AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು, ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿ ತಂದೆಯ ನಿಧನದ ಬಳಿಕ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಕುಟುಂಬ ನಿರ್ವಹಣೆ ಮಾಡುತ್ತಿರುವಂತಹ 10 ವರ್ಷದ ಬಾಲಕನೊಬ್ಬನ ಕಥೆಯನ್ನು ಹಂಚಿಕೊಂಡಿದ್ದಾರೆ. ಈ ಬಾಲಕನ ಮನಕಲಕುವ ಸ್ಟೋರಿಯನ್ನು ಕೇಳಿ ನೆಟ್ಟಿಗರು ಭಾವುಕರಾಗಿದ್ದಾರೆ.

Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ
ಮಾಲಾಶ್ರೀ ಅಂಚನ್​
| Edited By: |

Updated on: May 07, 2024 | 10:49 AM

Share

ವಿಶೇಷವಾಗಿ ತಂದೆಯನ್ನು ಕಳೆದುಕೊಂಡ ಮಕ್ಕಳು ಕುಟುಂಬದ ಜವಬ್ದಾರಿಯನ್ನು ತಾವೇ ಹೊರಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗೆ ಅದೆಷ್ಟೋ ಜನರು ಜವಬ್ದಾರಿಯ ಕಾರಣದಿಂದಾಗಿ ತಮ್ಮ ಓದನ್ನು ಕೂಡಾ ಅರ್ಧಕ್ಕೆ ಬಿಟ್ಟು ಕಷ್ಟಪಟ್ಟು ಕೆಲಸ ಮಾಡಿ ತಮ್ಮ ಕುಟುಂಬವನ್ನು ಸಂತೋಷದಿಂದ ನೋಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ತಂದೆಯನ್ನು ಕಳೆದುಕೊಂಡಂತಹ 10 ವರ್ಷ ವಯಸ್ಸಿನ ಬಾಲಕನೂ ಕೂಡಾ ಓದಿನ ಜೊತೆ ಜೊತೆಗೆ ಸಂಜೆ ಹೊತ್ತಿನಲ್ಲಿ ದೆಹಲಿಯ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾನೆ. ಇತನ ಕಷ್ಟದ ಹಾದಿ, ನೋವಿನ ಕಥೆಯನ್ನು ಕೇಳಿ ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಆತನ ಸಹಾಯಕ್ಕೆ ಧಾವಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ದೆಹಲಿ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುವ ಈ ಹುಡುಗನ ಹೆಸರು ಜಸ್ಪ್ರೀತ್. 10 ವರ್ಷ ವಯಸ್ಸಿನ ಈ ಹುಡುಗ ಎಲ್ಲಾ ಮಕ್ಕಳಂತೆ ಶಾಲೆಯಿಂದ ಬಂದು ಆಟವಾಡುತ್ತಾ ತನ್ನ ಬಾಲ್ಯವನ್ನು ಎಂಜಾಯ್ ಮಾಡದೆ, ಶಾಲೆಯಿಂದ ಬಂದ ತಕ್ಷಣ ಬೀದಿ ಬದಿಯಲ್ಲಿ ಎಗ್ ರೋಲ್ ಮತ್ತು ಚಿಕನ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾನೆ. ಈ ಬಾಲಕ ಮನಕಲುಕುವ ಸ್ಟೋರಿಯನ್ನು ಫುಡ್ ವ್ಲೋಗರ್ ಒಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಂದೆಯ ನಿಧನದ ಬಳಿಕ ತಾಯಿ ಕೂಡಾ ಜಸ್ಪ್ರೀತ್ ಮತ್ತು ಈತನ ಸಹೋದರಿಯನ್ನು ಬಿಟ್ಟು ಪಂಜಾಬ್ ಗೆ ಹೋಗಿದ್ದು, ಇದೀಗ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದೇವೆ ಎಂದು ಬಾಲಕ ತನ್ನ ಕಷ್ಟವನ್ನು ಹೇಳಿಕೊಂಡಿದ್ದ. ಇದೀಗ ನೋವಿನ ಕಥೆಯನ್ನು ಆಲಿಸಿದ ಉದ್ಯಮಿ ಆನಂದ್ ಮಹೀಂದ್ರಾ ಅವರು ಈ ಬಾಲಕ ಸಹಾಯಕ್ಕೆ ಮುಂದಾಗಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು ಆನಂದ್ ಮಹೀಂದ್ರಾ ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಧೈರ್ಯವಂತ ಬಾಲಕನ ಶಿಕ್ಷಣಕ್ಕಾಗಿ ನಾವು ಸಹಾಯ ಮಾಡುತ್ತೇವೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಿರುವ ಬಾಲಕ ಫುಡ್ ಬ್ಲಾಗರ್ ಒಬ್ಬರ ಬಳಿ ತನ್ನ ನೋವಿನ ಕಥೆಯನ್ನು ಹಂಚಿಕೊಳ್ಳುತ್ತಿರುವಂತಹ ಮನಕಲಕುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್ 1.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆನಂದ್ ಮಹೀಂದ್ರಾ ಅವರ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!