AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳು ಎಚ್ಚರಿಕೆ ಸಂದೇಶವನ್ನು ಸಾರುತ್ತವೆ. ಅವುಗಳಲ್ಲಿ ಕೆಲವು ಹೃದಯ ಗೆಲ್ಲುವಂತಹ ದೃಶ್ಯಗಳಾಗಿರುತ್ತವೆ. ಇದೀಗ ನೆಟ್ಟಿಗರ ಮನ ಗೆದ್ದ ವಿಡಿಯೋ ಕೂಡಾ ಅಂಥದ್ದೇ! ವಿಡಿಯೋ ನೋಡಿ.

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ
ರೈಲಿಗೆ ಸಿಕ್ಕಿ ಪ್ರಾಣಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ!
TV9 Web
| Edited By: |

Updated on:Oct 15, 2021 | 10:06 AM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅದೆಷ್ಟೋ ವಿಡಿಯೋಗಳಲ್ಲಿ ಕೆಲವು ತಮಾಷೆಯಾಗಿದ್ದರೆ, ಇನ್ನು ಕೆಲವು ಎಚ್ಚರಿಕೆ ಸಂದೇಶವನ್ನು ಸಾರುತ್ತವೆ. ಅವುಗಳಲ್ಲಿ ಕೆಲವು ಹೃದಯ ಗೆಲ್ಲುವಂತಹ ದೃಶ್ಯಗಳಾಗಿರುತ್ತವೆ. ಇದೀಗ ನೆಟ್ಟಿಗರ ಮನ ಗೆದ್ದ ವಿಡಿಯೋ ಕೂಡಾ ಅಂಥದ್ದೇ! ಜನರನ್ನು ಪ್ರೇರೇಪಿಸುವಂತಹ ದೃಶ್ಯ ಇದಾಗಿದ್ದು, ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಮುದ್ದಾದ ಬೆಕ್ಕಿನ ಮರಿಯನ್ನು ರಕ್ಷಿಸಲಾಗಿದೆ. ಎಟಿಎಂ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಓರ್ವರು ಬೆಕ್ಕಿನ ಮರಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನ ಗುಡ್ ನ್ಯೂಸ್ ಮೂವ್​ಮೆಂಟ್​ ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಜನರ ಒಳ್ಳೆಯ ಕಾರ್ಯಗಳನ್ನು ತೋರಿಸುವ ವಿಡಿಯೋಗಳು ಬಹುಬೇಗ ಹೃದಯಗೆಲ್ಲುವುದಂತೂ ಸತ್ಯ. ಅದೇ ರೀತಿ ಈ ದೃಶ್ಯ ಕೂಡಾ ಸಾಮಾಜಿಕ ಬಳಕೆದಾರರ ಹೃದಯ ಗೆದ್ದಿದೆ. ಒಂದು ದಿನದ ಹಿಂದೆ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಜನರು ಅದ್ಭುತ ಕಾಮೆಂಟ್ಗಳನ್ನು ಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ.

ಘಟನೆ ನ್ಯೂಯಾರ್ಕ್​ನಲ್ಲಿ ನಡೆದಿದೆ. ವ್ಯಕ್ತಿ ಬೆಕ್ಕನ್ನು ರಕ್ಷಿಸುತ್ತಿರುವುದನ್ನು ವಿಡಿಯೋದಲ್ಲಿ ನೊಡಬಹುದು. ವಿಡಿಯೋ ಹಂಚಿಕೊಂಡಾಗಿನಿಂದ 3,30,000 ಬಾರಿ ವಿಡಿಯೋ ವೀಕ್ಷಣೆಯಾಗಿದೆ. ವಿಡಿಯೋ ಅದ್ಭುತವಾಗಿದೆ ಎಂದು ಕೆಲವರು ಹೇಳಿದ್ದಾರೆ. ಹೃದಯವಂತ ವ್ಯಕ್ತಿ ಎಂದು ಮತ್ತೋರ್ವರು ಹೇಳಿದ್ದಾರೆ. ಸಹಾಯ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಕೆಲವರು ಕೃತಜ್ಞತೆ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Video: ಚುರುಕಾದ ಶ್ವಾನದ ವಿಡಿಯೋ ಹಂಚಿಕೊಂಡು ಬದುಕಿನ ಪಾಠ ಹೇಳಿದ ಆನಂದ್ ಮಹೀಂದ್ರಾ; ವಿಡಿಯೋ ನೋಡಿ

Published On - 9:56 am, Fri, 15 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ