AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್

Elephant : ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆಯಾ? ಮುಟ್ಟಿ ಮುಟ್ಟಿ ನೋಡುತ್ತದೆ ಆನೆ. ಹಾಗಿದ್ದರೆ ಹೇಗೆ ಈ ಬೇಲಿಯನ್ನು ದಾಟುವುದು? ನೋಡಿ ಆನೆ ಏನು ಉಪಾಯ ಮಾಡುತ್ತದೆ...

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್
ಎಲೆಕ್ಟ್ರಿಕ್​ ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿರುವ ಆನೆ
TV9 Web
| Edited By: |

Updated on: Dec 06, 2022 | 12:45 PM

Share

Viral Video : ಆನೆ ನಾಡಿಗೆ ಬಂದಿತು, ಆನೆ ದಾಳಿ ಮಾಡಿತು ಎನ್ನುತ್ತೇವೆ. ಆದರೆ ಆನೆಗೇನು ನಾಡಿಗೆ ಬರಬೇಕೆಂಬ ಖಯಾಲಿ ಇರುವುದಿಲ್ಲ. ಅದು ಓಡಾಡು ಜಾಗವನ್ನೇ ನಾವು ಆಕ್ರಮಿಸಿಕೊಂಡಿರುವುದು. ಆನೆಯ ದಾರಿಯಲ್ಲಿ ರಸ್ತೆಗಳನ್ನು, ಊರುಗಳನ್ನು ಅಭಿವೃದ್ಧಿಪಡಿಸಿದರೆ ಅದು ಎಲ್ಲಿ ಓಡಾಡಿಕೊಂಡಿರಬೇಕು? ಅದರಲ್ಲಿಯೂ ಬೇಲಿ ಹಾಕಿದರೆ ಅದೇನು ಮಾಡಬೇಕು? ಏನು ಮಾಡಬೇಕೋ ಅದನ್ನೇ ಮಾಡುತ್ತದೆ. ಈ ವಿಡಿಯೋದಲ್ಲಿ ಹಾಕಿರುವ ಬೇಲಿ ಎಲೆಕ್ಟ್ರಿಕ್.  ಆದರೆ ಆನೆಯ ಓಡಾಡುವ ಜಾಗವನ್ನು ಮಾನವ ಆಕ್ರಮಿಸಿಕೊಂಡಾಗ ಅದೇನು ಮಾಡಬೇಕು? ಜಾಣ ಆನೆ ಆ ಬೇಲಿಯನ್ನು ಮುರಿದು ತನ್ನ ದಾರಿಯಲ್ಲಿ ಸಾಗುತ್ತದೆ. ನೋಡಿ ಈ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದೆ.

ನೋಡಿ ಹೇಗೆ ಕಾಲಿನಿಂದ ವಿದ್ಯುತ್​ ತಂತಿಯನ್ನು ಮುಟ್ಟಿಮುಟ್ಟಿ ಪರೀಕ್ಷಿಸುತ್ತದೆ. ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆ ಎನ್ನುವ ಅರಿವಿನೊಂದಿಗೆ ಕಟ್ಟಿಗೆಯ ಕಂಬವನ್ನು ಒದ್ದು ಬೇಲಿಯನ್ನು ಮುರಿಯುತ್ತದೆ. ನಂತರ ಆರಾಮಾಗಿ ರಸ್ತೆ ದಾಟಿಕೊಂಡು ಹೋಗುತ್ತದೆ. ಈ ವಿಡಿಯೋ ಚಿತ್ರೀಕರಿಸಿದ್ದು 2019ರಲ್ಲಿ. ಇದೀಗ ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಹಂಚಿಕೊಂಡಿದ್ದಾರೆ. ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಅಚ್ಚರಿಯಿಂದ ನೋಡುತ್ತಿದ್ದಾರೆ. ಈತನಕ 76,000 ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮನುಷ್ಯ ಭೂಮಿಯ ಇಂಚಿಂಚನ್ನೂ ಆವರಿಸಿಕೊಳ್ಳುತ್ತಿರುವಾಗ ಆನೆಗಳು ಬುದ್ದಿವಂತಿಕೆ ಉಪಯೋಗಿಸಲೇಬೇಕಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ