AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು, ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿ ತಂದೆಯ ನಿಧನದ ಬಳಿಕ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಕುಟುಂಬ ನಿರ್ವಹಣೆ ಮಾಡುತ್ತಿರುವಂತಹ 10 ವರ್ಷದ ಬಾಲಕನೊಬ್ಬನ ಕಥೆಯನ್ನು ಹಂಚಿಕೊಂಡಿದ್ದಾರೆ. ಈ ಬಾಲಕನ ಮನಕಲಕುವ ಸ್ಟೋರಿಯನ್ನು ಕೇಳಿ ನೆಟ್ಟಿಗರು ಭಾವುಕರಾಗಿದ್ದಾರೆ.

Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ
ಮಾಲಾಶ್ರೀ ಅಂಚನ್​
| Edited By: |

Updated on: May 07, 2024 | 10:49 AM

Share

ವಿಶೇಷವಾಗಿ ತಂದೆಯನ್ನು ಕಳೆದುಕೊಂಡ ಮಕ್ಕಳು ಕುಟುಂಬದ ಜವಬ್ದಾರಿಯನ್ನು ತಾವೇ ಹೊರಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗೆ ಅದೆಷ್ಟೋ ಜನರು ಜವಬ್ದಾರಿಯ ಕಾರಣದಿಂದಾಗಿ ತಮ್ಮ ಓದನ್ನು ಕೂಡಾ ಅರ್ಧಕ್ಕೆ ಬಿಟ್ಟು ಕಷ್ಟಪಟ್ಟು ಕೆಲಸ ಮಾಡಿ ತಮ್ಮ ಕುಟುಂಬವನ್ನು ಸಂತೋಷದಿಂದ ನೋಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ತಂದೆಯನ್ನು ಕಳೆದುಕೊಂಡಂತಹ 10 ವರ್ಷ ವಯಸ್ಸಿನ ಬಾಲಕನೂ ಕೂಡಾ ಓದಿನ ಜೊತೆ ಜೊತೆಗೆ ಸಂಜೆ ಹೊತ್ತಿನಲ್ಲಿ ದೆಹಲಿಯ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾನೆ. ಇತನ ಕಷ್ಟದ ಹಾದಿ, ನೋವಿನ ಕಥೆಯನ್ನು ಕೇಳಿ ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಆತನ ಸಹಾಯಕ್ಕೆ ಧಾವಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ದೆಹಲಿ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುವ ಈ ಹುಡುಗನ ಹೆಸರು ಜಸ್ಪ್ರೀತ್. 10 ವರ್ಷ ವಯಸ್ಸಿನ ಈ ಹುಡುಗ ಎಲ್ಲಾ ಮಕ್ಕಳಂತೆ ಶಾಲೆಯಿಂದ ಬಂದು ಆಟವಾಡುತ್ತಾ ತನ್ನ ಬಾಲ್ಯವನ್ನು ಎಂಜಾಯ್ ಮಾಡದೆ, ಶಾಲೆಯಿಂದ ಬಂದ ತಕ್ಷಣ ಬೀದಿ ಬದಿಯಲ್ಲಿ ಎಗ್ ರೋಲ್ ಮತ್ತು ಚಿಕನ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾನೆ. ಈ ಬಾಲಕ ಮನಕಲುಕುವ ಸ್ಟೋರಿಯನ್ನು ಫುಡ್ ವ್ಲೋಗರ್ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಂದೆಯ ನಿಧನದ ಬಳಿಕ ತಾಯಿ ಕೂಡಾ ಜಸ್ಪ್ರೀತ್ ಮತ್ತು ಈತನ ಸಹೋದರಿಯನ್ನು ಬಿಟ್ಟು ಪಂಜಾಬ್ ಗೆ ಹೋಗಿದ್ದು, ಇದೀಗ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದೇವೆ ಎಂದು ಬಾಲಕ ತನ್ನ ಕಷ್ಟವನ್ನು ಹೇಳಿಕೊಂಡಿದ್ದ. ಇದೀಗ ನೋವಿನ ಕಥೆಯನ್ನು ಆಲಿಸಿದ ಉದ್ಯಮಿ ಆನಂದ್ ಮಹೀಂದ್ರಾ ಅವರು ಈ ಬಾಲಕ ಸಹಾಯಕ್ಕೆ ಮುಂದಾಗಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು ಆನಂದ್ ಮಹೀಂದ್ರಾ ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಧೈರ್ಯವಂತ ಬಾಲಕನ ಶಿಕ್ಷಣಕ್ಕಾಗಿ ನಾವು ಸಹಾಯ ಮಾಡುತ್ತೇವೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಿರುವ ಬಾಲಕ ಫುಡ್ ಬ್ಲಾಗರ್ ಒಬ್ಬರ ಬಳಿ ತನ್ನ ನೋವಿನ ಕಥೆಯನ್ನು ಹಂಚಿಕೊಳ್ಳುತ್ತಿರುವಂತಹ ಮನಕಲಕುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್ 1.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆನಂದ್ ಮಹೀಂದ್ರಾ ಅವರ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?