AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್

Madhyapradesh : ಅರ್ಧಗಂಟೆಯಾದರೂ ಆ್ಯಂಬುಲೆನ್ಸ್ ಬಂದಿಲ್ಲ. ಆಟೋದವರೂ ನಿಲ್ಲಿಸುತ್ತಿಲ್ಲ. ವ್ಯಕ್ತಿಯ ಜೀವ ಉಳಿಸುವುದು ಹೇಗೆ? ಆಪದ್ಭಾಂಧವನಂತೆ ಸಹಾಯ ಮಾಡಿದೆ ಈ ಬುಲ್ಡೋಝರ್! ಎಲ್ಲಿದ್ದೀರಿ ಮಧ್ಯಪ್ರದೇಶದ ಆರೋಗ್ಯ ಸಚಿವರೇ?

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್
ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಬುಲ್ಡೋಝರಿನಲ್ಲಿ ಸಾಗಿಸುತ್ತಿರುವುದು
TV9 Web
| Edited By: |

Updated on:Sep 14, 2022 | 12:01 PM

Share

Viral Video : ತುರ್ತು ಚಿಕಿತ್ಸೆ ಎಂದಾಗ ಆ್ಯಂಬುಲೆನ್ಸ್​ ಕಣ್ಣಮುಂದೆ ಬರುವುದು ಸಹಜ. ಆದರೆ ಅದನ್ನು ಹೊರತುಪಡಿಸಿ ಬುಲ್ಡೋಝರ್ ನಿಮ್ಮ ಮನಸ್ಸಿನಲ್ಲಿ ಬಂದಿರಲು ಸಾಧ್ಯವೆ? ವಾಸ್ತವದಲ್ಲಿ ಅದು ಸಾಧ್ಯ ಎಂಬಂಥ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಬುಲ್ಡೋಝರ್ ಎಂದಾಗ ಕಟ್ಟಡಗಳನ್ನು ಉರುಳಿಸುವ ರಕ್ಕಸ! ಎಂಬ ಚಿತ್ರಣ ನಮ್ಮ ಕಣ್​ಮುಂದೆ ಬರುತ್ತದೆ. ಆದರೆ ಈ ಘಟನೆಯಲ್ಲಿ ವ್ಯಕ್ತಿಯ ಜೀವ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ ಈ ಬುಲ್ಡೋಝರ್​. ಬರ್ಹಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಖಿತೌಲಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ  ಬೈಕ್​ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ. ಸೋಮವಾರದಂದು ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಅರ್ಧಗಂಟೆಯಾದರೂ ಆ್ಯಂಬುಲೆನ್ಸ್​ನ ಸುಳಿವಿಲ್ಲ. ಕೊನೆಗೆ ಆಟೋ ರಿಕ್ಷಾದವರೂ ನಿಲ್ಲಿಸಿಲ್ಲ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳೀಯರು ಬುಲ್​ಡೋಝರ್​ನಲ್ಲಿ ಕರೆದೊಯ್ಯಲು ಆಲೋಚಿಸಿದ್ದಾರೆ.

ಮಂಗಳವಾರದಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ. ಗಾಯಾಳುವನ್ನು ಗೈರ್ತಲೈ ಗ್ರಾಮದ ಮಹೇಶ ಬರ್ಮನ್ (35) ಎಂದು ಗುರುತಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದರೂ ಯಾವುದೇ ಆಟೋ ಚಾಲಕರೂ ಈತನ ಸಹಾಯಕ್ಕೆ ಬಾರದೇ ಇದ್ದದ್ದು ಎಂಥ ಅಮಾನವೀಯ.

ಪುಷ್ಪೇಂದ್ರ ವಿಶ್ವಕರ್ಮ ಎನ್ನುವವರ ಆಟೋಮೊಬೈಲ್​ ಅಂಗಡಿಯ ಬಳಿ ನಿನ್ನೆ ಈ ಅಪಘಾತ ಸಂಭವಿಸಿದ್ದು.  ಯಾರೂ ಸಹಾಯಕ್ಕೆ ಒದಗದ ಕಾರಣ, ತಮ್ಮ ಬುಲ್ಡೋಝರ್​ ಮೂಲಕವೇ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಉಪಾಯವನ್ನು ಅವರು ಅನಿವಾರ್ಯವಾಗಿ ಮಾಡಬೇಕಾಯಿತು. ಪುಷ್ಪೇಂದ್ರ ಅವರ ಸ್ನೇಹಿತ ರಫೀಕ್ ಜೆಸಿಬಿಯ ಲೋಡಿಂಗ್​ ಬಕೆಟ್​ನಲ್ಲಿ ಅಪಘಾತಕ್ಕೊಳಗಾದ ಮಹೇಶನನ್ನು ಮಲಗಿಸಿಕೊಂಡು ಬರ್ಹಿ ಸಮುದಾಯ ಆರೋಗ್ಯ ಕೇಂದ್ರ ಕರೆದೊಯ್ದರು. ಕಾಲಿನ ಮೂಳೆ ಮುರಿದಿದ್ದರಿಂದ ಮಹೇಶನನ್ನು ಶಸ್ತ್ರಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಆರೋಗ್ಯ ಸಚಿವರೇ ನಿದ್ರೆಯಿಂದ ಎಚ್ಚೆತ್ತುಕೊಳ್ಳಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:52 am, Wed, 14 September 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?