AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್
ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ!
TV9 Web
| Edited By: |

Updated on: Jun 25, 2021 | 11:53 AM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋವೊಂದು ನೆಟ್ಟಿಗರ ನಿದ್ದೆಗೆಡಿಸಿದೆ. ಕ್ಯಾಮರಾದಲ್ಲಿ ದೆವ್ವ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದ್ದು ಕೆಲವರಿಗೆ ಸಂಶಯ ಮೂಡಿಸಿದೆ. ಕೆಲವರು ಇದು ದೆವ್ವವೇ ಎಂದು ಪ್ರತಿಕ್ರಿಯೆ ನೀಡುತ್ತಿದ್ದರೆ, ಇನ್ನು ಕೆಲವರು ವನುಷ್ಯರ ನೆರಳು ಎಂದು ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಭೂತ ಬಂಗಲೆಗಳ ಹೆಸರನ್ನು ಕೇಳಿಯೇ ಇರ್ತೇವೆ. ಕೆಲವು ಸ್ಥಳಗಳು ನೋಡಲು ಭಯಂಕರ ಅನಿಸುತ್ತವೆ. ಅದು ಭೂತಗಳು ವಾಸಿಸುವ ಜಾಗ ಎಂದು ಹೇಳುತ್ತಾರೆ. ಅವರಿಗೆ ಅನುಭವ ಆಗಿರಲೂ ಬಹುದು. ಇಲ್ಲವೇ, ನಮ್ಮಂತೆಯೇ ಅವರೂ ಭಯಗೊಂಡು ಭೂತದ ಭಂಗಲೆ ಎಂದು ನಂಬಿರಬಹುದು. ಆದರೆ ಇಂತಹ ಮಾತುಗಳು ಒಂದು ಕ್ಷಣ ಭಯವನ್ನು ಹುಟ್ಟಿಸುವದಂತೂ ನಿಜ. ಕೆಲವು ಭೂತದ ವಿಷಯಗಳಂತೂ ಅಂತೆ-ಕಂತೆ ಅನ್ನುತ್ತಲೇ ಪ್ರಚಾರಕ್ಕೆ ಬಂದು ಬಿಡುತ್ತವೆ. ಯಾವುದು ಸತ್ಯ ಯಾವುದು ಮಿಥ್ಯ ಅನ್ನುವುದೇ ಹೆಚ್ಚು ಗೊಂದಲವನ್ನು ಸೃಷ್ಟಿ ಮಾಡುವಂಥದ್ದು.

ಕತ್ತಲೆಯಲ್ಲಿ ಹೆದರುವುದು ಸಾಮಾನ್ಯ. ನಮ್ಮ ನೆರಳನ್ನೇ ಕಂಡು ಹಲವು ಬಾರಿ ಹೆದರಿದ್ದೂ ಇದೆ. ಹೀಗಿರುವಾಗ ಮನೆಯ ಮೆಟ್ಟಿನ ಮೇಲೆ ಯಾರೋ ನಡೆದು ಹೋದಂತೆ ವಿಡಿಯೋದಲ್ಲಿ ಗೋಚರವಾಗುತ್ತಿದೆ. ಕೆಲವರು ಅದು ದೆವ್ವವೇ? ಎಂದು ಪ್ರಶ್ನಿಸಿದರೆ ಇನ್ನು ಕೆಲವರು ಮನುಷ್ಯರ ನೆರಳು ಅದು ಎಂದು ಹೇಳುತ್ತಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ. ಭಯಾನಕ ಕ್ಷಣವಿದು ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯವನ್ನು ಆಂಗ್ಲ ಮಾಧ್ಯಮ ದಿ ಸನ್​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಕಟ್ಟಡವನ್ನು ನೋಡಲು ಓರ್ವರು ಬಂದಾಗ ಈ ವಿಡಿಯೋವನ್ನು ಮಾಡಲಾಗಿದೆ.

ಇದನ್ನೂ ಓದಿ:

ನಡುರಸ್ತೆಯಲ್ಲಿ ಯುವತಿಯ ತಲೆಗೂದಲು ಹಿಡಿದು ದೆವ್ವ ಬಿಡಿಸಿದ ಜನ

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!