AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಲ್ಕತ್ತಾ: ಸಿಗ್ನಲ್​ ಜಂಪ್ ಮಾಡಿ ಕಾರು, ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಸ್​

Accident : ಕೊಲ್ಕತ್ತೆಯ ಸೆಕ್ಟರ್ V ಯಿಂದ ಕರುಣಾಮೊಯಿ ಕ್ರಾಸಿಂಗ್‌ಗೆ ಹೋಗುವ ರಸ್ತೆಯ ಬದಿಯಲ್ಲಿ ಕಾಲೇಜ್ ಮೋರ್ ಇಂಟರ್‌ಸೆಕ್ಷನ್‌ನಲ್ಲಿ ಸಿಗ್ನಲ್​ ಕೆಂಪು ಬಣ್ಣಕ್ಕೆ ತಿರುಗಿದ ನಂತರ ಕೂಡ ಚಾಲಕ ಬಸ್ ನಿಲ್ಲಿಸಲಿಲ್ಲ. ಪರಿಣಾಮವಾಗಿ ನಾಲ್ಕು ಪಾಯಿಂಟ್ ಕ್ರಾಸಿಂಗ್‌ನ ನಂತರ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. 10 ಬಸ್​ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

Viral Video: ಕೊಲ್ಕತ್ತಾ: ಸಿಗ್ನಲ್​ ಜಂಪ್ ಮಾಡಿ ಕಾರು, ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಸ್​
ಕೊಲ್ಕತ್ತೆಯಲ್ಲಿ ನಡೆದ ಬಸ್​ ಅಪಘಾತ
ಶ್ರೀದೇವಿ ಕಳಸದ
|

Updated on:Oct 05, 2023 | 3:20 PM

Share

Kolkata : ಕೊಲ್ಕತ್ತೆಯಸೆಕ್ಟರ್​ V, ಕಾಲೇಜ್ ಮೋರ್‌ನ ಬಳಿ ಬಸ್​ ಸಿಗ್ನಲ್​ ಜಂಪ್​ ಮಾಡಿ ಕಾರು​ ಮತ್ತು ದ್ವಿಚಕ್ರವಾಹನಕ್ಕೆ ಡಿಕ್ಕಿ (Accident) ಹೊಡೆದಿದೆ. ಕಾಲೇಜ್​ ಬಳಿಯ ಡಿವೈಡರ್​​ಗೆ ಬಸ್​ ಡಿಕ್ಕಿ ಹೊಡೆದುದರಿಂದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ರೆಡ್ಡಿಟ್​ ಮೂಲಕ ಅಪಘಾತದ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರವಾಹನದ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟರ್​ ಧರಿಸಿದ್ದರಿಂದ ಅವರು ಯಾವುದೇ ರೀತಿಯ ಗಾಯಗಳಿಗೆ ಒಳಗಾಗಿಲ್ಲ. ಅದೃಷ್ಟವಶಾತ್​ ಕಾರಿನಲ್ಲಿದ್ದವರು ಗಾಯಗೊಳ್ಳದೆ ಪಾರಾಗಿದ್ದಾರೆ. ಕಾರಿನ ಏರ್​ಬ್ಯಾಗ್​ ಅವರನ್ನು ರಕ್ಷಿಸಿದೆ ಎಂದು ಬಿಧಾನನಗರದ ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : Viral Video: ಸ್ಪೇಸ್ ಕಾಫಿ; ಬಾಹ್ಯಾಕಾಶದಲ್ಲಿ ವಿಶೇಷ ಕಪ್​ನಲ್ಲಿ ಕಾಫಿ ಕುಡಿದ ಗಗನಯಾತ್ರಿ

KB 16 ಮಾರ್ಗದ ಬಸ್, ನ್ಯೂ ಟೌನ್‌ನ ಆಕ್ಷನ್ ಏರಿಯಾ III ರಲ್ಲಿ ಸುಖೋಬ್ರಿಷ್ಟಿ ವಸತಿ ಸಂಕೀರ್ಣದ ಬಳಿಯ ಬಸ್ ಟರ್ಮಿನಸ್‌ನಿಂದ ವಿಐಪಿ ರಸ್ತೆಯಿಂದ ಬಂಗೂರ್ ಅವೆನ್ಯೂಗೆ ಚಲಿಸುವಾಗ ಈ ದುರ್ಘಟನೆ ನಡೆದಿದೆ. ಸೋಮವಾರ, ಬಸ್ ಗೋದ್ರೇಜ್ ವಾಟರ್​ಸೈಡ್​ನಿಂದ ಸಾಲ್ಟ್ ಲೇಕ್ ಬೈಪಾಸ್ ಕಡೆಗೆ ಹೋಗುತ್ತಿತ್ತು. ಸೆಕ್ಟರ್ V ಯಿಂದ ಕರುಣಾಮೊಯಿ ಕ್ರಾಸಿಂಗ್‌ಗೆ ಹೋಗುವ ರಸ್ತೆಯ ಬದಿಯಲ್ಲಿ ಕಾಲೇಜ್ ಮೋರ್ ಇಂಟರ್‌ಸೆಕ್ಷನ್‌ನಲ್ಲಿ ಸಿಗ್ನಲ್​ ಕೆಂಪು ಬಣ್ಣಕ್ಕೆ ತಿರುಗಿದ ನಂತರ ಕೂಡ ಚಾಲಕ ಬಸ್ ನಿಲ್ಲಿಸಲಿಲ್ಲ. ಪರಿಣಾಮವಾಗಿ ನಾಲ್ಕು ಪಾಯಿಂಟ್ ಕ್ರಾಸಿಂಗ್‌ನ ನಂತರ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕೊಲ್ಕತ್ತಾದಲ್ಲಿ ನಡೆದ ಅಪಘಾತದ ದೃಶ್ಯ

4 wheeler jumped signal and rammed into the bus. byu/Construction1ne inCarsIndia

ಗಾಯಗೊಂಡ 10 ಪ್ರಯಾಣಿಕರನ್ನು ಬಿಧಾನನಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನವರು ಮೂಗೇಟಿಗೆ ಒಳಗಾಗಿದ್ದಾರೆ. ಕೆಲವರ ಕೈಕಾಲು ಮೂಳೆಗಳು ಮುರಿದಿವೆ. ಈ ದುರ್ಘಟನೆಗೆ ಕಾರಣನಾದ ಬಸ್ಸಿನ ಚಾಲಕನನ್ನು ಬಂಧಿಸಲಾಗಿದೆ ಮತ್ತು ಐಪಿಸಿಯ 279 (ವೇಗದ ಚಾಲನೆ) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ : Viral Video: ಮುಂಬೈ; ಶಿವಾಜಿಪಾರ್ಕ್​ ಈಜುಗೊಳದಲ್ಲಿ ಮರಿಮೊಸಳೆ ಪತ್ತೆ; ಕಡಿತಕ್ಕೆ ಒಳಗಾದ ಸಿಬ್ಬಂದಿ

ಸೋಮವಾರ ಬೆಳಗ್ಗೆ ಪೊಲೀಸರು ಕ್ರೇನ್‌ಗಳ ಸಹಾಯದಿಂದ ಬಸ್ ಅನ್ನು ಹೊರ ತೆಗೆದಿದ್ದರಿಂದ ಕಾಲೇಜ್ ಮೋರ್ ಡಿವೈಡರ್​ನಲ್ಲಿ ಸುಮಾರು 40 ನಿಮಿಷಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ನಾಲ್ಕು ಗಂಟೆಗಳ ಹಿಂದೆ ರೆಡ್ಡಿಟ್​ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಆದರೆ, ಸಿಗ್ನಲ್​ ಜಂಪ್ ಮಾಡಿದ್ದು ಕಾರು ಅಥವಾ ಬಸ್​? ಎಂಬ ಬಗ್ಗೆ ನೆಟ್ಟಿಗರಲ್ಲಿ ಜಿಜ್ಞಾಸೆ ಉಂಟಾಗಿದ್ದು, ಈ ಸುತ್ತ ಚರ್ಚೆ ಸಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:16 pm, Thu, 5 October 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ