AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನೊಂದಿಗೆ ಬಂದ ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ ಕಂಡಕ್ಟರ್​​: ಆಮೇಲಾಗಿದ್ದೇನು ಗೊತ್ತಾ?

ತೆಲಂಗಾಣದ ಬಸ್​ನಲ್ಲಿ  ಕಂಡಕ್ಟರ್​ ಒಬ್ಬ ಪ್ರಯಾಣಿಕನೊಂದಿಗೆ ಬಂದಿದ್ದ ಹುಂಜಕ್ಕೆ ಟಿಕೇಟ್​ ನೀಡಿದ್ದಾನೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪ್ರಯಾಣಿಕನೊಂದಿಗೆ ಬಂದ ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ ಕಂಡಕ್ಟರ್​​: ಆಮೇಲಾಗಿದ್ದೇನು ಗೊತ್ತಾ?
ಹುಂಜ
TV9 Web
| Edited By: |

Updated on:Feb 10, 2022 | 2:40 PM

Share

ಕೆಲವೊಮ್ಮೆ ಸರಿ ಎಂದುಕೊಂಡು ಮಾಡಿದ ಕೆಲಸಗಳು ಅಪರಾಧ ಮತ್ತು ಅಪವಾದಕ್ಕೆ ಕಾರಣವಾಗುತ್ತದೆ. ಇಲ್ಲೊಂದು ಅಂತಹದ್ದೆ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತೆಲಂಗಾಣದ ಬಸ್​ನಲ್ಲಿ  ಕಂಡಕ್ಟರ್​ ಒಬ್ಬ ಪ್ರಯಾಣಿಕನೊಂದಿಗೆ ಬಂದಿದ್ದ ಹುಂಜಕ್ಕೆ(Rooster) ಟಿಕೇಟ್ (Ticket)​ ನೀಡಿದ್ದಾನೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆದರೆ ಬಸ್​ಗಳಲ್ಲಿ ಪ್ರಾಣಿಗಳನ್ನು ಸೇರಿಸುವಂತಿಲ್ಲ. ಹೀಗಿದ್ದಾಗಲೂ ಕಂಡಕ್ಟರ್ (Conducter)​ ಪ್ರಯಾಣಿಕ ಹುಂಜವನ್ನು ಹಿಡಿದುಕೊಂಡಿದ್ದರೂ ಅವರನ್ನು ಬಸ್​ನಿಂದ ಇಳಿಸದೆ  ಟಿಕೆಟ್​ ನೀಡಿದ್ದು ಸಾರಿಗೆ ನಿಯಮದ ಪ್ರಕಾರ ತಪ್ಪು ಎಂದು ಕಂಡಕ್ಟರ್​ ವಿರುದ್ದ ಕ್ರಮ ಕೈಗೊಂಡ ಘಟನೆ ನಡೆದಿದೆ.

ಈ ಘಟನೆ ನಡೆದಿದ್ದು ತೆಲಂಗಾಣದ ಸುಲ್ತಾನಾಬಾದ್​ ಸರ್ಕಾರಿ ಬಸ್​ನಲ್ಲಿ. ತ್ರಿಪಾಟಿ ಎನ್ನುವ ಬಸ್​ ಕಂಡಕ್ಟರ್​ಗೆ ಪ್ರಯಾಣಿಕ ಬಸ್​ ಹತ್ತಿದ ಮೇಲೆ ಸ್ವಲ್ಪ ದೂರ ಮುಂದೆ ಹೋದ ಮೇಲೆ ಆತನ ಜತೆ ಹುಂಜ ಇರುವುದು ಗಮನಕ್ಕೆ ಬಂದಿದೆ. ಈ ವೇಳೆ ಕಂಡಕ್ಟರ್​​ ಭೂಮಿಯ ಮೇಲೆ ಜೀವ ಇರುವ ಎಲ್ಲಾ ಜೀವಿಗಳಿಗೂ ಟಿಕೆಟ್​ ನೀಡಲಾಗುತ್ತದೆ ಎಂದು ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ್ದಾನೆ. ಈ ಘಟನೆಯ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ನೋಡಿದ ತೆಲಂಗಾಣ ರಸ್ತೆ ಸಾರಿಗೆ ಸಂಸ್ತೆಯ ಅಧಿಕಾರಿಗಳು ಕಂಡಕ್ಟರ್​ ವಿರುದ್ಧ ಗರಂ ಆಗಿದ್ದಾರೆ.

ಘಟನೆಯ ಕುರಿತು ಅಧಿಕಾರಿಯೊಬ್ಬರು ಪ್ರತಿಕ್ರಯಿಸಿ, ಪ್ರಯಾಣಿಕನ ಜತೆ ಹುಂಜ ಇರುವುದನ್ನು ಗಮನಿಸಿದ ಮೇಲೆ  ಆತನನ್ನು ಬಸ್​ನಿಂದ ಕೆಳಗೆ ಇಳಿಸಬೇಕಿತ್ತು ಆದರೆ ಅದರ ಬದಲು ಟಿಕೆಟ್​ ನೀಡಿದ್ದಾರೆ. ಪ್ರಾಣಿಗಳನ್ನು ಬಸ್​ನಲ್ಲಿ ಹತ್ತಿಸುವಂತಿಲ್ಲ. ಹೀಗಿದ್ದರೂ ಇರಿಸಿಕೊಂಡು ತಪ್ಪು ಮಾಡಿದ್ದಾರೆ, ಅದೂ ಅಲ್ಲದೆ ಟಿಕೆಟ್​​ ಕೂಡ ನೀಡಿ ಮತ್ತೊಂದು ತಪ್ಪು ಮಾಡಿದ್ದಾರೆ. ಹೀಗಾಗಿ ಕಂಡಕ್ಟರ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸದ್ಯ ಕಂಡಕ್ಟರ್ ಹುಂಜಕ್ಕೆ ಟಿಕೆಟ್​ ನೀಡಿದ ವಿಡಿಯೋ ಮತ್ತು ವಿಚಾರ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಇದು 100 ವರ್ಷಗಳ ಹಳೆಯ ಮೊಟ್ಟೆ: ಶತಮಾನದ ಮೊಟ್ಟೆಯ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ

Published On - 2:36 pm, Thu, 10 February 22

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?