AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್

To Escape Molestation : ಅಶ್ಲೀಲ ಮಾತುಗಳಿಂದ ಆಟೋಚಾಲಕ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಬಾಲಕಿ ಹಿಂದೆಮುಂದೆ ನೋಡದೆ ಸಂಚಾರದಟ್ಟಣೆಯಿದ್ದ ರಸ್ತೆಗೆ ಜಿಗಿದುಬಿಟ್ಟಿದ್ದಾಳೆ. ಈ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್
Caught On Camera Girl Jumps Off Speeding Autorickshaw To Escape Molestation Bid In Aurangabad
TV9 Web
| Edited By: ಶ್ರೀದೇವಿ ಕಳಸದ|

Updated on:Nov 16, 2022 | 1:11 PM

Share

Viral Video : ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆಟೋ ಚಾಲಕ ಕಿರುಕುಳ ಕೊಡಲು ಯತ್ನಿಸಿದಾಗ, ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಬಾಲಕಿ ರಸ್ತೆಗೆ ಜಿಗಿದಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಅಡಕವಾಗಿದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ಚಾಲಕನನ್ನು ಶಪಿಸುತ್ತಿದ್ದಾರೆ.

ಬಾಲಕಿ ಹೀಗೆ ರಸ್ತೆಗೆ ಜಿಗಿದು ಬೀಳುತ್ತಿದ್ದಂತೆ ಇತರೇ ವಾಹನ ಸವಾರರು ಅವಳನ್ನು ತಕ್ಷಣವೇ ರಕ್ಷಿಸಿದ್ದಾರೆ. ಆಟೋ ಚಾಲಕ ಕೊಡುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳಲೆಂದೇ ಈಕೆ ಹೀಗೆ ಜಿಗಿದಿದ್ದಾಳೆ. ಆ ಜಿಗಿತದ ಪರಿಣಾಮ ಏನಾಗಬಹುದು ಎಂಬ ಅಂದಾಜು ಆಕೆಗೆ ಗೊತ್ತಾಗಿಲ್ಲ. ತಲೆಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅದೃಷ್ಟವಶಾತ್​ ಬದುಕುಳಿದಿದ್ದಾಳೆ.

ಆಟೋ ಚಾಲಕ ಸಯ್ಯದ್ ಅಕ್ಬರ್ ಹಮೀದ್​ನನ್ನು ಬಂಧಿಸಿದ ಔರಂಗಾಬಾದ್​ನ ಕ್ರಾಂತಿ ಚೌಕ್​ ಪೊಲೀಸ್​ ಠಾಣೆಯ ಪೊಲೀಸರು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣಾ ಕಾಯ್ದೆ (Pocso) ಅಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್​ ಇನ್ಸ್​ಪೆಕ್ಟರ್​ ಗಣಪತ್ ದಾರಾಡೆ, ‘ಈ ಅಪ್ರಾಪ್ತ ಬಾಲಕಿಯು ಉಸ್ಮಾನ್​ಪುರದಿಂದ ತನ್ನ ಮನೆಗೆ ಆಟೋದಲ್ಲಿ ಹೊರಟಿದ್ದಾಗ ಆಟೋಚಾಲಕ ಅಶ್ಲೀಲವಾದ ಮಾತುಗಳನ್ನಾಡಿ ಕಿರುಕುಳ ನೀಡಿದ್ದಾನೆ. ನಂತರ ಬಾಲಕಿಗೆ ಅವನ ಈ ನಡೆ ತಪ್ಪು ಎಂದು ಅರ್ಥವಾಗಿದೆ. ಅಷ್ಟೊತ್ತಿಗೆ ಆಟೊ ಖಾನಾ ಕಾಂಪ್ಲೆಕ್ಸ್​ ಬಳಿ ಬಂದಿದೆ. ಹಿಂದೆಮುಂದೆ ಯೋಚಿಸದೆ ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಸಂಚಾರದಟ್ಟಣೆ ಲೆಕ್ಕಿಸದೆ ಜಿಗಿದುಬಿಟ್ಟಿದ್ದಾಳೆ.’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:09 pm, Wed, 16 November 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’