AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್

Madhyapradesh : ಅರ್ಧಗಂಟೆಯಾದರೂ ಆ್ಯಂಬುಲೆನ್ಸ್ ಬಂದಿಲ್ಲ. ಆಟೋದವರೂ ನಿಲ್ಲಿಸುತ್ತಿಲ್ಲ. ವ್ಯಕ್ತಿಯ ಜೀವ ಉಳಿಸುವುದು ಹೇಗೆ? ಆಪದ್ಭಾಂಧವನಂತೆ ಸಹಾಯ ಮಾಡಿದೆ ಈ ಬುಲ್ಡೋಝರ್! ಎಲ್ಲಿದ್ದೀರಿ ಮಧ್ಯಪ್ರದೇಶದ ಆರೋಗ್ಯ ಸಚಿವರೇ?

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್
ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಬುಲ್ಡೋಝರಿನಲ್ಲಿ ಸಾಗಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Sep 14, 2022 | 12:01 PM

Share

Viral Video : ತುರ್ತು ಚಿಕಿತ್ಸೆ ಎಂದಾಗ ಆ್ಯಂಬುಲೆನ್ಸ್​ ಕಣ್ಣಮುಂದೆ ಬರುವುದು ಸಹಜ. ಆದರೆ ಅದನ್ನು ಹೊರತುಪಡಿಸಿ ಬುಲ್ಡೋಝರ್ ನಿಮ್ಮ ಮನಸ್ಸಿನಲ್ಲಿ ಬಂದಿರಲು ಸಾಧ್ಯವೆ? ವಾಸ್ತವದಲ್ಲಿ ಅದು ಸಾಧ್ಯ ಎಂಬಂಥ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಬುಲ್ಡೋಝರ್ ಎಂದಾಗ ಕಟ್ಟಡಗಳನ್ನು ಉರುಳಿಸುವ ರಕ್ಕಸ! ಎಂಬ ಚಿತ್ರಣ ನಮ್ಮ ಕಣ್​ಮುಂದೆ ಬರುತ್ತದೆ. ಆದರೆ ಈ ಘಟನೆಯಲ್ಲಿ ವ್ಯಕ್ತಿಯ ಜೀವ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ ಈ ಬುಲ್ಡೋಝರ್​. ಬರ್ಹಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಖಿತೌಲಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ  ಬೈಕ್​ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ. ಸೋಮವಾರದಂದು ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಅರ್ಧಗಂಟೆಯಾದರೂ ಆ್ಯಂಬುಲೆನ್ಸ್​ನ ಸುಳಿವಿಲ್ಲ. ಕೊನೆಗೆ ಆಟೋ ರಿಕ್ಷಾದವರೂ ನಿಲ್ಲಿಸಿಲ್ಲ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳೀಯರು ಬುಲ್​ಡೋಝರ್​ನಲ್ಲಿ ಕರೆದೊಯ್ಯಲು ಆಲೋಚಿಸಿದ್ದಾರೆ.

ಮಂಗಳವಾರದಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ. ಗಾಯಾಳುವನ್ನು ಗೈರ್ತಲೈ ಗ್ರಾಮದ ಮಹೇಶ ಬರ್ಮನ್ (35) ಎಂದು ಗುರುತಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದರೂ ಯಾವುದೇ ಆಟೋ ಚಾಲಕರೂ ಈತನ ಸಹಾಯಕ್ಕೆ ಬಾರದೇ ಇದ್ದದ್ದು ಎಂಥ ಅಮಾನವೀಯ.

ಪುಷ್ಪೇಂದ್ರ ವಿಶ್ವಕರ್ಮ ಎನ್ನುವವರ ಆಟೋಮೊಬೈಲ್​ ಅಂಗಡಿಯ ಬಳಿ ನಿನ್ನೆ ಈ ಅಪಘಾತ ಸಂಭವಿಸಿದ್ದು.  ಯಾರೂ ಸಹಾಯಕ್ಕೆ ಒದಗದ ಕಾರಣ, ತಮ್ಮ ಬುಲ್ಡೋಝರ್​ ಮೂಲಕವೇ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಉಪಾಯವನ್ನು ಅವರು ಅನಿವಾರ್ಯವಾಗಿ ಮಾಡಬೇಕಾಯಿತು. ಪುಷ್ಪೇಂದ್ರ ಅವರ ಸ್ನೇಹಿತ ರಫೀಕ್ ಜೆಸಿಬಿಯ ಲೋಡಿಂಗ್​ ಬಕೆಟ್​ನಲ್ಲಿ ಅಪಘಾತಕ್ಕೊಳಗಾದ ಮಹೇಶನನ್ನು ಮಲಗಿಸಿಕೊಂಡು ಬರ್ಹಿ ಸಮುದಾಯ ಆರೋಗ್ಯ ಕೇಂದ್ರ ಕರೆದೊಯ್ದರು. ಕಾಲಿನ ಮೂಳೆ ಮುರಿದಿದ್ದರಿಂದ ಮಹೇಶನನ್ನು ಶಸ್ತ್ರಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಆರೋಗ್ಯ ಸಚಿವರೇ ನಿದ್ರೆಯಿಂದ ಎಚ್ಚೆತ್ತುಕೊಳ್ಳಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:52 am, Wed, 14 September 22

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ