AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ

ದತ್ತಾತ್ರೆಯ​ ಲೊಹಾರ್​​ ಅವರ ಕುಟುಂಬವನ್ನು ಭೇಟಿಯಾಗಿ, ಹೊಸ ಬೊಲೇರೋ ಕಾರನ್ನು ಉಡುಗೊರೆಯಾಗಿ ನೀಡಿ, ಅವರು ಗುಜರಿ ವಸ್ತುಗಳಿಂದ ತಯಾರಿಸಿದ ಕಾರನ್ನು ಆನಂದ್​ ಮಹೀಂದ್ರಾ ಖರೀದಿ ಮಾಡಿದ್ದಾರೆ. 

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ
ಕಾರ್​ ಉಡುಗೊರೆಯಾಗಿ ನೀಡುತ್ತಿರುವುದು
TV9 Web
| Edited By: |

Updated on:Jan 26, 2022 | 3:49 PM

Share

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಮಗನ ಆಸೆಯನ್ನು ಪೂರೈಸಲು ಗುಜರಿ ವಸ್ತುಗಳಿಂದ  ವಾಹನವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ಮಹೀಂದ್ರಾ ಸಂಸ್ಥೆಯ ಚೇರ್​ಮನ್​ ಆನಂದ್ ಮಹೀಂದ್ರಾ (Anand Mahindra) ಅವರ ಗಮನ ಸೆಳೆದಿತ್ತು. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡು, ಅವರು ತಯಾರಿಸಿದ ಕಾರನ್ನು ತಾವು ಖರೀದಿಸಿ ಹೊಸದಾದ ಕಾರನ್ನು ನೀಡುವುದಾಗಿ ಹೇಳಿದ್ದರು. ಅದೇ ಮಾತಿನಂತೆ ನಿನ್ನೆ ದತ್ತಾತ್ರೆಯ​ ಲೊಹಾರ್ (Dattatraya Lohar )​​ ಅವರ ಕುಟುಂಬವನ್ನು ಭೇಟಿಯಾಗಿ, ಹೊಸ ಬೊಲೆರೋ ಕಾರನ್ನು (Bolero Car) ಉಡುಗೊರೆಯಾಗಿ ನೀಡಿ, ಅವರು ಗುಜರಿ ವಸ್ತುಗಳಿಂದ ತಯಾರಿಸಿದ ಕಾರನ್ನು ಆನಂದ್​ ಮಹೀಂದ್ರಾ ಖರೀದಿ ಮಾಡಿದ್ದಾರೆ.

ಈ ಕುರಿತು ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಿನ್ನೆ ದತ್ತಾತ್ರೆಯ ಲಾಹೋರ್​ ಅವರ ಕುಟುಂಬವನ್ನು ಭೇಟಿಯಾಗಿದ್ದೆ. ಈ ವೇಳೆ ಹೊಸ ಬೊಲೇರೋ ಕಾರನ್ನು ನೀಡಲಾಯಿತು. ಅವರ ಕುಟುಂಬವೂ ಸಂತಸಗೊಂಡಿದೆ ಎಂದಿದ್ದಾರೆ. ಆನಂದ್​ ಮಹೀಂದ್ರಾ ಅವರು ಹಂಚಿಕೊಂಡ ಫೋಟೋಗಳು 29 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ಈ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತಮ ಕೆಲಸ ಎಂದು ಹಲವರು ಕಾಮೆಂಟ್​ ಮಾಡಿದ್ದಾರೆ.

ಮಹೀಂದ್ರಾ ಕಂಪನಿಯ ಸಿಇಒ ಆನಂದ್​ ಮಹೀಂದ್ರಾ ಸಾಮಾಜಿಕ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಾರೆ. ಜನರ ಕಷ್ಟಗಳಿಗೆ ಮಿಡಿಯುವ ಅವರು ದೇಶದ ದೊಡ್ಡ ಉದ್ಯಮಿಯಾದರೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದಾರೆ. ಜತೆಗೆ ಭಾರತೀಯರ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಾರೆ.

ಇದನ್ನೂ ಓದಿ;

ಮೊದಲ ಬಾರಿಗೆ ಸಮೋಸಾ ತಿಂದ ಇಟಾಲಿಯನ್ ವ್ಯಕ್ತಿ; ಆತನ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ

Published On - 3:44 pm, Wed, 26 January 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್