AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊದಲ ಬಾರಿಗೆ ಪಾವ್ ಭಾಜಿ ಸವಿದು ಕ್ಯೂಟ್ ರಿಯಾಕ್ಷನ್ ಕೊಟ್ಟ ಕೆನಡಿಯನ್ ಮಹಿಳೆ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳ ಜತೆಗೆ ಇಲ್ಲಿನ ಆಹಾರ, ತಿಂಡಿ ತಿನಿಸುಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಇದೀಗ ಕೆನಡಿಯನ್ ಮಹಿಳೆ ಬಾಯಿ ಚಪ್ಪರಿಸಿಕೊಂಡು ಪಾವ್ ಭಾಜಿ ಸವಿದು, ಅದರ ರುಚಿಗೆ ಫುಲ್‌ ಫಿದಾ ಆಗಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೊದಲ ಬಾರಿಗೆ ಪಾವ್ ಭಾಜಿ ಸವಿದು ಕ್ಯೂಟ್ ರಿಯಾಕ್ಷನ್ ಕೊಟ್ಟ ಕೆನಡಿಯನ್ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 31, 2026 | 7:14 PM

Share

ಇಂಡಿಯನ್ ಫುಡ್ ಅಂದ್ರೆ ಭಾರತೀಯರಿಗೆ ಮಾತ್ರವಲ್ಲ, ವಿದೇಶಿಗರಿಗೂ ಇಷ್ಟ. ಹೀಗಾಗಿ ಭಾರತಕ್ಕೆ ಭೇಟಿ ನೀಡುವ ವಿದೇಶಿಗರು ಇಲ್ಲಿನ ಫುಡ್‌ನ ರುಚಿ ಸವಿಯುತ್ತಾರೆ. ಇದೀಗ ವಿದೇಶಿ ಮಹಿಳೆ (foreign woman) ಮೊದಲ ಬಾರಿಗೆ ಪಾವ್ ಭಾಜಿ ಸವಿದಿದ್ದಾಳೆ. ಹೌದು, ಮುಂಬೈನ ಸ್ಪೆಷಲ್ ತಿನಿಸು ಸವಿದು ಫಿದಾ ಆಗಿದ್ದಾಳೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಪಾವ್‌ ಭಾಜಿ ಸವಿದ ಕೆನಡಿಯನ್‌ ಮಹಿಳೆ

ವೆಗ್ ಮೊಮೊ (Vegg Momo) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕೆನಡಿಯನ್ ಮಹಿಳೆ ಪಾವ್ ಸವಿಯುವ ದೃಶ್ಯವನ್ನು ಕಾಣಬಹುದು. ಆ ಬಳಿಕ ಆಕೆಯ ಜತೆಗೆ ಇದ್ದವರು ಪಾವ್ ಭಾಜಿ ಹೇಗೆ ಸವಿಯುವುದೆಂದು ಹೇಳಿಕೊಟ್ಟಿದ್ದಾರೆ. ಪಾವ್ ಜತೆಗೆ ಭಾಜಿ ಹಾಗೂ ಮಸಾಲೆಭರಿತ ಈರುಳ್ಳಿಯನ್ನು ಬಾಯಿಚಪ್ಪರಿಸಿಕೊಂಡು ಸವಿದಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by VEGG MOMO (@veggmomo)

ಇದನ್ನೂ ಓದಿ: ಕೃಷಿ ಕಾಯಕದಲ್ಲಿ ತೊಡಗಿದ್ದ ಹಳ್ಳಿ ಮಹಿಳೆಯರ ಜತೆಗೆ ಬೆರೆತ ವಿದೇಶಿ ಮಹಿಳೆ

ಈ ವಿಡಿಯೋ ಒಂಭತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪಾವ್ ಭಾಜಿ ತಿಂದ ಬಳಿಕ ಆಕೆಯ ರಿಯಾಕ್ಷನ್ ನೋಡಿ ಶಾಕ್ ಆಯ್ತು ಎಂದಿದ್ದಾರೆ. ಇನ್ನೊಬ್ಬರು, ಭಾಜಿ ಸವಿಯಲು ಆಕೆಗೆ ಸ್ಫೂನ್ ಕೊಡಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಆರೋಗ್ಯಕರ ಪಾವ್ ಭಾಜಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ