AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್

Madhyapradesh : ಅರ್ಧಗಂಟೆಯಾದರೂ ಆ್ಯಂಬುಲೆನ್ಸ್ ಬಂದಿಲ್ಲ. ಆಟೋದವರೂ ನಿಲ್ಲಿಸುತ್ತಿಲ್ಲ. ವ್ಯಕ್ತಿಯ ಜೀವ ಉಳಿಸುವುದು ಹೇಗೆ? ಆಪದ್ಭಾಂಧವನಂತೆ ಸಹಾಯ ಮಾಡಿದೆ ಈ ಬುಲ್ಡೋಝರ್! ಎಲ್ಲಿದ್ದೀರಿ ಮಧ್ಯಪ್ರದೇಶದ ಆರೋಗ್ಯ ಸಚಿವರೇ?

Viral Video : ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಬುಲ್ಡೋಝರ್
ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ಬುಲ್ಡೋಝರಿನಲ್ಲಿ ಸಾಗಿಸುತ್ತಿರುವುದು
TV9 Web
| Updated By: ಶ್ರೀದೇವಿ ಕಳಸದ|

Updated on:Sep 14, 2022 | 12:01 PM

Share

Viral Video : ತುರ್ತು ಚಿಕಿತ್ಸೆ ಎಂದಾಗ ಆ್ಯಂಬುಲೆನ್ಸ್​ ಕಣ್ಣಮುಂದೆ ಬರುವುದು ಸಹಜ. ಆದರೆ ಅದನ್ನು ಹೊರತುಪಡಿಸಿ ಬುಲ್ಡೋಝರ್ ನಿಮ್ಮ ಮನಸ್ಸಿನಲ್ಲಿ ಬಂದಿರಲು ಸಾಧ್ಯವೆ? ವಾಸ್ತವದಲ್ಲಿ ಅದು ಸಾಧ್ಯ ಎಂಬಂಥ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಬುಲ್ಡೋಝರ್ ಎಂದಾಗ ಕಟ್ಟಡಗಳನ್ನು ಉರುಳಿಸುವ ರಕ್ಕಸ! ಎಂಬ ಚಿತ್ರಣ ನಮ್ಮ ಕಣ್​ಮುಂದೆ ಬರುತ್ತದೆ. ಆದರೆ ಈ ಘಟನೆಯಲ್ಲಿ ವ್ಯಕ್ತಿಯ ಜೀವ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ ಈ ಬುಲ್ಡೋಝರ್​. ಬರ್ಹಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಖಿತೌಲಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ  ಬೈಕ್​ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ. ಸೋಮವಾರದಂದು ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಅರ್ಧಗಂಟೆಯಾದರೂ ಆ್ಯಂಬುಲೆನ್ಸ್​ನ ಸುಳಿವಿಲ್ಲ. ಕೊನೆಗೆ ಆಟೋ ರಿಕ್ಷಾದವರೂ ನಿಲ್ಲಿಸಿಲ್ಲ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳೀಯರು ಬುಲ್​ಡೋಝರ್​ನಲ್ಲಿ ಕರೆದೊಯ್ಯಲು ಆಲೋಚಿಸಿದ್ದಾರೆ.

ಮಂಗಳವಾರದಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ. ಗಾಯಾಳುವನ್ನು ಗೈರ್ತಲೈ ಗ್ರಾಮದ ಮಹೇಶ ಬರ್ಮನ್ (35) ಎಂದು ಗುರುತಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದರೂ ಯಾವುದೇ ಆಟೋ ಚಾಲಕರೂ ಈತನ ಸಹಾಯಕ್ಕೆ ಬಾರದೇ ಇದ್ದದ್ದು ಎಂಥ ಅಮಾನವೀಯ.

ಪುಷ್ಪೇಂದ್ರ ವಿಶ್ವಕರ್ಮ ಎನ್ನುವವರ ಆಟೋಮೊಬೈಲ್​ ಅಂಗಡಿಯ ಬಳಿ ನಿನ್ನೆ ಈ ಅಪಘಾತ ಸಂಭವಿಸಿದ್ದು.  ಯಾರೂ ಸಹಾಯಕ್ಕೆ ಒದಗದ ಕಾರಣ, ತಮ್ಮ ಬುಲ್ಡೋಝರ್​ ಮೂಲಕವೇ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಉಪಾಯವನ್ನು ಅವರು ಅನಿವಾರ್ಯವಾಗಿ ಮಾಡಬೇಕಾಯಿತು. ಪುಷ್ಪೇಂದ್ರ ಅವರ ಸ್ನೇಹಿತ ರಫೀಕ್ ಜೆಸಿಬಿಯ ಲೋಡಿಂಗ್​ ಬಕೆಟ್​ನಲ್ಲಿ ಅಪಘಾತಕ್ಕೊಳಗಾದ ಮಹೇಶನನ್ನು ಮಲಗಿಸಿಕೊಂಡು ಬರ್ಹಿ ಸಮುದಾಯ ಆರೋಗ್ಯ ಕೇಂದ್ರ ಕರೆದೊಯ್ದರು. ಕಾಲಿನ ಮೂಳೆ ಮುರಿದಿದ್ದರಿಂದ ಮಹೇಶನನ್ನು ಶಸ್ತ್ರಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಆರೋಗ್ಯ ಸಚಿವರೇ ನಿದ್ರೆಯಿಂದ ಎಚ್ಚೆತ್ತುಕೊಳ್ಳಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:52 am, Wed, 14 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ