AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಕೊಟ್ಟ ಅಚ್ಚರಿ; ಸ್ಕೂಟಿ ನೋಡಿ ಹನಿಗಣ್ಣಾದ ತಂಗಿ

Brother Sister Love : ಅಣ್ಣ ಪುಟ್ಟ ಡಬ್ಬಿಯನ್ನು ಕೊಡುತ್ತಾನೆ. ತಂಗಿ ತೆರೆದು ನೋಡಿದಾಗ ಸ್ಕೂಟಿಯ ಚಾವೀ ಇರುತ್ತದೆ. ಅಚ್ಚರಿಯಿಂದ ಅವಳಿಗೆ ದುಃಖ ಉಮ್ಮಳಿಸಿ ಬರುತ್ತದೆ. ನೋಡಿ ಈ ಹೃದಯಸ್ಪರ್ಶಿ ವಿಡಿಯೋ.

ಅಣ್ಣ ಕೊಟ್ಟ ಅಚ್ಚರಿ; ಸ್ಕೂಟಿ ನೋಡಿ ಹನಿಗಣ್ಣಾದ ತಂಗಿ
Brother surprises sister with scooty
TV9 Web
| Edited By: |

Updated on:Nov 10, 2022 | 7:56 PM

Share

Viral Video : ಬಾಂಧವ್ಯ ಚೆನ್ನಾಗಿರಬೇಕೆಂದರೆ ಆಗಾಗ ಖುಷಿ ಉಂಟುಮಾಡುವ ಉಪಾಯಗಳನ್ನು ಹೂಡುತ್ತಿರಬೇಕು. ಅದು ಯಾವ ಸಂಬಂಧವೇ ಆಗಿರಲಿ, ಅವರ ಮನಸ್ಸಿನಲ್ಲಿ ಏನಿದೆ ಏನು ಬೇಕು ಎನ್ನುವುದನ್ನು ತಿಳಿದುಕೊಂಡು ಅದನ್ನು ಒದಗಿಸುವುದು ಒಂದು ರೀತಿಯ ಪ್ರೀತಿಯೇ. ಈಗಿಲ್ಲಿ ಅಣ್ಣನೊಬ್ಬ ತಂಗಿಗೆ ಸ್ಕೂಟಿ ಕೊಡಿಸಿ ಅಚ್ಚರಿಗೆ ಬೀಳಿಸಿದ್ದಾನೆ. ಆ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಐಶ್ವರ್ಯ ಭದಾಣೆ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಇದನ್ನು ಪೋಸ್ಟ್​ ಮಾಡಿದ್ದಾರೆ. ನೆಟ್ಟಿಗರು, ಇದ್ದರೆ ಇಂಥ ಅಣ್ಣನಿರಬೇಕು ಎಂದು ಪ್ರಶಂಸಿಸುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಇಂಥ ಅಣ್ಣನಿದ್ದರೆ ಬದುಕು ಸಮೃದ್ಧವಾಗಿರುತ್ತದೆ ಎಂದು ನೆಟ್ಟಿಗರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಹೌದು ತಾನೆ? ಅಣ್ಣ ಕೊಟ್ಟ ಪುಟ್ಟ ಡಬ್ಬಿಯನ್ನು ತಂಗಿ ತೆರೆದು ನೋಡುತ್ತಾಳೆ. ಆಗ ಸ್ಕೂಟಿಯ ಕೀ ಅದರಲ್ಲಿ ಇರುತ್ತದೆ. ಪಕ್ಕದಲ್ಲಿದ್ದ ಸ್ಕೂಟಿ ನೋಡಿ ಆನಂದಭಾಷ್ಪ ಸುರಿಸುತ್ತಾಳೆ. ಈ ವಿಡಿಯೋ ಈಗಾಗಲೇ 9 ಮಿಲಿಯನ್​ ಜನರನ್ನು ತಲುಪಿದೆ. 1 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ನನಗೂ ಇಂಥ ಅಣ್ಣನೊಬ್ಬ ಇದ್ದಿದ್ದರೆ ಎಂದು ಒಬ್ಬರು ಬೇಸರಿಸಿಕೊಂಡಿದ್ದಾರೆ. ಅಯ್ಯೋ ನನಗೆ ತಂಗಿ ಇಲ್ಲವಲ್ಲ, ನನಗೂ ಹೀಗೆಲ್ಲ ಪ್ರೀತಿಸಬೇಕು ಎನ್ನಿಸುತ್ತದೆ ಎಂದು ಇನ್ನೊಬ್ಬರು ಬೇಸರಿಸಿಕೊಂಡಿದ್ದಾರೆ. ನೀವಿಬ್ಬರೂ ಸುಖವಾಗಿರಿ ಎಂದು ಮಗದೊಬ್ಬರು ಹಾರೈಸಿದ್ದಾರೆ.

ಏನನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 7:56 pm, Thu, 10 November 22

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ