AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್
ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ!
Follow us
TV9 Web
| Updated By: shruti hegde

Updated on: Jun 25, 2021 | 11:53 AM

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋವೊಂದು ನೆಟ್ಟಿಗರ ನಿದ್ದೆಗೆಡಿಸಿದೆ. ಕ್ಯಾಮರಾದಲ್ಲಿ ದೆವ್ವ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದ್ದು ಕೆಲವರಿಗೆ ಸಂಶಯ ಮೂಡಿಸಿದೆ. ಕೆಲವರು ಇದು ದೆವ್ವವೇ ಎಂದು ಪ್ರತಿಕ್ರಿಯೆ ನೀಡುತ್ತಿದ್ದರೆ, ಇನ್ನು ಕೆಲವರು ವನುಷ್ಯರ ನೆರಳು ಎಂದು ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಭೂತ ಬಂಗಲೆಗಳ ಹೆಸರನ್ನು ಕೇಳಿಯೇ ಇರ್ತೇವೆ. ಕೆಲವು ಸ್ಥಳಗಳು ನೋಡಲು ಭಯಂಕರ ಅನಿಸುತ್ತವೆ. ಅದು ಭೂತಗಳು ವಾಸಿಸುವ ಜಾಗ ಎಂದು ಹೇಳುತ್ತಾರೆ. ಅವರಿಗೆ ಅನುಭವ ಆಗಿರಲೂ ಬಹುದು. ಇಲ್ಲವೇ, ನಮ್ಮಂತೆಯೇ ಅವರೂ ಭಯಗೊಂಡು ಭೂತದ ಭಂಗಲೆ ಎಂದು ನಂಬಿರಬಹುದು. ಆದರೆ ಇಂತಹ ಮಾತುಗಳು ಒಂದು ಕ್ಷಣ ಭಯವನ್ನು ಹುಟ್ಟಿಸುವದಂತೂ ನಿಜ. ಕೆಲವು ಭೂತದ ವಿಷಯಗಳಂತೂ ಅಂತೆ-ಕಂತೆ ಅನ್ನುತ್ತಲೇ ಪ್ರಚಾರಕ್ಕೆ ಬಂದು ಬಿಡುತ್ತವೆ. ಯಾವುದು ಸತ್ಯ ಯಾವುದು ಮಿಥ್ಯ ಅನ್ನುವುದೇ ಹೆಚ್ಚು ಗೊಂದಲವನ್ನು ಸೃಷ್ಟಿ ಮಾಡುವಂಥದ್ದು.

ಕತ್ತಲೆಯಲ್ಲಿ ಹೆದರುವುದು ಸಾಮಾನ್ಯ. ನಮ್ಮ ನೆರಳನ್ನೇ ಕಂಡು ಹಲವು ಬಾರಿ ಹೆದರಿದ್ದೂ ಇದೆ. ಹೀಗಿರುವಾಗ ಮನೆಯ ಮೆಟ್ಟಿನ ಮೇಲೆ ಯಾರೋ ನಡೆದು ಹೋದಂತೆ ವಿಡಿಯೋದಲ್ಲಿ ಗೋಚರವಾಗುತ್ತಿದೆ. ಕೆಲವರು ಅದು ದೆವ್ವವೇ? ಎಂದು ಪ್ರಶ್ನಿಸಿದರೆ ಇನ್ನು ಕೆಲವರು ಮನುಷ್ಯರ ನೆರಳು ಅದು ಎಂದು ಹೇಳುತ್ತಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ. ಭಯಾನಕ ಕ್ಷಣವಿದು ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯವನ್ನು ಆಂಗ್ಲ ಮಾಧ್ಯಮ ದಿ ಸನ್​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಕಟ್ಟಡವನ್ನು ನೋಡಲು ಓರ್ವರು ಬಂದಾಗ ಈ ವಿಡಿಯೋವನ್ನು ಮಾಡಲಾಗಿದೆ.

ಇದನ್ನೂ ಓದಿ:

ನಡುರಸ್ತೆಯಲ್ಲಿ ಯುವತಿಯ ತಲೆಗೂದಲು ಹಿಡಿದು ದೆವ್ವ ಬಿಡಿಸಿದ ಜನ

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ