AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಮೋದಿ – ಮೆಲೋನಿ ಭೇಟಿಯ ಕ್ಷಣ : ಮೋದಿಜಿ ನೀವು ಬೆಸ್ಟ್, ನಾನು ನಿಮ್ಮಂತಾಗಲು ಬಯಸುತ್ತೇನೆ ಎಂದ ಇಟಲಿ ಪ್ರಧಾನಿ

ಕೆನಡಾದಲ್ಲಿ ನಡೆದ ಜಿ -7 ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿನ ಸಂಭಾಷಣೆಯ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಈ ಭೇಟಿಯ ವೇಳೆಯಲ್ಲಿ ಇಟಲಿ ಪ್ರಧಾನಿ ಮೆಲೋನಿ ನಗು ಮೊಗದಿಂದ ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾದ್ರೆ ಮೋದಿ ಬಗ್ಗೆ ಇಟಲಿ ಪ್ರಧಾನಿ ಆಡಿದ ಮಾತುಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಸಾಯಿನಂದಾ
|

Updated on:Jun 19, 2025 | 5:16 PM

Share

ಕೆನಡಾ, ಜೂನ್ 19 : ಕೆನಡಾ (Canada)ದಲ್ಲಿ ನಡೆದ ಜಿ -7 ಶೃಂಗಸಭೆ (G7- Summit) ಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi)ಯವರು ಭಾಗಿಯಾಗಿದ್ದಾರೆ. ಈ ಸಮ್ಮೇಳನದಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ (Giorgia Meloni) ಮೆಲೋನಿ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು ಇವರಿಬ್ಬರ ನಡುವಿನ ಸಂಭಾಷಣೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವೇಳೆಯಲ್ಲಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನಾನು ನಿಮ್ಮಂತಾಗಲು ಬಯಸುತ್ತೇನೆ ಎಂದು ಮೆಲೋನಿ ಹೇಳಿದ್ದು, ಈ ವಿಡಿಯೋ ತುಣುಕು ಎಲ್ಲೆಡೆ ಹರಿದಾಡುತ್ತಿದೆ.

@meghUpdates ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಕೈಕುಲುಕಿಕೊಂಡು ಸಂಭಾಷಣೆ ಶುರು ಮಾಡಿದ್ದಾರೆ. ಇದೇ ವೇಳೆಯಲ್ಲಿ ಇಟಲಿ ಪ್ರಧಾನಿ ಮೆಲೋನಿ, ನೀವು ಅತ್ಯುತ್ತಮರು, ನಾನು ನಿಮ್ಮಂತೆಯೇ ಇರಲು ಪ್ರಯತ್ನಿಸುತ್ತಿದ್ದೇನೆ ಎಂದು ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿರುವುದನ್ನು ನೋಡಬಹುದು. ಇದಕ್ಕೆ ಮೋದಿಯವರು ಥಂಬ್ಸ್ ಅಪ್ ನೀಡಿ, ಜೋರಾಗಿ ನಕ್ಕಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
14 ದೇಶಗಳನ್ನು ಹಾದು ಹೋಗುವ ವಿಶ್ವದ ಉದ್ದದ ರಸ್ತೆಯಿದು
Image
ಇಂತಹ ಮಗಳನ್ನು ಪಡೆದ ಆ ತಂದೆಯೇ ಪುಣ್ಯವಂತ
Image
ಚಿಲ್ಲರೆ ಕಾಸಿನಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿಸಲು ಬಂದ ವೃದ್ಧ
Image
ಅಪರಿಚಿತ ವ್ಯಕ್ತಿಗೆ ಊಟ ಹಾಕಿ ಸತ್ಕರಿಸಿದ ಬೆಂಗಳೂರಿನ ಕುಟುಂಬ

ಇದನ್ನೂ ಓದಿ : ಇಸ್ರೇಲ್ ಇರಾನ್ ಯುದ್ಧಕ್ಕೂ ಅಮೆರಿಕದಲ್ಲಿ ಪಿಜ್ಜಾ ಆರ್ಡರ್ ಹೆಚ್ಚಳಕ್ಕೂ ಏನು ಸಂಬಂಧ? ಇಲ್ಲಿದೆ ಅಸಲಿ ವಿಚಾರ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಅದಲ್ಲದೆ, ಇಟಲಿಯ ಪ್ರಧಾನಿ ಮೆಲೋನಿ ಇಬ್ಬರು ನಾಯಕರುಗಳ ಭೇಟಿಯ ಕ್ಷಣದ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಇಟಲಿ ಮತ್ತು ಭಾರತ ಉತ್ತಮ ಸ್ನೇಹ ಸಂಬಂಧ ಹೊಂದಿವೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಜಾರ್ಜಿಯಾ ಮೆಲೋನಿ, ನಿಮ್ಮ ಮಾತುಗಳನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಇಟಲಿಯೊಂದಿಗಿನ ಭಾರತದ ಸ್ನೇಹವು ಗಟ್ಟಿಯಾಗುತ್ತಲೇ ಇರುತ್ತದೆ, ನಮ್ಮ ಜನರಿಗೆ ಹೆಚ್ಚು ಪ್ರಯೋಜನಗಳನ್ನು ನೀಡುತ್ತದೆ ಎಂದಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೆಲೋನಿಯವರ ವಿಡಿಯೋವವನ್ನು ಜೂನ್ 18 ರಂದು ಶೇರ್ ಮಾಡಿಕೊಳ್ಳಲಾಗಿದ್ದು, ಬಳಕೆದಾರರು ಇದನ್ನು ಮೆಚ್ಚಿಕೊಂಡಿದ್ದಾರೆ. ಇದಕ್ಕೆ ಬಳಕೆದಾರರೊಬ್ಬರು, ಕಳೆದ 11 ವರ್ಷಗಳಲ್ಲಿ ಮೋದಿ ಮಾಡಿದ್ದನ್ನು ಯಾವುದೇ ವಿಶ್ವ ನಾಯಕರು ಮಾಡಿಲ್ಲ ಎಂದಿದ್ದಾರೆ. ಮತ್ತೊಬ್ಬರು, ಇದುವೇ ನಿಜವಾದ ಮೋದಿಯ ಗೆಲುವು, ಇದಕ್ಕಿಂತ ಖುಷಿಯ ವಿಚಾರ ಬೇರೇನಿದೆ ಎಂದು ಕಾಮೆಂಟ್‌ನಲ್ಲಿ ಬರೆದಿದ್ದಾರೆ. ಇನ್ನೊಬ್ಬರು ಭಾರತ ಹಾಗೂ ಇಟಲಿಗೆ ಅದ್ಭುತ ಕ್ಷಣ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Thu, 19 June 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ