AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಪೋಸ್ಟ್​​​ ವೈರಲ್​

ಉತ್ತರ ಭಾರತದ ಅನಾನಸ್ ಮಾರಾಟಗಾರರೊಬ್ಬರಿಗೆ ಸ್ಥಳೀಯ ಭಾಷೆ ಕನ್ನಡ ತಿಳಿಯದ ಕಾರಣದಿಂದಾಗಿ ಗ್ರಾಹಕ ಮಹಿಳೆಯೊಬ್ಬರು ಆತನನ್ನು ಯಾವ ರೀತಿ ಅವಮಾನಿಸಿದರು ಎಂಬುದರ ಬಗ್ಗೆ ವ್ಯಕ್ತಿಯೊಬ್ಬರು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದು, ಸದ್ಯ ಪೋಸ್ಟ್​​ ಎಲ್ಲೆಡೆ ವೈರಲ್​ ಆಗಿದೆ.

Viral Post: ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಪೋಸ್ಟ್​​​ ವೈರಲ್​
Image Credit source: picxy
ಅಕ್ಷತಾ ವರ್ಕಾಡಿ
|

Updated on:Aug 13, 2024 | 3:30 PM

Share

ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಎಂದು ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಫೋಸ್ಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬೆಂಗಳೂರು ನಿವಾಸಿಯಾದ ವ್ಯಕ್ತಿಯೊಬ್ಬರು ಹಣ್ಣಿನ ಮಾರುಕಟ್ಟೆಯಲ್ಲಿ ನಡೆದು ಘಟನೆಯೊಂದರ ಬಗ್ಗೆ ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ. ಉತ್ತರ ಭಾರತದ ಅನಾನಸ್ ಮಾರಾಟಗಾರರೊಬ್ಬರಿಗೆ ಸ್ಥಳೀಯ ಭಾಷೆ ಕನ್ನಡ ತಿಳಿಯದ ಕಾರಣದಿಂದಾಗಿ ಗ್ರಾಹಕ ಮಹಿಳೆಯೊಬ್ಬರು ಆತನನ್ನು ಯಾವ ರೀತಿ ಅವಮಾನಿಸಿದರು ಎಂಬುದರ ಬಗ್ಗೆ ಬರೆದುಕೊಂಡಿದ್ದಾರೆ.

ಇಸ್ರೋ ಲೇಔಟ್‌ನಲ್ಲಿ ನಡೆದ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ನಾನು ಅನಾನಸ್​​​ ಖರೀದಿಸಲು ಬಂದ ವೇಳೆ ಮಹಿಳೆಯೊಬ್ಬಳು ಬಂದಿದ್ದು, ಆಕೆ ಮಾರಾಟಗಾರನಲ್ಲಿ ಒಂದಕ್ಕೆ ಎಷ್ಟು ಎಂದು ಪ್ರಶ್ನಿಸಿದ್ದಾಳೆ . ಈವೇಳೆ ಮಾರಾಟಗಾರ “40 ಕಾ ಎಕ್ (ಒಂದಕ್ಕೆ 40 ರೂ)” ಮತ್ತು “100 ಕಾ 3 (ಮೂರಕ್ಕೆ ರೂ 100 ರೂ.). ಎಂದು ಹೇಳಿದ್ದಾನೆ” . ಆದರೆ ಇದು ಮಹಿಳೆಗೆ, ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಪುನರಾವರ್ತಿಸಲು ಕೇಳಿಕೊಂಡಿದ್ದಾಳೆ. ಆಗ ರೆಡ್ಡಿಟರ್ ಮಧ್ಯಪ್ರವೇಶಿಸಿ, ಮಾರಾಟಗಾರರು ಹೇಳಿದ್ದನ್ನು ಕನ್ನಡದಲ್ಲಿ ವಿವರಿಸಿದ್ದಾನೆ.

ಆದರೆ, ಮಹಿಳೆ ರೆಡ್ಡಿಟರ್‌ಗೆ ಕೃತಜ್ಞತೆ ಸಲ್ಲಿಸುವ ಬದಲು, ಕನ್ನಡ ಗೊತ್ತಿಲ್ಲ ಎಂದ ಮಾರಾಟಗಾರನನ್ನು ನಿಂದಿಸಿದ್ದಾಳೆ. ಪ್ರತಿಕ್ರಿಯೆಯಾಗಿ, ಮಾರಾಟಗಾರ ಅವಳಿಗೆ ಕ್ಷಮೆಯಾಚಿಸಿದ್ದಾನೆ. ಬೆಂಗಳೂರಿಗೆ ಬಂದು ಕೇವಲ ಒಂದು ವಾರ ಆಗಿದ್ದರಿಂದ ನನಗೆ ಕನ್ನಡ ಬರಲ್ಲ, ಮುಂದಿನ ದಿನಗಳಲ್ಲಿ ಕಲಿಯುವೆ ಎಂದು ಹೇಳಿ ಮಾರಾಟಗಾರ ಕ್ಷಮೆ ಯಾಚಿಸಿದ್ದಾನೆ.

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ಈ ಪೋಸ್ಟ್​​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಬೆಂಗಳೂರಿನಲ್ಲಿರುವ ಪ್ರತಿಯೊಬ್ಬರೂ ನೀವು ಕನ್ನಡ ಕಲಿಯಬೇಕೆಂದು ಬಯಸುತ್ತಾರೆ ಆದರೆ ನಿಮಗೆ ಕಲಿಸಲು ಯಾರೂ ಬಯಸುವುದಿಲ್ಲ ಎಂದು ನನಗೆ ಅರ್ಥವಾಯಿತು “ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 13 August 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!