AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್

To Escape Molestation : ಅಶ್ಲೀಲ ಮಾತುಗಳಿಂದ ಆಟೋಚಾಲಕ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಬಾಲಕಿ ಹಿಂದೆಮುಂದೆ ನೋಡದೆ ಸಂಚಾರದಟ್ಟಣೆಯಿದ್ದ ರಸ್ತೆಗೆ ಜಿಗಿದುಬಿಟ್ಟಿದ್ದಾಳೆ. ಈ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ.

ಚಾಲಕನ ಕಿರುಕುಳ ತಪ್ಪಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಜಿಗಿದ ಬಾಲಕಿಯ ವಿಡಿಯೋ ವೈರಲ್
Caught On Camera Girl Jumps Off Speeding Autorickshaw To Escape Molestation Bid In Aurangabad
TV9 Web
| Edited By: ಶ್ರೀದೇವಿ ಕಳಸದ|

Updated on:Nov 16, 2022 | 1:11 PM

Share

Viral Video : ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆಟೋ ಚಾಲಕ ಕಿರುಕುಳ ಕೊಡಲು ಯತ್ನಿಸಿದಾಗ, ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಬಾಲಕಿ ರಸ್ತೆಗೆ ಜಿಗಿದಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಅಡಕವಾಗಿದೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ಚಾಲಕನನ್ನು ಶಪಿಸುತ್ತಿದ್ದಾರೆ.

ಬಾಲಕಿ ಹೀಗೆ ರಸ್ತೆಗೆ ಜಿಗಿದು ಬೀಳುತ್ತಿದ್ದಂತೆ ಇತರೇ ವಾಹನ ಸವಾರರು ಅವಳನ್ನು ತಕ್ಷಣವೇ ರಕ್ಷಿಸಿದ್ದಾರೆ. ಆಟೋ ಚಾಲಕ ಕೊಡುತ್ತಿದ್ದ ಕಿರುಕುಳದಿಂದ ತಪ್ಪಿಸಿಕೊಳ್ಳಲೆಂದೇ ಈಕೆ ಹೀಗೆ ಜಿಗಿದಿದ್ದಾಳೆ. ಆ ಜಿಗಿತದ ಪರಿಣಾಮ ಏನಾಗಬಹುದು ಎಂಬ ಅಂದಾಜು ಆಕೆಗೆ ಗೊತ್ತಾಗಿಲ್ಲ. ತಲೆಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅದೃಷ್ಟವಶಾತ್​ ಬದುಕುಳಿದಿದ್ದಾಳೆ.

ಆಟೋ ಚಾಲಕ ಸಯ್ಯದ್ ಅಕ್ಬರ್ ಹಮೀದ್​ನನ್ನು ಬಂಧಿಸಿದ ಔರಂಗಾಬಾದ್​ನ ಕ್ರಾಂತಿ ಚೌಕ್​ ಪೊಲೀಸ್​ ಠಾಣೆಯ ಪೊಲೀಸರು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣಾ ಕಾಯ್ದೆ (Pocso) ಅಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್​ ಇನ್ಸ್​ಪೆಕ್ಟರ್​ ಗಣಪತ್ ದಾರಾಡೆ, ‘ಈ ಅಪ್ರಾಪ್ತ ಬಾಲಕಿಯು ಉಸ್ಮಾನ್​ಪುರದಿಂದ ತನ್ನ ಮನೆಗೆ ಆಟೋದಲ್ಲಿ ಹೊರಟಿದ್ದಾಗ ಆಟೋಚಾಲಕ ಅಶ್ಲೀಲವಾದ ಮಾತುಗಳನ್ನಾಡಿ ಕಿರುಕುಳ ನೀಡಿದ್ದಾನೆ. ನಂತರ ಬಾಲಕಿಗೆ ಅವನ ಈ ನಡೆ ತಪ್ಪು ಎಂದು ಅರ್ಥವಾಗಿದೆ. ಅಷ್ಟೊತ್ತಿಗೆ ಆಟೊ ಖಾನಾ ಕಾಂಪ್ಲೆಕ್ಸ್​ ಬಳಿ ಬಂದಿದೆ. ಹಿಂದೆಮುಂದೆ ಯೋಚಿಸದೆ ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಸಂಚಾರದಟ್ಟಣೆ ಲೆಕ್ಕಿಸದೆ ಜಿಗಿದುಬಿಟ್ಟಿದ್ದಾಳೆ.’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:09 pm, Wed, 16 November 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’