AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜೀನಾಮೆಗೆ ಒತ್ತಾಯ​; ಕಣ್ಣೀರುಗರೆಯುತ್ತ ಸತ್ಯ ಬಹಿರಂಗಪಡಿಸಿದ ಬೈಜೂಸ್​ ಉದ್ಯೋಗಿ

Salary Withheld : ಬೈಜೂಸ್​​ ಉದ್ಯೋಗಿ ಆಕಾಂಶಾ ಖೇಮ್ಕಾ ಅವರಿಗೆ ಎಡ್​ಟೆಕ್​ ಕಂಪೆನಿಯು ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಇಲ್ಲವಾದಲ್ಲಿ ಸಂಬಳ ತಡೆಹಿಡಿಯಲಾಗುವುದು ಎಂದು ಬೆದರಿಸಿದೆ.

Viral Video: ರಾಜೀನಾಮೆಗೆ ಒತ್ತಾಯ​; ಕಣ್ಣೀರುಗರೆಯುತ್ತ ಸತ್ಯ ಬಹಿರಂಗಪಡಿಸಿದ ಬೈಜೂಸ್​ ಉದ್ಯೋಗಿ
ಆಕಾಂಶಾ ಖೇಮ್ಕಾ
ಶ್ರೀದೇವಿ ಕಳಸದ
|

Updated on:Jul 28, 2023 | 10:58 AM

Share

BYJUs : ‘ಎಡ್​ಟೆಕ್​ (Edtech)  ಕಂಪೆನಿಯು ನನಗೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಅಕಸ್ಮಾತ್​ ರಾಜೀನಾಮೆ (Resignation) ನೀಡಲಿದ್ದಲ್ಲಿ, ಆ.1ರಿಂದ ಸಂಬಳವನ್ನು ಕಡಿತಗೊಳಿಸಲಾಗುವುದು ಎಂದೂ ಬೆದರಿಕೆ ಒಡ್ಡಿದೆ. ಈ ಹಿನ್ನೆಲೆಯಲ್ಲಿ ನನ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ ನನ್ನ ದುಡಿಮೆಯಿಂದಲೇ ನನ್ನ ಇಡೀ ಮನೆ ನಡೆಯುತ್ತದೆ. ಈ ಕಂಪೆನಿಯಿಂದ ಬರಬೇಕಾಗಿರುವ ನನ್ನ ಹಣ ನನಗೆ ಸಿಗದಿದ್ದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಬೈಜೂಸ್​ನಲ್ಲಿ ಶಿಕ್ಷಣ ತಜ್ಞೆಯಾಗಿರುವ ಆಕಾಂಶಾ ಖೇಮ್ಕಾ ಮನನೊಂದು, ಕಣ್ಣೀರು ಹಾಕುತ್ತ ಈ ವಿಷಯವನ್ನು ವಿಡಿಯೋ ಮಾಡಿ ಲಿಂಕ್ಡ್​ಇನ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ನೆಟ್ಟಿಗರು ಆಕಾಂಕ್ಷಾ ಅವರಿಗೆ ಸಮಾಧಾನ ಹೇಳುತ್ತ ಧೈರ್ಯ ತುಂಬುತ್ತಿದ್ದಾರೆ.

‘ನನ್ನ ನಡೆವಳಿಕೆ ಮತ್ತು ಕಾರ್ಯಕ್ಷಮತೆಯ ಹಿನ್ನೆಲೆಯಲ್ಲಿ ಮ್ಯಾನೇಜರ್​ ನನ್ನನ್ನು ಕೆಲಸದಿಂದ ವಜಾ ಮಾಡಿರುವುದಾಗಿ ಹೇಳಿದ್ದಾರೆ. ಈ ವಿಷಯವಾಗಿ ಸರ್ಕಾರದಿಂದ ಬೆಂಬಲವನ್ನು ನಿರೀಕ್ಷಿಸುತ್ತೇನೆ. ನನಗೆ ಈಗ ಯಾವುದೇ ದಾರಿಗಳು ಕಾಣುತ್ತಿಲ್ಲ, ಸೂಕ್ತ ನ್ಯಾಯ ದೊರೆಯದಿದ್ದರೆ ಸಾವಿಗೆ ಶರಣಾಗಬೇಕಾಗುತ್ತದೆ, ದಯವಿಟ್ಟು ಸಹಾಯ ಮಾಡಿ. ಜು. 28 ರೊಳಗೆ ನಾನು ಈ ಕೆಲಸವನ್ನು ಬಿಡಬೇಕು ಅಲ್ಲದೆ ಆಗಸ್ಟ್​ 1ರಂದು ನನಗೆ ಸಂಬಳವನ್ನೂ ನೀಡಲಾಗುವುದಿಲ್ಲ ಎಂದು ಮೀಟಿಂಗ್​ನಲ್ಲಿ ಹೇಳಿದ್ದಾರೆ. ಆದರೆ ನನ್ನ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಾಲ ಬೇರೆ ಬಾಕಿ ಇದೆ. ಈಗ ಬೈಜೂಸ್​ ಕೊಡಬೇಕಾಗಿರುವ ಹಣವನ್ನು ಕೊಡದಿದ್ದರೆ ಹೇಗೆ ಜೀವನ ಸಾಗಿಸಬೇಕು? ಎಂದಿದ್ದಾರೆ ಆಕೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral Video: ತುಮಕೂರಿನ ಈ ಮಗ್ಗಿಬಾಲೆಗೆ 45ರ ಮಗ್ಗಿಯೂ ನೀರುಕುಡಿದಂತೆ!

ಈ ವಿಡಿಯೋ ಅನ್ನು ಆಕೆ ಲಿಂಕ್ಡ್​ಇನ್​ನಲ್ಲಿ ಅಪ್​ಲೋಡ್​ ಮಾಡಿದಾಗಿನಿಂದ ಸಾಮಾಜಿಕ ಜಾಲತಾಣಿಗರು ಅವರಿಗೆ ಬೆಂಬಲಿಸುತ್ತಿದ್ದಾರೆ. ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ, ಹೊಸ ಉದ್ಯೋಗ ಹುಡುಕಲು ನಿಮಗೆ ಸಹಾಯ ಬೇಕಾದರೆ ನನ್ನನ್ನು ಸಂಪರ್ಕಿಸಿ. ದುಡುಕಬೇಡಿ, ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ ಹಲವಾರು ಜನ. ನಿಮಗೆ ಆ ದೇವರು ಒಳ್ಳೆಯ ತಿರುವನ್ನು ಕೊಡಲಿ ಎಂದು ಹಾರೈಸಿದ್ದಾರೆ ಅನೇಕರು.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ 

Published On - 10:56 am, Fri, 28 July 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ