AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

ಹೈದರಾಬಾದ್‌ನ ಸುಗಮ ರಸ್ತೆಗಳನ್ನು ಹೊಗಳಿ, ಬೆಂಗಳೂರಿನ ರಸ್ತೆಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿದ ಕೆನಡಾ ಪ್ರಜೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆ ಹುಟ್ಟುಹಾಕಿದೆ. ಹಲವರು ಈ ಅಭಿಪ್ರಾಯವನ್ನು ಬೆಂಬಲಿಸಿದ್ದರೆ, ಇನ್ನೂ ಕೆಲವರು ಹೋಲಿಕೆ ಸಂಪೂರ್ಣ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿನ ಈ ವಿಡಿಯೋವೀಗ ಹೈದರಾಬಾದ್ vs ಬೆಂಗಳೂರು ಎಂಬ ಹೊಸ ವಾಗ್ವಾದಕ್ಕೆ ಕಾರಣವಾಗಿದೆ.

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್
ವೈರಲ್​​ ಆದ ಕೆನಡಾ ವ್ಯಕ್ತಿಯ ಹೈದರಾಬಾದ್ vs ಬೆಂಗಳೂರು ರಸ್ತೆ ವಿಡಿಯೋ
ಪ್ರಸನ್ನ ಹೆಗಡೆ
|

Updated on:May 20, 2026 | 6:38 PM

Share

ಬೆಂಗಳೂರು, ಮೇ 20: ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳು ದುರಾವಸ್ಥೆ ವಿಚಾರಕ್ಕೆ ಮೇಲಿಂದ ಮೇಲೆ ಸುದ್ದಿಯಾಗುತ್ತಲೇ ಇರುತ್ತವೆ. ಈ ನಡುವೆ ಕೆನಡಾದ ವ್ಯಕ್ತಿಯೊಬ್ಬರು ಹೈದರಾಬಾದ್ ನಗರದಲ್ಲಿನ ರಸ್ತೆಗಳನ್ನು ಹೊಗಳಿ, ಅದನ್ನು ಬೆಂಗಳೂರಿನೊಂದಿಗೆ ಹೋಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನ ರಸ್ತೆಗಳು ಎಷ್ಟು ಸುಗಮ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿವೆ. ಆದರೆ ಬೆಂಗಳೂರಿನ ರೋಡ್​​ಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿ ಕ್ಯಾಲೆಬ್ ಫ್ರೀಸೆನ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಭಾರಿ ವೈರಲ್​​ ಆಗಿದೆ.

ಪೋಸ್ಟ್​​ನಲ್ಲಿ ಏನಿದೆ?

ಹೈದರಾಬಾದ್‌ನಲ್ಲಿ ರಸ್ತೆಗಳು ಅದ್ಭುತವಾಗಿದೆ. ಬೆಂಗಳೂರಿನಲ್ಲಿ ಯಾಕೆ ಇಂತಹ ರಸ್ತೆಗಳು ಇರಲಾರವು ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾವು ಈಗ ನಗರದ ಮಧ್ಯದಲ್ಲಿದ್ದೇವೆ. ಎಲ್ಲೆಡೆ ಉತ್ತಮ ರಸ್ತೆಗಳಿವೆ. ವಿವಿಧ ಪ್ರದೇಶಗಳನ್ನು ಸಂಪರ್ಕಿಸಿ ಸಂಚಾರ ಸುಲಭಗೊಳಿಸುತ್ತಿವೆ. ರಸ್ತೆಗಳು ತುಂಬಾ ಚೆನ್ನಾಗಿ ನಿರ್ಮಾಣಗೊಂಡಿವೆ. ಪಾದಚಾರಿಗಳು ಹಠಾತ್ ವಾಹನದ ಮುಂದೆ ಬರುವುದಿಲ್ಲ, ಪ್ರಾಣಿಗಳಿಲ್ಲ, ಗುಂಡಿಗಳಿಲ್ಲ. ರಸ್ತೆಗಳು ಪರಿಪೂರ್ಣ ಸ್ಥಿತಿಯಲ್ಲಿವೆ. ಬೆಂಗಳೂರಿನಲ್ಲಿ ಯಾಕೆ ಹೀಗಿಲ್ಲ? ಎಂದು ಅವರು ಪ್ರಶ್ನಿಸಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಇದನ್ನೂ ಓದಿ: ಚಹಾ, ಊಟ, ರೂಮ್… ಎಲ್ಲವೂ 50ರೂ. ಒಳಗೆ; 1985ರ ಹೋಟೆಲ್ ಬಿಲ್ ವೈರಲ್

ನನ್ನ ಗಮನಕ್ಕೆ ಬಂದಂತೆ ಬೆಂಗಳೂರಲ್ಲಿ ಇರುವ ರೀತೀ ಭಾರೀ ಟ್ರಾಫಿಕ್ ಸಮಸ್ಯೆ ಇಲ್ಲಿ ಕಡಿಮೆ. ಟ್ರಾಫಿಕ್ ಇಲ್ಲ ಎಂದಲ್ಲ, ಆದರೆ ಉತ್ತಮ ರಸ್ತೆ ನಿರ್ಮಾಣದ ಮೂಲಕ ಸಮಸ್ಯೆಯನ್ನು ನಿಯಂತ್ರಿಸಲು ನಗರ ಆಡಳಿತ ಯಶಸ್ವಿಯಾಗಿದೆ. ಹೈದರಾಬಾದ್‌ನಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಲು ಸಾಮಾನ್ಯವಾಗಿ ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹೈದರಾಬಾದ್ vs ಬೆಂಗಳೂರು ಎಂಬ ಹೊಸ ಚರ್ಚೆ ಶುರುವಾಗಿದೆ.

ಇನ್ನು ಹಲವರು ಫ್ರೀಸೆನ್ ಅಭಿಪ್ರಾಯವನ್ನು ಬೆಂಬಲಿಸಿದ್ದು, ಇನ್ನೂ ಕೆಲವರು ಹೋಲಿಕೆ ಸಂಪೂರ್ಣ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೈದರಾಬಾದ್‌ನ ಹಲವು ಪ್ರಮುಖ ರಸ್ತೆಗಳು ಖಂಡಿತವಾಗಿಯೂ ಉತ್ತಮವಾಗಿವೆ ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ಬೆಂಗಳೂರುಗೂ ಇಂತಹ ಯೋಜಿತ ರಸ್ತೆ ಅಭಿವೃದ್ಧಿ ತುರ್ತಾಗಿ ಬೇಕಾಗಿದೆ. ಟ್ರಾಫಿಕ್ ಅಸಹನೀಯವಾಗುತ್ತಿದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಪ್ರತಿ ನಗರದಲ್ಲೂ ಒಳ್ಳೆಯ ಮತ್ತು ಕೆಟ್ಟ ರಸ್ತೆಗಳಿರುತ್ತವೆ. ನೀವು ಹೈದರಾಬಾದ್‌ನ ಉತ್ತಮ ಭಾಗಗಳಲ್ಲೇ ಸಂಚರಿಸಿದ್ದೀರಿ ಎಂದು ಮಗದೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಹಾಸ್ಯವಾಗಿ ಹೈದರಾಬಾದನ್ನು ಇಷ್ಟು ಹೊಗಳಬೇಡಿ, ಇಲ್ಲಿಯೂ ಮನೆ ಬಾಡಿಗೆ ಏರಿಬಿಡುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:33 pm, Wed, 20 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್