AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?

ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?
ವಧು
TV9 Web
| Edited By: |

Updated on: Feb 05, 2022 | 2:30 PM

Share

ಮದುವೆಗಳಲ್ಲಿ ವಧುವಿಗೆ (Bride)  ಮೈತುಂಬ ಒಡವೆ. ದುಬಾರಿ ಲೆಹಂಗಾದೊಂದಿಗೆ ಅಲಂಕರಿಸಿರುತ್ತಾರೆ. ಇದರಲ್ಲಿ ಮೂಗುತಿ (Nose Ring), ಜುಮುಕಿ, ಹಲವು ರೀತಿಯ ನೆಕ್ಲೆಸ್​ಗಳು, ಕೈತುಂಬ ಬಳೆ ಹೀಗೆ ಆಭರಣಗಳಿಂದ ಆಕೆಯನ್ನು ಮುಚ್ಚಿರುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಒಡವೆಗಳು ವಧುವಿಗೆ ಕಿರಿಕಿರಿ ಉಂಟುಮಾಡುತ್ತವೆ. ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್​ ಆಗಿದೆ. ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ (Groom) ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

View this post on Instagram

A post shared by TheWeddingWorld (@the_wedding_world)

ವಿಡಿಯೋದಲ್ಲಿ ವಧು ಬಾಯಲ್ಲಿ ನೀರೂರಿಸಿಕೊಂಡು ಗೋಲ್ಗಪ್ಪಾ ತಿನ್ನಲು ಯತ್ನಿಸುತ್ತಾಳೆ. ಆದರೆ ಆಕೆಗೆ ಮೂಗುತಿ ಅಡ್ಡವಾಗುತ್ತದೆ. ಈ ವೇಳೆ ಆಕೆ ವರನ ಕಡೆಗೆ ತಿರುಗುತ್ತಾಳೆ. ಆಗ ವರ ಆಕೆಯ ಮೂಗುತಿಯನ್ನು ಎತ್ತಿ ಹಿಡಿದುಕೊಳ್ಳುತ್ತಾನೆ.  ಆಗ ಆಕೆ ಗೋಲ್ಗಪ್ಪಾವನ್ನು ತಿನ್ನುತ್ತಾಳೆ. ಇದರ ವಿಡಿಯೋ ಗೋಲ್ಗಪ್ಪಾ ವಧು ಎನ್ನುವ ಕ್ಯಾಪ್ಷನ್​ ಮೂಲಕ ಹಂಚಿಕೊಳ್ಳಲಾಗಿದೆ.

ಸದ್ಯ ವಿಡಿಯೋ ನೋಡಿ ನೆಟ್ಟಿಗರು ನಕ್ಕಿದ್ದಾರೆ. ವಧುವಿನ ಗೋಲ್ಗಪ್ಪಾ ಪ್ರೀತಿ ಕಂಡು ಬೆರಗಾಗಿದ್ದಾರೆ. ಈ ವಿಡಿಯೋವನ್ನು ಕಳೆದ ಡಿಸೆಂಬರ್​ನಲ್ಲಿ ಅಭಿಷೇಕ್​ಪ್ರಿಯಾಮೇಕ್​ಓವರ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ದಿ ವೆಡ್ಡಿಂಗ್​ ವರ್ಲ್ಡ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಹಂಚಿಕೊಂಡಿದೆ. ಸದ್ಯ ವಿಡಿಯೋ 23 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಕಾಡಾನೆಯನ್ನು ಕಾರಿನಲ್ಲಿ ಅಡ್ಡಗಟ್ಟಿ, ಓಡಿಸಿಕೊಂಡು ಹೋದ ಟಿಕ್​ಟಾಕರ್; ವಿಡಿಯೋ ನೋಡಿ ಸಿಟ್ಟಿಗೆದ್ದ ನೆಟ್ಟಿಗರು

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ