AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್

Elephant : ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆಯಾ? ಮುಟ್ಟಿ ಮುಟ್ಟಿ ನೋಡುತ್ತದೆ ಆನೆ. ಹಾಗಿದ್ದರೆ ಹೇಗೆ ಈ ಬೇಲಿಯನ್ನು ದಾಟುವುದು? ನೋಡಿ ಆನೆ ಏನು ಉಪಾಯ ಮಾಡುತ್ತದೆ...

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್
ಎಲೆಕ್ಟ್ರಿಕ್​ ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿರುವ ಆನೆ
TV9 Web
| Updated By: ಶ್ರೀದೇವಿ ಕಳಸದ|

Updated on: Dec 06, 2022 | 12:45 PM

Share

Viral Video : ಆನೆ ನಾಡಿಗೆ ಬಂದಿತು, ಆನೆ ದಾಳಿ ಮಾಡಿತು ಎನ್ನುತ್ತೇವೆ. ಆದರೆ ಆನೆಗೇನು ನಾಡಿಗೆ ಬರಬೇಕೆಂಬ ಖಯಾಲಿ ಇರುವುದಿಲ್ಲ. ಅದು ಓಡಾಡು ಜಾಗವನ್ನೇ ನಾವು ಆಕ್ರಮಿಸಿಕೊಂಡಿರುವುದು. ಆನೆಯ ದಾರಿಯಲ್ಲಿ ರಸ್ತೆಗಳನ್ನು, ಊರುಗಳನ್ನು ಅಭಿವೃದ್ಧಿಪಡಿಸಿದರೆ ಅದು ಎಲ್ಲಿ ಓಡಾಡಿಕೊಂಡಿರಬೇಕು? ಅದರಲ್ಲಿಯೂ ಬೇಲಿ ಹಾಕಿದರೆ ಅದೇನು ಮಾಡಬೇಕು? ಏನು ಮಾಡಬೇಕೋ ಅದನ್ನೇ ಮಾಡುತ್ತದೆ. ಈ ವಿಡಿಯೋದಲ್ಲಿ ಹಾಕಿರುವ ಬೇಲಿ ಎಲೆಕ್ಟ್ರಿಕ್.  ಆದರೆ ಆನೆಯ ಓಡಾಡುವ ಜಾಗವನ್ನು ಮಾನವ ಆಕ್ರಮಿಸಿಕೊಂಡಾಗ ಅದೇನು ಮಾಡಬೇಕು? ಜಾಣ ಆನೆ ಆ ಬೇಲಿಯನ್ನು ಮುರಿದು ತನ್ನ ದಾರಿಯಲ್ಲಿ ಸಾಗುತ್ತದೆ. ನೋಡಿ ಈ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದೆ.

ನೋಡಿ ಹೇಗೆ ಕಾಲಿನಿಂದ ವಿದ್ಯುತ್​ ತಂತಿಯನ್ನು ಮುಟ್ಟಿಮುಟ್ಟಿ ಪರೀಕ್ಷಿಸುತ್ತದೆ. ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆ ಎನ್ನುವ ಅರಿವಿನೊಂದಿಗೆ ಕಟ್ಟಿಗೆಯ ಕಂಬವನ್ನು ಒದ್ದು ಬೇಲಿಯನ್ನು ಮುರಿಯುತ್ತದೆ. ನಂತರ ಆರಾಮಾಗಿ ರಸ್ತೆ ದಾಟಿಕೊಂಡು ಹೋಗುತ್ತದೆ. ಈ ವಿಡಿಯೋ ಚಿತ್ರೀಕರಿಸಿದ್ದು 2019ರಲ್ಲಿ. ಇದೀಗ ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಹಂಚಿಕೊಂಡಿದ್ದಾರೆ. ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಅಚ್ಚರಿಯಿಂದ ನೋಡುತ್ತಿದ್ದಾರೆ. ಈತನಕ 76,000 ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮನುಷ್ಯ ಭೂಮಿಯ ಇಂಚಿಂಚನ್ನೂ ಆವರಿಸಿಕೊಳ್ಳುತ್ತಿರುವಾಗ ಆನೆಗಳು ಬುದ್ದಿವಂತಿಕೆ ಉಪಯೋಗಿಸಲೇಬೇಕಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?