AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

74 ವರ್ಷಗಳ ಬಳಿಕ ಮತ್ತೆ ಒಂದಾದ ಸಹೋದರರು: ವಿಡಿಯೋ ವೈರಲ್​

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ 1947ರಲ್ಲಿ ಪಾಕಿಸ್ತಾನ ಮತ್ತು ಮತ್ತು ಭಾರತ ವಿಭಜನೆಯಾಗಿತ್ತು ಈ ವೇಳೆ ಬೇರೆಯಾದ ಸಹೋದರರಿಬ್ಬರು ಇದೀಗ ಮತ್ತೆ ಒಂದಾಗಿದ್ದಾರೆ.

74  ವರ್ಷಗಳ ಬಳಿಕ ಮತ್ತೆ ಒಂದಾದ ಸಹೋದರರು: ವಿಡಿಯೋ ವೈರಲ್​
ಮೊಹಮದ್​​ ಸಿದ್ದಿಕಿ ಮತ್ತು ಹಬೀಬ್​
TV9 Web
| Edited By: |

Updated on: Jan 13, 2022 | 10:37 AM

Share

74 ವರ್ಷಗಳ ಬಳಿಕ ಸಹೋದರರಿಬ್ಬರು ಭೇಟಿಯಾದ ಅಪರೂಪದ ಘಟನೆ ನಡೆದಿದೆ. ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಹೃದಯಸ್ಪರ್ಶಿ ಕ್ಷಣ ನೋಡಿ ನೆಟ್ಟಿಗರು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ 1947ರಲ್ಲಿ ಪಾಕಿಸ್ತಾನ ಮತ್ತು ಮತ್ತು ಭಾರತ ವಿಭಜನೆಯಾಗಿತ್ತು ಈ ವೇಳೆ ಬೇರೆಯಾದ ಸಹೋದರರಿಬ್ಬರು ಇದೀಗ ಮತ್ತೆ ಒಂದಾಗಿದ್ದಾರೆ. ಮೊಹಮದ್​​ ಸಿದ್ದಿಕಿ ಮತ್ತು ಹಬೀಬ್​ ಎನ್ನುವ ಸಹೋದರರು ಬೇರೆ ಬೇರೆಯಾಗಿ ಒಬ್ಬರು ಪಾಕಿಸ್ತಾನದಲ್ಲಿ ಇನ್ನೊಬ್ಬರು ಭಾರತದಲ್ಲಿ ವಾಸಿಸುತ್ತಿದ್ದರು. ಇದೀಗ ಇಬ್ಬರೂ ಒಂದಾಗಿದ್ದಾರೆ.

ವಿಡಿಯೋದಲ್ಲಿ 74 ವರ್ಷಗಳ ಬಳಿಕ ಮೊಹಮ್ಮದ್​ ಮತ್ತು ಹಬೀಬ್​  ಭೇಟಿಯಾದ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಂಡು, ಖುಷಿಯಲ್ಲಿ ಕಣ್ಣಾಲಿಗಳು ಒದ್ದೆಯಾದ ದೃಶ್ಯವನ್ನು ಕಾಣಬಹುದು. 1947ರಲ್ಲಿ ಭಾರತ ವಿಭಜನೆಯಾದಾಗ ಚಿಕ್ಕ ಮಗುವಾಗಿದ್ದ ಮೊಮ್ಮದ್​ ಸಿದ್ದಿಕಿ ಭಾರತದಿಂದ ದೂರವಾಗಿ ಪಾಕಿಸ್ತಾನದ ಫೈಸ್ಲಾಬಾದ್​ನಲ್ಲಿ ವಾಸಿಸುತ್ತಿದ್ದರು. ಹಬೀಬ್ ಅಲಿಯಾಸ್​ ಶೇಲಾ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತದ ಭೂಮಿಯಲ್ಲಿ ವಾಸಿಸುತ್ತಿದ್ದರು. ಇದೀಗ ಕರ್ತಾರ್‌ಪುರ ಕಾರಿಡಾರ್​ನಲ್ಲಿ ಇಬ್ಬರೂ ಒಂದಾಗಿದ್ದಾರೆ. ಕರ್ತಾರ್‌ಪುರ ಕಾರಿಡಾರ್ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಭಾರತಕ್ಕೆ ಸಂಪರ್ಕಿಸುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ನೆಟ್ಟಿಗರ ಮನಗೆದ್ದದೆ. ವಿಡಿಯೋ ಟ್ವಿಟರ್​ನಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು, ಬಳಕೆದಾರರು ತಮ್ಮವರಿಂದ ದೂರವಾಗಿ ಮತ್ತೆ ಒಂದಾದ ಸಂದರ್ಭಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

325 ಗ್ರಾಂ ತೂಕವಿರುವ ಶಿಶುವಿಗೆ ಜನ್ಮ ನೀಡಿದ 17ರ ಬಾಲಕಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು