Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾದ ಸಮಯಕ್ಕೆ ಮಂಟಪಕ್ಕೆ ಬಾರದ ಮದುಮಗ; ಬೇರೆ ಯುವಕನೊಂದಿಗೆ ವಧುವಿನ ಮದುವೆ!

"ವರ ಕುಡಿದು 4 ಗಂಟೆಗೆ ಬದಲಾಗಿ ರಾತ್ರಿ 8 ಗಂಟೆಗೆ ಮಂಟಪಕ್ಕೆ ಬಂದು ಜಗಳವಾಡಲು ಪ್ರಾರಂಭಿಸಿದ. ಹೀಗಾಗಿ, ಆತನಿಗೆ ಮದುವೆ ಮಾಡಿಕೊಡಲು ಇಷ್ಟವಿಲ್ಲದೆ ನಮ್ಮ ಮಗಳನ್ನು ನಮ್ಮ ಸಂಬಂಧಿಕರೊಂದಿಗೆ ಮದುವೆ ಮಾಡಿದ್ದೇವೆ" ಎಂದು ವಧುವಿನ ತಾಯಿ ಹೇಳಿದ್ದಾರೆ.

ಸರಿಯಾದ ಸಮಯಕ್ಕೆ ಮಂಟಪಕ್ಕೆ ಬಾರದ ಮದುಮಗ; ಬೇರೆ ಯುವಕನೊಂದಿಗೆ ವಧುವಿನ ಮದುವೆ!
ಮಂಟಪದಲ್ಲಿ ಬೇರೆ ಯುವಕನನ್ನು ಮದುವೆಯಾದ ವಧು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 28, 2022 | 9:58 PM

ಮುಂಬೈ: ಮದುವೆಯಲ್ಲಿ ವಿಚಿತ್ರವಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ರೀತಿಯ ವಿಚಿತ್ರವಾದ ಘಟನೆಗಳು ಕೆಲವೊಮ್ಮೆ ಜೀವನವನ್ನೇ ಬದಲಾಯಿಸುತ್ತದೆ. ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ಮದುವೆಯಾಗಬೇಕಿದ್ದ ವಧುವಿನ ತಂದೆ ತನ್ನ ಮಗಳನ್ನು ವರನ ಬದಲಿಗೆ ಬೇರೆ ಯುವಕನಿಗೆ ಮದುವೆ ಮಾಡಿಸಿದ್ದಾರೆ. ಕುಡುಕನಾಗಿದ್ದ ವರ ಸರಿಯಾದ ಸಮಯಕ್ಕೆ ಮದುವೆ ನಡೆಯುವ ಸ್ಥಳಕ್ಕೆ ತಲುಪದ ಕಾರಣ ಅದೇ ಮದುವೆಗೆ ಬಂದಿದ್ದ ಸಂಬಂಧಿಕರೊಬ್ಬರ ಮನೆಯ ಯುವಕನೊಂದಿಗೆ ಆ ವಧುವಿಗೆ ಮದುವೆ ಮಾಡಿಸಲಾಗಿದೆ.

ಏಪ್ರಿಲ್ 22ರಂದು ಬುಲ್ಧಾನಾ ಜಿಲ್ಲೆಯ ಮಲ್ಕಾಪುರ್ ಪಾಂಗ್ರಾ ಗ್ರಾಮದಲ್ಲಿ ವಿವಾಹ ನಡೆಯಬೇಕಿತ್ತು. ಮದುವೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಸಂಜೆ 4 ಗಂಟೆಗೆ ಮದುವೆ ಸಮಾರಂಭಕ್ಕೆ ಶುಭ ಮುಹೂರ್ತ ಇಡಲಾಗಿತ್ತು. ವಧು ಮತ್ತು ಆಕೆಯ ಕುಟುಂಬದವರು ವರ ಮದುವೆಯ ಸ್ಥಳಕ್ಕೆ ಬರುತ್ತಾನೆ ಎಂದು ಕಾಯುತ್ತಿದ್ದರು. ಆದರೆ ಅವರು ಸಂಜೆ 8 ಗಂಟೆಯಾದರೂ ಮಂಟಪಕ್ಕೆ ಬಂದಿರಲಿಲ್ಲ. ವರ ಮತ್ತು ಆತನ ಸ್ನೇಹಿತರು ಮದುವೆ ಮಂಟಪಕ್ಕೆ ಬರುವುದನ್ನು ಬಿಟ್ಟು ಕುಣಿದು ಕುಪ್ಪಳಿಸುತ್ತಿದ್ದರು ಎನ್ನಲಾಗಿದೆ.

“ವರ ಮತ್ತು ಅವರ ಸ್ನೇಹಿತರು ಕುಡಿದು 4 ಗಂಟೆಗೆ ಬದಲಾಗಿ ರಾತ್ರಿ 8 ಗಂಟೆಗೆ ಮಂಟಪಕ್ಕೆ ಬಂದು ಜಗಳವಾಡಲು ಪ್ರಾರಂಭಿಸಿದರು. ಹೀಗಾಗಿ, ಆತನಿಗೆ ಮದುವೆ ಮಾಡಿಕೊಡಲು ಇಷ್ಟವಿಲ್ಲದೆ ನಾವು ನಮ್ಮ ಮಗಳನ್ನು ನಮ್ಮ ಸಂಬಂಧಿಕರೊಬ್ಬರೊಂದಿಗೆ ಮದುವೆ ಮಾಡಿದ್ದೇವೆ” ಎಂದು ವಧುವಿನ ತಾಯಿ ಹೇಳಿದ್ದಾರೆ.

ವರನು ಮಂಟಪಕ್ಕೆ ಬಂದಾಗ, ವಧುವಿನ ತಂದೆ ತನ್ನ ಮಗಳನ್ನು ಆತನಿಗೆ ಮದುವೆ ಮಾಡಿಕೊಡಲು ನಿರಾಕರಿಸಿದರು. ಮದುವೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದರಿಂದ, ವಧುವಿನ ತಂದೆ ನಂತರ ಮದುವೆಗೆ ಬಂದಿದ್ದ ಸಂಬಂಧಿಕರನ್ನು ಸಂಪರ್ಕಿಸಿ ಮತ್ತು ನಂತರ ತನ್ನ ಮಗಳನ್ನು ಆತನಿಗೆ ಮದುವೆ ಮಾಡಿದರು.

ಇದನ್ನೂ ಓದಿ: Viral News: 23 ಲಕ್ಷ ಕೊಟ್ಟು ಅಪರೂಪದ ಕುದುರೆ ಖರೀದಿಸಿದ ವ್ಯಾಪಾರಿ; ಸ್ನಾನ ಮಾಡಿಸಿದಾಗ ಬಯಲಾಯ್ತು ಅಸಲಿ ಸತ್ಯ!

Viral News: ಕೈದಿಯ ಹೆಂಡತಿ ಗರ್ಭಿಣಿಯಾಗಲೆಂದು ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ 15 ದಿನಗಳ ಪೆರೋಲ್!

Published On - 9:46 pm, Thu, 28 April 22

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ