AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಕೊಟ್ಟ ಅಚ್ಚರಿ; ಸ್ಕೂಟಿ ನೋಡಿ ಹನಿಗಣ್ಣಾದ ತಂಗಿ

Brother Sister Love : ಅಣ್ಣ ಪುಟ್ಟ ಡಬ್ಬಿಯನ್ನು ಕೊಡುತ್ತಾನೆ. ತಂಗಿ ತೆರೆದು ನೋಡಿದಾಗ ಸ್ಕೂಟಿಯ ಚಾವೀ ಇರುತ್ತದೆ. ಅಚ್ಚರಿಯಿಂದ ಅವಳಿಗೆ ದುಃಖ ಉಮ್ಮಳಿಸಿ ಬರುತ್ತದೆ. ನೋಡಿ ಈ ಹೃದಯಸ್ಪರ್ಶಿ ವಿಡಿಯೋ.

ಅಣ್ಣ ಕೊಟ್ಟ ಅಚ್ಚರಿ; ಸ್ಕೂಟಿ ನೋಡಿ ಹನಿಗಣ್ಣಾದ ತಂಗಿ
Brother surprises sister with scooty
TV9 Web
| Edited By: ಶ್ರೀದೇವಿ ಕಳಸದ|

Updated on:Nov 10, 2022 | 7:56 PM

Share

Viral Video : ಬಾಂಧವ್ಯ ಚೆನ್ನಾಗಿರಬೇಕೆಂದರೆ ಆಗಾಗ ಖುಷಿ ಉಂಟುಮಾಡುವ ಉಪಾಯಗಳನ್ನು ಹೂಡುತ್ತಿರಬೇಕು. ಅದು ಯಾವ ಸಂಬಂಧವೇ ಆಗಿರಲಿ, ಅವರ ಮನಸ್ಸಿನಲ್ಲಿ ಏನಿದೆ ಏನು ಬೇಕು ಎನ್ನುವುದನ್ನು ತಿಳಿದುಕೊಂಡು ಅದನ್ನು ಒದಗಿಸುವುದು ಒಂದು ರೀತಿಯ ಪ್ರೀತಿಯೇ. ಈಗಿಲ್ಲಿ ಅಣ್ಣನೊಬ್ಬ ತಂಗಿಗೆ ಸ್ಕೂಟಿ ಕೊಡಿಸಿ ಅಚ್ಚರಿಗೆ ಬೀಳಿಸಿದ್ದಾನೆ. ಆ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಐಶ್ವರ್ಯ ಭದಾಣೆ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಇದನ್ನು ಪೋಸ್ಟ್​ ಮಾಡಿದ್ದಾರೆ. ನೆಟ್ಟಿಗರು, ಇದ್ದರೆ ಇಂಥ ಅಣ್ಣನಿರಬೇಕು ಎಂದು ಪ್ರಶಂಸಿಸುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಇಂಥ ಅಣ್ಣನಿದ್ದರೆ ಬದುಕು ಸಮೃದ್ಧವಾಗಿರುತ್ತದೆ ಎಂದು ನೆಟ್ಟಿಗರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಹೌದು ತಾನೆ? ಅಣ್ಣ ಕೊಟ್ಟ ಪುಟ್ಟ ಡಬ್ಬಿಯನ್ನು ತಂಗಿ ತೆರೆದು ನೋಡುತ್ತಾಳೆ. ಆಗ ಸ್ಕೂಟಿಯ ಕೀ ಅದರಲ್ಲಿ ಇರುತ್ತದೆ. ಪಕ್ಕದಲ್ಲಿದ್ದ ಸ್ಕೂಟಿ ನೋಡಿ ಆನಂದಭಾಷ್ಪ ಸುರಿಸುತ್ತಾಳೆ. ಈ ವಿಡಿಯೋ ಈಗಾಗಲೇ 9 ಮಿಲಿಯನ್​ ಜನರನ್ನು ತಲುಪಿದೆ. 1 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ನನಗೂ ಇಂಥ ಅಣ್ಣನೊಬ್ಬ ಇದ್ದಿದ್ದರೆ ಎಂದು ಒಬ್ಬರು ಬೇಸರಿಸಿಕೊಂಡಿದ್ದಾರೆ. ಅಯ್ಯೋ ನನಗೆ ತಂಗಿ ಇಲ್ಲವಲ್ಲ, ನನಗೂ ಹೀಗೆಲ್ಲ ಪ್ರೀತಿಸಬೇಕು ಎನ್ನಿಸುತ್ತದೆ ಎಂದು ಇನ್ನೊಬ್ಬರು ಬೇಸರಿಸಿಕೊಂಡಿದ್ದಾರೆ. ನೀವಿಬ್ಬರೂ ಸುಖವಾಗಿರಿ ಎಂದು ಮಗದೊಬ್ಬರು ಹಾರೈಸಿದ್ದಾರೆ.

ಏನನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 7:56 pm, Thu, 10 November 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ