Viral Video: ಲೈವ್‌ ರಿಪೋರ್ಟಿಂಗ್‌ ವೇಳೆ ಪತ್ರಕರ್ತೆಗೆ ಗುಮ್ಮಿದ ಗೂಳಿ

ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಸಂಬಂಧಿಸಿದ ಒಂದಲ್ಲ ಒಂದು ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಯಾವುದೋ ಒಂದು ಕಾರ್ಯಕ್ರಮದಲ್ಲಿ ವರದಿಗಾರ್ತಿ ಲೈವ್‌ ರಿಪೋರ್ಟಿಂಗ್‌ ಮಾಡುತ್ತಿದ್ದ ವೇಳೆ ಅತ್ತಕಡೆಯಿಂದ ಬಂದ ಗೂಳಿಯೊಂದು ಆಕೆಗೆ ಗುಮ್ಮಿದೆ. ಗೂಳಿ ಗುದ್ದಿದ ಏಟಿಗೆ ಪತ್ರಕರ್ತೆ ದೊಪ್ಪನೆ ಕೆಳಗೆ ಬಿದ್ದಿದ್ದಾರೆ.

Viral Video: ಲೈವ್‌ ರಿಪೋರ್ಟಿಂಗ್‌ ವೇಳೆ ಪತ್ರಕರ್ತೆಗೆ ಗುಮ್ಮಿದ ಗೂಳಿ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 11:28 AM

ಸಾಮಾನ್ಯವಾಗಿ ಪ್ರಾಣಿಗಳು ಶಾಂತವಾಗಿಯೇ ವರ್ತಿಸುತ್ತವೆ. ಆದ್ರೆ ಅವುಗಳಿಗೆ ಏನಾದ್ರೂ ಕೋಪ ಬಂದ್ರೆ, ತಲೆ ಕೆಟ್ರೆ ದೊಡ್ಡ ಅನಾಹುತಗಳನ್ನೇ ಸೃಷ್ಟಿ ಮಾಡುತ್ತವೆ. ಹೀಗೆ ಕೋಪಗೊಂಡ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಸದ್ಯ ಅಂತಹದೇ ಭಯಾನಕ ಘಟನೆಯೊಂದು ನಡೆದಿದ್ದು, ಸ್ಥಳೀಯ ಕಾರ್ಯಕ್ರಮದಲ್ಲಿ ಲೈವ್‌ ರಿಪೋರ್ಟಿಂಗ್‌ನಲ್ಲಿ ತೊಡಗಿದ್ದ ವೇಳೆ ಟಿವಿ ವರದಿಗಾರ್ತಿಯೊಬ್ಬರಿಗೆ ಗೂಳಿ ಗುದ್ದಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಜಾತ್ರೆಯೊಂದರಲ್ಲಿ ಸ್ಥಳೀಯ ವ್ಯಾಪಾರಿಗಳೊಂದಿಗೆ ಎತ್ತುಗಳ ಬೆಲೆಗಳ ಬಗ್ಗೆ ಮಹಿಳಾ ವರದಿಗಾರ್ತಿಯೊಬ್ಬರು ಚರ್ಚೆಯಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಬಂದ ಗೂಳಿಯೊಂದು ವರದಿಗಾರ್ತಿಯ ಮೇಲೆ ದಾಳಿ ನಡೆಸಿದೆ. ಗೂಳಿ ಗುದ್ದಿದ ಏಟಿಗೆ ವರದಿಗಾರ್ತಿ ದೊಪ್ಪನೆ ಕೆಳಗೆ ಬಿದ್ದಿದ್ದಾರೆ.

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದ್ದು, “ಪಾಕಿಸ್ತಾನದಲ್ಲಿ ಲೈವ್‌ ರಿಪೋರ್ಟಿಂಗ್‌ ವೇಳೆ ವರದಿಗಾರ್ತಿಗೆ ಗುದ್ದಿದ ಗೂಳಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಪಾಕ್‌ ವರದಿಗಾರ್ತಿ ಸ್ಥಳೀಯ ವ್ಯಾಪಾರಿಗಳ ಬಳಿ ನಿಂತು ಲೈವ್‌ ರಿಪೋರ್ಟಿಂಗ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬಂದ ಗೂಳಿಯೊಂದು ಕೋಪದಿಂದ ರಿಪೋರ್ಟರ್‌ಗೆ ಗುಮ್ಮಿದೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು ತುಂಬಾನೇ ಆಘಾತಕಾರಿ ದೃಶ್ಯವಾಗಿದೆ. ಎಲ್ಲಾ ಕ್ಷೇತ್ರದಲ್ಲೂ ಮೊದಲು ನಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್