AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ

ದತ್ತಾತ್ರೆಯ​ ಲೊಹಾರ್​​ ಅವರ ಕುಟುಂಬವನ್ನು ಭೇಟಿಯಾಗಿ, ಹೊಸ ಬೊಲೇರೋ ಕಾರನ್ನು ಉಡುಗೊರೆಯಾಗಿ ನೀಡಿ, ಅವರು ಗುಜರಿ ವಸ್ತುಗಳಿಂದ ತಯಾರಿಸಿದ ಕಾರನ್ನು ಆನಂದ್​ ಮಹೀಂದ್ರಾ ಖರೀದಿ ಮಾಡಿದ್ದಾರೆ. 

ಗುಜರಿ ವಸ್ತುಗಳಿಂದ ತಯಾರಾದ ವಾಹನ​ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್​ ಮಹೀಂದ್ರಾ
ಕಾರ್​ ಉಡುಗೊರೆಯಾಗಿ ನೀಡುತ್ತಿರುವುದು
TV9 Web
| Edited By: |

Updated on:Jan 26, 2022 | 3:49 PM

Share

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಮಗನ ಆಸೆಯನ್ನು ಪೂರೈಸಲು ಗುಜರಿ ವಸ್ತುಗಳಿಂದ  ವಾಹನವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ಮಹೀಂದ್ರಾ ಸಂಸ್ಥೆಯ ಚೇರ್​ಮನ್​ ಆನಂದ್ ಮಹೀಂದ್ರಾ (Anand Mahindra) ಅವರ ಗಮನ ಸೆಳೆದಿತ್ತು. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡು, ಅವರು ತಯಾರಿಸಿದ ಕಾರನ್ನು ತಾವು ಖರೀದಿಸಿ ಹೊಸದಾದ ಕಾರನ್ನು ನೀಡುವುದಾಗಿ ಹೇಳಿದ್ದರು. ಅದೇ ಮಾತಿನಂತೆ ನಿನ್ನೆ ದತ್ತಾತ್ರೆಯ​ ಲೊಹಾರ್ (Dattatraya Lohar )​​ ಅವರ ಕುಟುಂಬವನ್ನು ಭೇಟಿಯಾಗಿ, ಹೊಸ ಬೊಲೆರೋ ಕಾರನ್ನು (Bolero Car) ಉಡುಗೊರೆಯಾಗಿ ನೀಡಿ, ಅವರು ಗುಜರಿ ವಸ್ತುಗಳಿಂದ ತಯಾರಿಸಿದ ಕಾರನ್ನು ಆನಂದ್​ ಮಹೀಂದ್ರಾ ಖರೀದಿ ಮಾಡಿದ್ದಾರೆ.

ಈ ಕುರಿತು ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಿನ್ನೆ ದತ್ತಾತ್ರೆಯ ಲಾಹೋರ್​ ಅವರ ಕುಟುಂಬವನ್ನು ಭೇಟಿಯಾಗಿದ್ದೆ. ಈ ವೇಳೆ ಹೊಸ ಬೊಲೇರೋ ಕಾರನ್ನು ನೀಡಲಾಯಿತು. ಅವರ ಕುಟುಂಬವೂ ಸಂತಸಗೊಂಡಿದೆ ಎಂದಿದ್ದಾರೆ. ಆನಂದ್​ ಮಹೀಂದ್ರಾ ಅವರು ಹಂಚಿಕೊಂಡ ಫೋಟೋಗಳು 29 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ಈ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತಮ ಕೆಲಸ ಎಂದು ಹಲವರು ಕಾಮೆಂಟ್​ ಮಾಡಿದ್ದಾರೆ.

ಮಹೀಂದ್ರಾ ಕಂಪನಿಯ ಸಿಇಒ ಆನಂದ್​ ಮಹೀಂದ್ರಾ ಸಾಮಾಜಿಕ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಾರೆ. ಜನರ ಕಷ್ಟಗಳಿಗೆ ಮಿಡಿಯುವ ಅವರು ದೇಶದ ದೊಡ್ಡ ಉದ್ಯಮಿಯಾದರೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದಾರೆ. ಜತೆಗೆ ಭಾರತೀಯರ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಾರೆ.

ಇದನ್ನೂ ಓದಿ;

ಮೊದಲ ಬಾರಿಗೆ ಸಮೋಸಾ ತಿಂದ ಇಟಾಲಿಯನ್ ವ್ಯಕ್ತಿ; ಆತನ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ

Published On - 3:44 pm, Wed, 26 January 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ