AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್

To Escape Molestation : ಅಶ್ಲೀಲ ಮಾತುಗಳಿಂದ ಆಟೋಚಾಲಕ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಬಾಲಕಿ ಹಿಂದೆಮುಂದೆ ನೋಡದೆ ಸಂಚಾರದಟ್ಟಣೆಯಿದ್ದ ರಸ್ತೆಗೆ ಜಿಗಿದುಬಿಟ್ಟಿದ್ದಾಳೆ. ಈ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್
Caught On Camera Girl Jumps Off Speeding Autorickshaw To Escape Molestation Bid In Aurangabad
TV9 Web
| Edited By: |

Updated on:Nov 16, 2022 | 1:11 PM

Share

Viral Video : ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆಟೋ ಚಾಲಕ ಕಿರುಕುಳ ಕೊಡಲು ಯತ್ನಿಸಿದಾಗ, ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಬಾಲಕಿ ರಸ್ತೆಗೆ ಜಿಗಿದಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಅಡಕವಾಗಿದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ಚಾಲಕನನ್ನು ಶಪಿಸುತ್ತಿದ್ದಾರೆ.

ಬಾಲಕಿ ಹೀಗೆ ರಸ್ತೆಗೆ ಜಿಗಿದು ಬೀಳುತ್ತಿದ್ದಂತೆ ಇತರೇ ವಾಹನ ಸವಾರರು ಅವಳನ್ನು ತಕ್ಷಣವೇ ರಕ್ಷಿಸಿದ್ದಾರೆ. ಆಟೋ ಚಾಲಕ ಕೊಡುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳಲೆಂದೇ ಈಕೆ ಹೀಗೆ ಜಿಗಿದಿದ್ದಾಳೆ. ಆ ಜಿಗಿತದ ಪರಿಣಾಮ ಏನಾಗಬಹುದು ಎಂಬ ಅಂದಾಜು ಆಕೆಗೆ ಗೊತ್ತಾಗಿಲ್ಲ. ತಲೆಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅದೃಷ್ಟವಶಾತ್​ ಬದುಕುಳಿದಿದ್ದಾಳೆ.

ಆಟೋ ಚಾಲಕ ಸಯ್ಯದ್ ಅಕ್ಬರ್ ಹಮೀದ್​ನನ್ನು ಬಂಧಿಸಿದ ಔರಂಗಾಬಾದ್​ನ ಕ್ರಾಂತಿ ಚೌಕ್​ ಪೊಲೀಸ್​ ಠಾಣೆಯ ಪೊಲೀಸರು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣಾ ಕಾಯ್ದೆ (Pocso) ಅಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್​ ಇನ್ಸ್​ಪೆಕ್ಟರ್​ ಗಣಪತ್ ದಾರಾಡೆ, ‘ಈ ಅಪ್ರಾಪ್ತ ಬಾಲಕಿಯು ಉಸ್ಮಾನ್​ಪುರದಿಂದ ತನ್ನ ಮನೆಗೆ ಆಟೋದಲ್ಲಿ ಹೊರಟಿದ್ದಾಗ ಆಟೋಚಾಲಕ ಅಶ್ಲೀಲವಾದ ಮಾತುಗಳನ್ನಾಡಿ ಕಿರುಕುಳ ನೀಡಿದ್ದಾನೆ. ನಂತರ ಬಾಲಕಿಗೆ ಅವನ ಈ ನಡೆ ತಪ್ಪು ಎಂದು ಅರ್ಥವಾಗಿದೆ. ಅಷ್ಟೊತ್ತಿಗೆ ಆಟೊ ಖಾನಾ ಕಾಂಪ್ಲೆಕ್ಸ್​ ಬಳಿ ಬಂದಿದೆ. ಹಿಂದೆಮುಂದೆ ಯೋಚಿಸದೆ ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಸಂಚಾರದಟ್ಟಣೆ ಲೆಕ್ಕಿಸದೆ ಜಿಗಿದುಬಿಟ್ಟಿದ್ದಾಳೆ.’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:09 pm, Wed, 16 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್