Viral Video: ಆನೆ ತುಳಿತಕ್ಕೆ ಮಾವುತ ಸಾವು; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

Updated on: Apr 04, 2024 | 5:50 PM

ಅರವಿಂದ್ ಎಂಬ 26 ವರ್ಷದ ಮಾವುತ ಆನೆಯ ತುಳಿತಕ್ಕೆ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಭೀಕರ ಘಟನೆಗೆ ಸಂಬಂಧಿಸಿದ ದೃಶ್ಯ ದೇವಾಲಯದ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಮಾವುತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಕೇರಳದ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದ ಕಾರ್ಯಕ್ರಮದ ವೇಳೆ ಪುತ್ತುಪ್ಪಲ್ಲಿ ಮೂಲದ ಅರವಿಂದ್ ಎಂಬ 26 ವರ್ಷದ ಮಾವುತ ಆನೆಯ ತುಳಿತಕ್ಕೆ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಬುಧವಾರ(ಏ.03) ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಭೀಕರ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ದೇವಾಲಯದ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

@baldwhiner ಎಂಬ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಇಂದು(ಏಪ್ರಿಲ್​​ 04) ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 6 ಗಂಟೆಗಳಲ್ಲಿ 20 ಸಾವಿರಕ್ಕೂ ಹೆಚ್ಚಿನ ನೆಟ್ಟಿಗರನ್ನು ತಲುಪಿದೆ.

ಇದನ್ನೂ ಓದಿ: ಕಾರು ಹರಿದು 4 ವರ್ಷದ ಮಗು ಸಾವು: ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ

ಕುಂಜುಲಕ್ಷ್ಮಿ ಎಂದು ಕರೆಯಲ್ಪಡುವ ಈ ಆನೆಯನ್ನು ದೇವಾಲಯದ ಸಮಾರಂಭಕ್ಕೆ ತಕ್ಕಂತೆ ಅಲಂಕಾರಗೊಳಿಸಲಾಗಿತ್ತು. ಶಾಂತವಾಗಿದ್ದ ಆನೆ ಇದ್ದಕ್ಕಿದ್ದಂತೆ ಓಡಾಡತೊಡಗಿದ್ದು ಆನೆಯ ಪಾದಗಳ ಸಮೀಪದಲ್ಲಿದ್ದ ಮಾವುತ ಅರವಿಂದನನ್ನು ಕಾಲಿನಲ್ಲಿ ತುಳಿದು ಹಾಕಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ವೈಕಂ ತಾಲೂಕು ಆಸ್ಪತ್ರೆ ಮಾವುತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 04, 2024 05:50 PM
Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More