AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಂದೆ-ಮಗಳ ಜುಗಲ್ಬಂದಿ… ಅಪ್ಪನೊಂದಿಗೆ ಮುದ್ದಾಗಿ ಹಾಡು ಹಾಡಿದ ಕಂದಮ್ಮ; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಮನ ಗೆಲ್ಲುತ್ತವೆ. ಸದ್ಯ ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಅಪ್ಪನ ಜೊತೆ ಸೇರಿ ಪುಟ್ಟ ಕಂದಮ್ಮ ಮುದ್ದು ಮುದ್ದಾಗಿ ಹಾಡು ಹಾಡಿದ್ದಾಳೆ. ತಂದೆ-ಮಗಳ ಹಾಡಿನ ಜುಗಲ್ಬಂದಿಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 15, 2025 | 9:23 AM

Share

ಕೆಲವು ಮಕ್ಕಳು ಡ್ಯಾನ್ಸ್‌, ಹಾಡಿನ ಮೂಲಕ ಮೂಲಕ ಎಲ್ಲರ ಗಮನ ಸೆಳೆದರೆ, ಇನ್ನೂ ಕೆಲವು ಮಕ್ಕಳು ತಮ್ಮ ಮುದ್ದು ಮುದ್ದು ಮಾತುಗಳಿಂದ ಎಲ್ಲರ ಮನ ಗೆಲ್ಲುತ್ತಾರೆ. ಹೀಗೆ ಪುಟಾಣಿ ಮಕ್ಕಳ ಹಾಡು, ಕುಣಿತ, ತರ್ಲೆ ತಮಾಷೆಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಕ್ಯೂಟ್‌ ವಿಡಿಯೋವೊಂದು ವೈರಲ್‌ ಆಗಿದ್ದು, ಅಪ್ಪನ ಜೊತೆ ಸೇರಿ ಪುಟ್ಟ ಕಂದಮ್ಮ ಮುದ್ದು ಮುದ್ದಾಗಿ ಹಿಂದಿ ಹಾಡೊಂದನ್ನು ಹಾಡಿದ್ದಾಳೆ. ತಂದೆ-ಮಗಳ ಹಾಡಿನ ಜುಗಲ್ಬಂದಿಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

ವೃತ್ತಿಯಲ್ಲಿ ಸಿ.ಎ ಆಗಿರುವ ಹಾಗೂ ಸಂಗೀತಗಾರ ರೋನಕ್‌ ಹೆಚ್.‌ ಜೈನ್‌ ಎಂಬವರು ತಮ್ಮ ಪುಟಾಣಿ ಮಗಳೊಂದಿಗೆ ಸೇರಿ ಬಂದಿಶ್‌ ಬ್ಯಾಂಡಿಟ್ಸ್‌ ವೆಬ್‌ ಸಿರೀಸ್‌ನ ʼಗರಾಜ್‌ ಗರಾಜ್‌ʼ ಎಂಬ ಹಾಡನ್ನು ಬಹಳ ಚಂದವಾಗಿ ಹಾಡಿದ್ದು, ತಂದೆ-ಮಗಳ ಹಾಡಿನ ಜುಗಲ್ಬಂದಿಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

ಈ ಮುದ್ದಾದ ವಿಡಿಯೋವನ್ನು ರೋನಕ್‌ ಹೆಚ್.‌ ಜೈನ್‌ (ca.ronakjainofficial) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರೋನಕ್‌ ಹಾಗೂ ಅವರ ಮುದ್ದಿನ ಮಗಳು ಗರಾಜ್‌ ಗರಾಜ್‌ ಎಂಬ ಹಿಂದಿ ಹಾಡನ್ನು ಬಹಳ ಮುದ್ದಾಗಿ ಹಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು; ವಿಡಿಯೋ ವೈರಲ್

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹ ಜುಗಲ್ಬಂದಿಯನ್ನು ನಾನೆಂದು ನೋಡಿಲ್ಲʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆಹಾ… ಎಷ್ಟು ಮುದ್ದಾಗಿದೆ. ಹೀಗೆ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಸಂಗೀತಾಸಕ್ತಿಯನ್ನು ಬೆಳೆಸಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಂದೆ-ಮಗಳ ಹಾಡಂತೂ ತುಂಬಾನೇ ಮುದ್ದಾಗಿʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ