AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ

Car Accident : ಅಮೆರಿಕದ ಅಪ್ರಾಪ್ತ ಚಾಲಕನೊಬ್ಬನ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಾಫಿಕ್​ ಪೊಲೀಸ್​ಗೆ ಢಿಕ್ಕಿ ಹೊಡೆದಿದೆ. ಮುಂದೆ ಏನಾಯಿತೆಂದು ತಿಳಿಯಲು ಈ ವಿಡಿಯೋ ನೋಡಿ.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ
ಅಮೆರಿಕದ ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ ಹೊಡೆದ ಕಾರು
TV9 Web
| Edited By: |

Updated on:May 03, 2023 | 1:35 PM

Share

Viral Video : ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಅಲ್ಲಿದ್ದ ಟ್ರಾಫಿಕ್​ ಪೊಲೀಸ್​ ಮತ್ತು ಕಾರಿನ ಚಾಲಕ ಸದ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅನ್ನು ನೆಟ್ಟಿಗರು ಗಾಬರಿಯಿಂದ ನೋಡುತ್ತಿದ್ದಾರೆ.

ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಪೊಲೀಸ್ ಡ್ಯಾಶ್‌ಕ್ಯಾಮ್‌ನಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. ಈ ವಿಡಿಯೋ ಅನ್ನು ಪೊಲೀಸ್ ಇಲಾಖೆಯು ತನ್ನ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದೆ; ಮೇ 1 ರಂದು, ಸುಮಾರು 11:38 ಗಂಟೆಗೆ, ಬಿಎಂಡಬ್ಲ್ಯೂ 750 ಕಾರಿನ ಬಳಿ ಪೊಲೀಸ್​ ಸಮಾಲೋಚನೆ ನಡೆಸುತ್ತಿರುವ ಹೊತ್ತಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬ್ರಾಡ್ಡಾಕ್ ರಸ್ತೆಯ ಸೌತ್ ಫೇರ್‌ಫ್ಯಾಕ್ಸ್ ಕೌಂಟಿ ಪಾರ್ಕ್​ ದಾರಿಯಲ್ಲಿ ಕಪ್ಪುಬಣ್ಣದ ಬಿಎಂಡಬ್ಲ್ಯೂ ಎಂ 3 ಕಾರಿನಲ್ಲಿದ್ದ 17 ವರ್ಷದ ಚಾಲಕನು ಅತೀವೇಗದಲ್ಲಿ ಚಲಿಸುತ್ತಿದ್ದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡಿದೆ.’ ಎಂದು ಫೇರ್‌ಫ್ಯಾಕ್ಸ್ ಕೌಂಟಿ ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನ ಓದಿ : ಹಾವು ಆಕಳಿಸಿದಾಗ;ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ; ಎಂದ ನೆಟ್ಟಿಗ

‘ಭೀಕರ ದುರಂತಕ್ಕೆ ಕಾರಣವಾಗಿಲ್ಲ ಎನ್ನುವುದೇ ಸಮಾಧಾನದ ಸಂಗತಿ. ಆದರೆ ಅಪ್ರಾಪ್ತ ವಯಸ್ಸಿನ ಚಾಲಕನ ಪೋಷಕರು ಈ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಅಜಾಗರೂಕತೆಯಿಂದ ಚಲಿಸಿದರೆ ಇತರರಿಗೆ ಹೇಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು’ ಎಂದಿದ್ದಾರೆ ಪೊಲೀಸರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:27 pm, Wed, 3 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್