AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭೀಕರ ಅಪಘಾತಕ್ಕೆ ಬೈಕ್ ಸವಾರ ಐದು ಪಲ್ಟಿ; ವೈರಲ್ ವಿಡಿಯೋ ಇಲ್ಲಿದೆ

ಕೇವಲ ಎಂಟು ಸೆಕೆಂಡುಗಳಷ್ಟೆ, ಕಾರಿಗೆ ಡಿಕ್ಕಿ ಹೊಡೆದು ಐದು ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ ಬೈಕ್ ಸವಾರ ಮತ್ತೆ ಏಳಲೇ ಇಲ್ಲವೆಂಬತೆ ತೋರಿಸುತ್ತಿದೆ ಈ ವೈರಲ್ ವಿಡಿಯೋ.

Viral Video: ಭೀಕರ ಅಪಘಾತಕ್ಕೆ ಬೈಕ್ ಸವಾರ ಐದು ಪಲ್ಟಿ; ವೈರಲ್ ವಿಡಿಯೋ ಇಲ್ಲಿದೆ
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ
TV9 Web
| Edited By: Rakesh Nayak Manchi|

Updated on:Sep 25, 2022 | 10:31 AM

Share

ನೀವು ಕೆಲವೊಮ್ಮೆ ಹಿಂದೆ ಮುಂದೆ ನೋಡದೆ ಯಾವುದೋ ಯೋಚನೆ ಮಾಡಿಕೊಂಡು ವಾಹನವನ್ನು ಚಲಾಯಿಸುತ್ತಿರಾ? ಎಂದಿಗೂ ಈ ತಪ್ಪನ್ನು ಮಾಡದಿರಿ. ಇದಕ್ಕೆ ಪೂರಕವಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದನ್ನು ನೀವು ನೋಡಿದರೆ ಎಂದಿಗೂ ಮೈಮರೆತು ವಾಹನ ಚಲಾಯಿಸುವುದಿಲ್ಲ. ರಸ್ತೆಗಳಲ್ಲಿ ನಡೆಯುತ್ತಿರಲಿ ಅಥವಾ  ವಾಹನದಲ್ಲಿ ಹೋಗುತ್ತಿರುವಾಗಲೇ ಆಗಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎನ್ನಲಾಗುತ್ತದೆ. ಇದಕ್ಕೆ ಕಾರಣ ರಸ್ತೆ ಅಪಘಾತಗಳೆಲ್ಲವೂ ಆಕಸ್ಮಿಕವಾಗಿ ನಡೆಯುವಂತಹದ್ದು. ಎಲ್ಲಿಂದ ಯಾವ ವಾಹನ ಬಂದು ಡಿಕ್ಕಿ ಹೊಡೆಯುತ್ತದೆ ಎಂದು ತಿಳಿಯುವುದೇ ಇಲ್ಲ. ಇದೀಗ ವೈರಲ್ ಆಗುತ್ತಿರುವ ವಿಡಿಯೋ (Viral video)ದಲ್ಲಿ ಬೈಕ್ ಮತ್ತು ಕಾರಿನ ನಡುವೆ ನಡೆದಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೇಲಕ್ಕೆ ಎಸೆದು ಐದು ಪಲ್ಟಿ ಹೊಡೆದು ರಸ್ತೆಗೆ ಅಪ್ಪಳಿಸುವುದನ್ನು ನೋಡುವಾಗ ಮೈ ಜುಮ್ಮೆನ್ನುತ್ತದೆ.

ವಿಡಿಯೋದಲ್ಲಿ ಕಾಣುವಂತೆ, ವೇಗವಾಗಿ ಬೈಕ್ ಓಡಿಸುತ್ತಿದ್ದ ವ್ಯಕ್ತಿಯೊಬ್ಬ ಎಡಕ್ಕೆ ತಿರುಗಿಸಿ ಇನ್ನೊಂದು ರಸ್ತೆಗೆ ಹೋಗಲು ಯತ್ನಿಸಿದ್ದಾನೆ. ಈ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಎಸೆಯಲ್ಪಟ್ಟು ಕಾರಿನ ಮುಂಭಾಗದಿಂದ ಹಿಂಭಾಗಕ್ಕೆ ಐದು ಪಲ್ಟಿ ಹೊಡೆದು ನಂತರ ರಸ್ತೆಗೆ ಅಪ್ಪಳಿಸಿದ್ದಾನೆ. ನಂತರ ಬೈಕ್ ಸವಾರನ ಯಾವುದೇ ಚಲನೆ ಇರುವುದಿಲ್ಲ. ಬಹುಶಃ ಜೀವಕ್ಕೆ ಹಾನಿಯಾಗಿರಬಹುದು.

ಈ ಹೃದಯ ವಿದ್ರಾವಕ ವೀಡಿಯೊವನ್ನು AccidentTraffi3 ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 8 ಸೆಕೆಂಡ್‌ಗಳ ಈ ವೀಡಿಯೋವನ್ನು ಇದುವರೆಗೆ 24 ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದ್ದು, ನೂರಾರು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ ಮತ್ತು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Sun, 25 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ