AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನೊಂದಿಗೆ ಬಂದ ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ ಕಂಡಕ್ಟರ್​​: ಆಮೇಲಾಗಿದ್ದೇನು ಗೊತ್ತಾ?

ತೆಲಂಗಾಣದ ಬಸ್​ನಲ್ಲಿ  ಕಂಡಕ್ಟರ್​ ಒಬ್ಬ ಪ್ರಯಾಣಿಕನೊಂದಿಗೆ ಬಂದಿದ್ದ ಹುಂಜಕ್ಕೆ ಟಿಕೇಟ್​ ನೀಡಿದ್ದಾನೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪ್ರಯಾಣಿಕನೊಂದಿಗೆ ಬಂದ ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ ಕಂಡಕ್ಟರ್​​: ಆಮೇಲಾಗಿದ್ದೇನು ಗೊತ್ತಾ?
ಹುಂಜ
TV9 Web
| Edited By: |

Updated on:Feb 10, 2022 | 2:40 PM

Share

ಕೆಲವೊಮ್ಮೆ ಸರಿ ಎಂದುಕೊಂಡು ಮಾಡಿದ ಕೆಲಸಗಳು ಅಪರಾಧ ಮತ್ತು ಅಪವಾದಕ್ಕೆ ಕಾರಣವಾಗುತ್ತದೆ. ಇಲ್ಲೊಂದು ಅಂತಹದ್ದೆ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತೆಲಂಗಾಣದ ಬಸ್​ನಲ್ಲಿ  ಕಂಡಕ್ಟರ್​ ಒಬ್ಬ ಪ್ರಯಾಣಿಕನೊಂದಿಗೆ ಬಂದಿದ್ದ ಹುಂಜಕ್ಕೆ(Rooster) ಟಿಕೇಟ್ (Ticket)​ ನೀಡಿದ್ದಾನೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆದರೆ ಬಸ್​ಗಳಲ್ಲಿ ಪ್ರಾಣಿಗಳನ್ನು ಸೇರಿಸುವಂತಿಲ್ಲ. ಹೀಗಿದ್ದಾಗಲೂ ಕಂಡಕ್ಟರ್ (Conducter)​ ಪ್ರಯಾಣಿಕ ಹುಂಜವನ್ನು ಹಿಡಿದುಕೊಂಡಿದ್ದರೂ ಅವರನ್ನು ಬಸ್​ನಿಂದ ಇಳಿಸದೆ  ಟಿಕೆಟ್​ ನೀಡಿದ್ದು ಸಾರಿಗೆ ನಿಯಮದ ಪ್ರಕಾರ ತಪ್ಪು ಎಂದು ಕಂಡಕ್ಟರ್​ ವಿರುದ್ದ ಕ್ರಮ ಕೈಗೊಂಡ ಘಟನೆ ನಡೆದಿದೆ.

ಈ ಘಟನೆ ನಡೆದಿದ್ದು ತೆಲಂಗಾಣದ ಸುಲ್ತಾನಾಬಾದ್​ ಸರ್ಕಾರಿ ಬಸ್​ನಲ್ಲಿ. ತ್ರಿಪಾಟಿ ಎನ್ನುವ ಬಸ್​ ಕಂಡಕ್ಟರ್​ಗೆ ಪ್ರಯಾಣಿಕ ಬಸ್​ ಹತ್ತಿದ ಮೇಲೆ ಸ್ವಲ್ಪ ದೂರ ಮುಂದೆ ಹೋದ ಮೇಲೆ ಆತನ ಜತೆ ಹುಂಜ ಇರುವುದು ಗಮನಕ್ಕೆ ಬಂದಿದೆ. ಈ ವೇಳೆ ಕಂಡಕ್ಟರ್​​ ಭೂಮಿಯ ಮೇಲೆ ಜೀವ ಇರುವ ಎಲ್ಲಾ ಜೀವಿಗಳಿಗೂ ಟಿಕೆಟ್​ ನೀಡಲಾಗುತ್ತದೆ ಎಂದು ಹುಂಜಕ್ಕೂ 30 ರೂ. ಟಿಕೆಟ್​ ನೀಡಿದ್ದಾನೆ. ಈ ಘಟನೆಯ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ನೋಡಿದ ತೆಲಂಗಾಣ ರಸ್ತೆ ಸಾರಿಗೆ ಸಂಸ್ತೆಯ ಅಧಿಕಾರಿಗಳು ಕಂಡಕ್ಟರ್​ ವಿರುದ್ಧ ಗರಂ ಆಗಿದ್ದಾರೆ.

ಘಟನೆಯ ಕುರಿತು ಅಧಿಕಾರಿಯೊಬ್ಬರು ಪ್ರತಿಕ್ರಯಿಸಿ, ಪ್ರಯಾಣಿಕನ ಜತೆ ಹುಂಜ ಇರುವುದನ್ನು ಗಮನಿಸಿದ ಮೇಲೆ  ಆತನನ್ನು ಬಸ್​ನಿಂದ ಕೆಳಗೆ ಇಳಿಸಬೇಕಿತ್ತು ಆದರೆ ಅದರ ಬದಲು ಟಿಕೆಟ್​ ನೀಡಿದ್ದಾರೆ. ಪ್ರಾಣಿಗಳನ್ನು ಬಸ್​ನಲ್ಲಿ ಹತ್ತಿಸುವಂತಿಲ್ಲ. ಹೀಗಿದ್ದರೂ ಇರಿಸಿಕೊಂಡು ತಪ್ಪು ಮಾಡಿದ್ದಾರೆ, ಅದೂ ಅಲ್ಲದೆ ಟಿಕೆಟ್​​ ಕೂಡ ನೀಡಿ ಮತ್ತೊಂದು ತಪ್ಪು ಮಾಡಿದ್ದಾರೆ. ಹೀಗಾಗಿ ಕಂಡಕ್ಟರ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸದ್ಯ ಕಂಡಕ್ಟರ್ ಹುಂಜಕ್ಕೆ ಟಿಕೆಟ್​ ನೀಡಿದ ವಿಡಿಯೋ ಮತ್ತು ವಿಚಾರ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಇದು 100 ವರ್ಷಗಳ ಹಳೆಯ ಮೊಟ್ಟೆ: ಶತಮಾನದ ಮೊಟ್ಟೆಯ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ

Published On - 2:36 pm, Thu, 10 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!