AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್

To Escape Molestation : ಅಶ್ಲೀಲ ಮಾತುಗಳಿಂದ ಆಟೋಚಾಲಕ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಬಾಲಕಿ ಹಿಂದೆಮುಂದೆ ನೋಡದೆ ಸಂಚಾರದಟ್ಟಣೆಯಿದ್ದ ರಸ್ತೆಗೆ ಜಿಗಿದುಬಿಟ್ಟಿದ್ದಾಳೆ. ಈ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್
Caught On Camera Girl Jumps Off Speeding Autorickshaw To Escape Molestation Bid In Aurangabad
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 16, 2022 | 1:11 PM

Viral Video : ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆಟೋ ಚಾಲಕ ಕಿರುಕುಳ ಕೊಡಲು ಯತ್ನಿಸಿದಾಗ, ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಬಾಲಕಿ ರಸ್ತೆಗೆ ಜಿಗಿದಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಅಡಕವಾಗಿದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ಚಾಲಕನನ್ನು ಶಪಿಸುತ್ತಿದ್ದಾರೆ.

ಬಾಲಕಿ ಹೀಗೆ ರಸ್ತೆಗೆ ಜಿಗಿದು ಬೀಳುತ್ತಿದ್ದಂತೆ ಇತರೇ ವಾಹನ ಸವಾರರು ಅವಳನ್ನು ತಕ್ಷಣವೇ ರಕ್ಷಿಸಿದ್ದಾರೆ. ಆಟೋ ಚಾಲಕ ಕೊಡುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳಲೆಂದೇ ಈಕೆ ಹೀಗೆ ಜಿಗಿದಿದ್ದಾಳೆ. ಆ ಜಿಗಿತದ ಪರಿಣಾಮ ಏನಾಗಬಹುದು ಎಂಬ ಅಂದಾಜು ಆಕೆಗೆ ಗೊತ್ತಾಗಿಲ್ಲ. ತಲೆಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅದೃಷ್ಟವಶಾತ್​ ಬದುಕುಳಿದಿದ್ದಾಳೆ.

ಆಟೋ ಚಾಲಕ ಸಯ್ಯದ್ ಅಕ್ಬರ್ ಹಮೀದ್​ನನ್ನು ಬಂಧಿಸಿದ ಔರಂಗಾಬಾದ್​ನ ಕ್ರಾಂತಿ ಚೌಕ್​ ಪೊಲೀಸ್​ ಠಾಣೆಯ ಪೊಲೀಸರು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣಾ ಕಾಯ್ದೆ (Pocso) ಅಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್​ ಇನ್ಸ್​ಪೆಕ್ಟರ್​ ಗಣಪತ್ ದಾರಾಡೆ, ‘ಈ ಅಪ್ರಾಪ್ತ ಬಾಲಕಿಯು ಉಸ್ಮಾನ್​ಪುರದಿಂದ ತನ್ನ ಮನೆಗೆ ಆಟೋದಲ್ಲಿ ಹೊರಟಿದ್ದಾಗ ಆಟೋಚಾಲಕ ಅಶ್ಲೀಲವಾದ ಮಾತುಗಳನ್ನಾಡಿ ಕಿರುಕುಳ ನೀಡಿದ್ದಾನೆ. ನಂತರ ಬಾಲಕಿಗೆ ಅವನ ಈ ನಡೆ ತಪ್ಪು ಎಂದು ಅರ್ಥವಾಗಿದೆ. ಅಷ್ಟೊತ್ತಿಗೆ ಆಟೊ ಖಾನಾ ಕಾಂಪ್ಲೆಕ್ಸ್​ ಬಳಿ ಬಂದಿದೆ. ಹಿಂದೆಮುಂದೆ ಯೋಚಿಸದೆ ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಸಂಚಾರದಟ್ಟಣೆ ಲೆಕ್ಕಿಸದೆ ಜಿಗಿದುಬಿಟ್ಟಿದ್ದಾಳೆ.’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:09 pm, Wed, 16 November 22

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?