗೆ ವಧು ನೀಡಿದ ಪ್ರಕ್ರಿಯೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೇದಿಕೆ ಮೇಲೆ ವಧು-ವರರು ಪರಸ್ಪರ ಹೂ ಮಾಲೆಯನ್ನು ಬದಲಾಯಿಸಿಕೊಳ್ಳಲು ನಿಂತಿರುವುದನ್ನು ಗಮನಿಸಬಹುದು. ಈ ಸಂದರ್ಭದಲ್ಲಿ ವರನ ಸ್ನೇಹಿತರು ವರನನ್ನು ಮೇಲೆ ಎತ್ತಲು ಪ್ರಯತ್ನಿಸಿ ವಧುವನ್ನು ಕಾಡಿಸಲು ಮುಂದಾಗಿದ್ದಾರೆ. ಆದರೆ ಇದನ್ನು ಕಂಡ ವಧು ಮಂಟಪದಲ್ಲಿನ ಆಸನದಲ್ಲಿ ಕುಳಿತಿಕೊಳ್ಳುತ್ತಾಳೆ. ಹೀಗಾಗಿ ಸೋತ ಸ್ನೇಹಿತರು ವರನನ್ನು ಕೆಳಗಿಳಿಸಿದ್ದಾರೆ. ಚಾಣಾಕ್ಷತೆಯಿಂದ ವಧು ಹೂ ಮಾಲೆ ಹಾಕಿದ್ದಾಳೆ. ಸದ್ಯ ಈ ತಮಾಷೆಯ ವಿಡಿಯೋ ವೈರಲ್ ಆಗಿದೆ.

ಯುಟ್ಯೂಬ್​ನಲ್ಲಿ ಈ ತಮಾಷೆಯ ವಿಡಿಯೋ ಹಂಚಿಕೊಳ್ಳಾಗಿದ್ದು, ನೆಟ್ಟಿಗರು ಈ ವಿಡಿಯೋವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಕಮೆಂಟ್ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ದೃಶ್ಯ ನಿಜಕ್ಕೂ ತಮಾಷೆಯಾಗಿದೆ. ಇದನ್ನು ನೋಡಿದ ನಂತರ ನನ್ನ ನಗು ತಡೆಯಲಾಗುತ್ತಿಲ್ಲ ಎಂದು ಒಬ್ಬರು ಕಮೆಂಟ್ ಮಾಡಿದರೆ, ಮತ್ತೊಬ್ಬರು ಇದು ಅತ್ಯಂತ ತಮಾಷೆಯ ವಿಡಿಯೋ ಎಂದು ಹೇಳಿದ್ದಾರೆ. ಇನ್ನು ಅನೇಕರು ವಧುವನ್ನು ವಿಭಿನ್ನ ರೀತಿಯಲ್ಲಿ ಹೊಗಳಿದ್ದಾರೆ.

ಇದನ್ನೂ ಓದಿ: Viral Video: ಮದುವೆಗೆ ತಂದ ಕೇಕ್​ ಕಣ್ಣ ಮುಂದೆಯೇ ನೆಲದ ಪಾಲಾಯ್ತು; ವಧು-ವರರ ರಿಯಾಕ್ಷನ್​ ಹೇಗಿತ್ತು ಗೊತ್ತಾ?

Viral Video: ನವಜೋಡಿಗೆ ಸ್ನೇಹಿತರು ನೀಡಿದ ಉಡುಗೊರೆ ಹೇಗಿತ್ತು ಗೊತ್ತಾ? ವೈರಲ್ ಆದ ವಿಡಿಯೋ ನೋಡಿ

Published On - 1:46 pm, Tue, 14 December 21

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು