AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್

Elephant : ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆಯಾ? ಮುಟ್ಟಿ ಮುಟ್ಟಿ ನೋಡುತ್ತದೆ ಆನೆ. ಹಾಗಿದ್ದರೆ ಹೇಗೆ ಈ ಬೇಲಿಯನ್ನು ದಾಟುವುದು? ನೋಡಿ ಆನೆ ಏನು ಉಪಾಯ ಮಾಡುತ್ತದೆ...

ಚತುರ ಆನೆ! ವಿದ್ಯುತ್ ತಂತಿ ಬೇಲಿಯನ್ನು ಮುರಿದು ರಸ್ತೆ ದಾಟಿದ ಹಳೆಯ ವಿಡಿಯೋ ವೈರಲ್
ಎಲೆಕ್ಟ್ರಿಕ್​ ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿರುವ ಆನೆ
TV9 Web
| Edited By: |

Updated on: Dec 06, 2022 | 12:45 PM

Share

Viral Video : ಆನೆ ನಾಡಿಗೆ ಬಂದಿತು, ಆನೆ ದಾಳಿ ಮಾಡಿತು ಎನ್ನುತ್ತೇವೆ. ಆದರೆ ಆನೆಗೇನು ನಾಡಿಗೆ ಬರಬೇಕೆಂಬ ಖಯಾಲಿ ಇರುವುದಿಲ್ಲ. ಅದು ಓಡಾಡು ಜಾಗವನ್ನೇ ನಾವು ಆಕ್ರಮಿಸಿಕೊಂಡಿರುವುದು. ಆನೆಯ ದಾರಿಯಲ್ಲಿ ರಸ್ತೆಗಳನ್ನು, ಊರುಗಳನ್ನು ಅಭಿವೃದ್ಧಿಪಡಿಸಿದರೆ ಅದು ಎಲ್ಲಿ ಓಡಾಡಿಕೊಂಡಿರಬೇಕು? ಅದರಲ್ಲಿಯೂ ಬೇಲಿ ಹಾಕಿದರೆ ಅದೇನು ಮಾಡಬೇಕು? ಏನು ಮಾಡಬೇಕೋ ಅದನ್ನೇ ಮಾಡುತ್ತದೆ. ಈ ವಿಡಿಯೋದಲ್ಲಿ ಹಾಕಿರುವ ಬೇಲಿ ಎಲೆಕ್ಟ್ರಿಕ್.  ಆದರೆ ಆನೆಯ ಓಡಾಡುವ ಜಾಗವನ್ನು ಮಾನವ ಆಕ್ರಮಿಸಿಕೊಂಡಾಗ ಅದೇನು ಮಾಡಬೇಕು? ಜಾಣ ಆನೆ ಆ ಬೇಲಿಯನ್ನು ಮುರಿದು ತನ್ನ ದಾರಿಯಲ್ಲಿ ಸಾಗುತ್ತದೆ. ನೋಡಿ ಈ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದೆ.

ನೋಡಿ ಹೇಗೆ ಕಾಲಿನಿಂದ ವಿದ್ಯುತ್​ ತಂತಿಯನ್ನು ಮುಟ್ಟಿಮುಟ್ಟಿ ಪರೀಕ್ಷಿಸುತ್ತದೆ. ತಂತಿಯನ್ನು ಮುಟ್ಟಿದರೆ ವಿದ್ಯುತ್​ ಶಾಕ್​ ಹೊಡೆಯುತ್ತದೆ ಎನ್ನುವ ಅರಿವಿನೊಂದಿಗೆ ಕಟ್ಟಿಗೆಯ ಕಂಬವನ್ನು ಒದ್ದು ಬೇಲಿಯನ್ನು ಮುರಿಯುತ್ತದೆ. ನಂತರ ಆರಾಮಾಗಿ ರಸ್ತೆ ದಾಟಿಕೊಂಡು ಹೋಗುತ್ತದೆ. ಈ ವಿಡಿಯೋ ಚಿತ್ರೀಕರಿಸಿದ್ದು 2019ರಲ್ಲಿ. ಇದೀಗ ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಹಂಚಿಕೊಂಡಿದ್ದಾರೆ. ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಅಚ್ಚರಿಯಿಂದ ನೋಡುತ್ತಿದ್ದಾರೆ. ಈತನಕ 76,000 ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮನುಷ್ಯ ಭೂಮಿಯ ಇಂಚಿಂಚನ್ನೂ ಆವರಿಸಿಕೊಳ್ಳುತ್ತಿರುವಾಗ ಆನೆಗಳು ಬುದ್ದಿವಂತಿಕೆ ಉಪಯೋಗಿಸಲೇಬೇಕಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ