AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಪೋಸ್ಟ್​​​ ವೈರಲ್​

ಉತ್ತರ ಭಾರತದ ಅನಾನಸ್ ಮಾರಾಟಗಾರರೊಬ್ಬರಿಗೆ ಸ್ಥಳೀಯ ಭಾಷೆ ಕನ್ನಡ ತಿಳಿಯದ ಕಾರಣದಿಂದಾಗಿ ಗ್ರಾಹಕ ಮಹಿಳೆಯೊಬ್ಬರು ಆತನನ್ನು ಯಾವ ರೀತಿ ಅವಮಾನಿಸಿದರು ಎಂಬುದರ ಬಗ್ಗೆ ವ್ಯಕ್ತಿಯೊಬ್ಬರು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದು, ಸದ್ಯ ಪೋಸ್ಟ್​​ ಎಲ್ಲೆಡೆ ವೈರಲ್​ ಆಗಿದೆ.

Viral Post: ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಪೋಸ್ಟ್​​​ ವೈರಲ್​
Image Credit source: picxy
ಅಕ್ಷತಾ ವರ್ಕಾಡಿ
|

Updated on:Aug 13, 2024 | 3:30 PM

Share

ಬೆಂಗಳೂರಿನಲ್ಲಿ ಹಿಂದಿ ಭಾಷಿಕರಿಗೆ ಸ್ವಲ್ಪ ದಯೆ ತೋರಬಹುದೇ? ಎಂದು ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಫೋಸ್ಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬೆಂಗಳೂರು ನಿವಾಸಿಯಾದ ವ್ಯಕ್ತಿಯೊಬ್ಬರು ಹಣ್ಣಿನ ಮಾರುಕಟ್ಟೆಯಲ್ಲಿ ನಡೆದು ಘಟನೆಯೊಂದರ ಬಗ್ಗೆ ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ. ಉತ್ತರ ಭಾರತದ ಅನಾನಸ್ ಮಾರಾಟಗಾರರೊಬ್ಬರಿಗೆ ಸ್ಥಳೀಯ ಭಾಷೆ ಕನ್ನಡ ತಿಳಿಯದ ಕಾರಣದಿಂದಾಗಿ ಗ್ರಾಹಕ ಮಹಿಳೆಯೊಬ್ಬರು ಆತನನ್ನು ಯಾವ ರೀತಿ ಅವಮಾನಿಸಿದರು ಎಂಬುದರ ಬಗ್ಗೆ ಬರೆದುಕೊಂಡಿದ್ದಾರೆ.

ಇಸ್ರೋ ಲೇಔಟ್‌ನಲ್ಲಿ ನಡೆದ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ನಾನು ಅನಾನಸ್​​​ ಖರೀದಿಸಲು ಬಂದ ವೇಳೆ ಮಹಿಳೆಯೊಬ್ಬಳು ಬಂದಿದ್ದು, ಆಕೆ ಮಾರಾಟಗಾರನಲ್ಲಿ ಒಂದಕ್ಕೆ ಎಷ್ಟು ಎಂದು ಪ್ರಶ್ನಿಸಿದ್ದಾಳೆ . ಈವೇಳೆ ಮಾರಾಟಗಾರ “40 ಕಾ ಎಕ್ (ಒಂದಕ್ಕೆ 40 ರೂ)” ಮತ್ತು “100 ಕಾ 3 (ಮೂರಕ್ಕೆ ರೂ 100 ರೂ.). ಎಂದು ಹೇಳಿದ್ದಾನೆ” . ಆದರೆ ಇದು ಮಹಿಳೆಗೆ, ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಪುನರಾವರ್ತಿಸಲು ಕೇಳಿಕೊಂಡಿದ್ದಾಳೆ. ಆಗ ರೆಡ್ಡಿಟರ್ ಮಧ್ಯಪ್ರವೇಶಿಸಿ, ಮಾರಾಟಗಾರರು ಹೇಳಿದ್ದನ್ನು ಕನ್ನಡದಲ್ಲಿ ವಿವರಿಸಿದ್ದಾನೆ.

ಆದರೆ, ಮಹಿಳೆ ರೆಡ್ಡಿಟರ್‌ಗೆ ಕೃತಜ್ಞತೆ ಸಲ್ಲಿಸುವ ಬದಲು, ಕನ್ನಡ ಗೊತ್ತಿಲ್ಲ ಎಂದ ಮಾರಾಟಗಾರನನ್ನು ನಿಂದಿಸಿದ್ದಾಳೆ. ಪ್ರತಿಕ್ರಿಯೆಯಾಗಿ, ಮಾರಾಟಗಾರ ಅವಳಿಗೆ ಕ್ಷಮೆಯಾಚಿಸಿದ್ದಾನೆ. ಬೆಂಗಳೂರಿಗೆ ಬಂದು ಕೇವಲ ಒಂದು ವಾರ ಆಗಿದ್ದರಿಂದ ನನಗೆ ಕನ್ನಡ ಬರಲ್ಲ, ಮುಂದಿನ ದಿನಗಳಲ್ಲಿ ಕಲಿಯುವೆ ಎಂದು ಹೇಳಿ ಮಾರಾಟಗಾರ ಕ್ಷಮೆ ಯಾಚಿಸಿದ್ದಾನೆ.

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ಈ ಪೋಸ್ಟ್​​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಬೆಂಗಳೂರಿನಲ್ಲಿರುವ ಪ್ರತಿಯೊಬ್ಬರೂ ನೀವು ಕನ್ನಡ ಕಲಿಯಬೇಕೆಂದು ಬಯಸುತ್ತಾರೆ ಆದರೆ ನಿಮಗೆ ಕಲಿಸಲು ಯಾರೂ ಬಯಸುವುದಿಲ್ಲ ಎಂದು ನನಗೆ ಅರ್ಥವಾಯಿತು “ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 13 August 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು