AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್

Elephant : ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆಯಾ? ಮುಟ್ಟಿ ಮುಟ್ಟಿ ನೋಡುತ್ತದೆ ಆನೆ. ಹಾಗಿದ್ದರೆ ಹೇಗೆ ಈ ಬೇಲಿಯನ್ನು ದಾಟುವುದು? ನೋಡಿ ಆನೆ ಏನು ಉಪಾಯ ಮಾಡುತ್ತದೆ...

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್
ಎಲೆಕ್ಟ್ರಿಕ್​ ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿರುವ ಆನೆ
TV9 Web
| Edited By: ಶ್ರೀದೇವಿ ಕಳಸದ|

Updated on: Dec 06, 2022 | 12:45 PM

Share

Viral Video : ಆನೆ ನಾಡಿಗೆ ಬಂದಿತು, ಆನೆ ದಾಳಿ ಮಾಡಿತು ಎನ್ನುತ್ತೇವೆ. ಆದರೆ ಆನೆಗೇನು ನಾಡಿಗೆ ಬರಬೇಕೆಂಬ ಖಯಾಲಿ ಇರುವುದಿಲ್ಲ. ಅದು ಓಡಾಡು ಜಾಗವನ್ನೇ ನಾವು ಆಕ್ರಮಿಸಿಕೊಂಡಿರುವುದು. ಆನೆಯ ದಾರಿಯಲ್ಲಿ ರಸ್ತೆಗಳನ್ನು, ಊರುಗಳನ್ನು ಅಭಿವೃದ್ಧಿಪಡಿಸಿದರೆ ಅದು ಎಲ್ಲಿ ಓಡಾಡಿಕೊಂಡಿರಬೇಕು? ಅದರಲ್ಲಿಯೂ ಬೇಲಿ ಹಾಕಿದರೆ ಅದೇನು ಮಾಡಬೇಕು? ಏನು ಮಾಡಬೇಕೋ ಅದನ್ನೇ ಮಾಡುತ್ತದೆ. ಈ ವಿಡಿಯೋದಲ್ಲಿ ಹಾಕಿರುವ ಬೇಲಿ ಎಲೆಕ್ಟ್ರಿಕ್.  ಆದರೆ ಆನೆಯ ಓಡಾಡುವ ಜಾಗವನ್ನು ಮಾನವ ಆಕ್ರಮಿಸಿಕೊಂಡಾಗ ಅದೇನು ಮಾಡಬೇಕು? ಜಾಣ ಆನೆ ಆ ಬೇಲಿಯನ್ನು ಮುರಿದು ತನ್ನ ದಾರಿಯಲ್ಲಿ ಸಾಗುತ್ತದೆ. ನೋಡಿ ಈ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದೆ.

ನೋಡಿ ಹೇಗೆ ಕಾಲಿನಿಂದ ವಿದ್ಯುತ್​ ತಂತಿಯನ್ನು ಮುಟ್ಟಿಮುಟ್ಟಿ ಪರೀಕ್ಷಿಸುತ್ತದೆ. ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆ ಎನ್ನುವ ಅರಿವಿನೊಂದಿಗೆ ಕಟ್ಟಿಗೆಯ ಕಂಬವನ್ನು ಒದ್ದು ಬೇಲಿಯನ್ನು ಮುರಿಯುತ್ತದೆ. ನಂತರ ಆರಾಮಾಗಿ ರಸ್ತೆ ದಾಟಿಕೊಂಡು ಹೋಗುತ್ತದೆ. ಈ ವಿಡಿಯೋ ಚಿತ್ರೀಕರಿಸಿದ್ದು 2019ರಲ್ಲಿ. ಇದೀಗ ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಹಂಚಿಕೊಂಡಿದ್ದಾರೆ. ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಅಚ್ಚರಿಯಿಂದ ನೋಡುತ್ತಿದ್ದಾರೆ. ಈತನಕ 76,000 ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮನುಷ್ಯ ಭೂಮಿಯ ಇಂಚಿಂಚನ್ನೂ ಆವರಿಸಿಕೊಳ್ಳುತ್ತಿರುವಾಗ ಆನೆಗಳು ಬುದ್ದಿವಂತಿಕೆ ಉಪಯೋಗಿಸಲೇಬೇಕಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ