AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ  ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ
ಅಕ್ಷತಾ ವರ್ಕಾಡಿ
|

Updated on: Aug 27, 2024 | 5:18 PM

Share

ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ಕರಡಿಯೊಂದು ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕ ಕಂಬಳಿ ಸುತ್ತಿಕೊಂಡು ಗೊರಕೆ ಹೊಡೆಯುತ್ತಾ ಮಲಗಿದ್ದು, ದೈತ್ಯ ಕರಡಿ ಮನೆಯೊಳಗೆ ನುಗ್ಗಿ ಹೊರ ಹೋಗಲು ದಾರಿ ಕಾಣದೇ ಮನೆಯೊಳಗೆ ಏನೋ ಹುಡುಕಿತ್ತಿದ್ದಂತೆ ಸುತ್ತುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಕರಡಿ ಕೋಣೆಯೊಳಗೆ ಬಂದು ಕೋಣೆಯ ಸುತ್ತಲೂ ಮೇಜಿನ ಕೆಳಗೆ, ಏನೋ ಹುಡುಕುತ್ತಿರುವುದು ಕಂಡುಬಂದಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

ಗಾಬರಿಗೊಂಡ ಯುವಕ ತಕ್ಷಣ ಅಲ್ಲಿಂದ ತನ್ನ ಮೊಬೈಲ್ ತೆಗೆದುಕೊಂಡು ಕ್ಷಣಮಾತ್ರದಲ್ಲಿ ಅಲ್ಲಿಂದ ಓಡಿ ಹೋಗಿದ್ದಾನೆ. ಕರಡಿ ಕೂಡ ಅವನನ್ನು ಹಿಂಬಾಲಿಸಿಕೊಂಡು ಹೋಗಿದ್ದು, ವಿಡಿಯೋದ ಕೊನೆಯಲ್ಲಿ ಕರಡಿ ಕೂಡ ಮನೆಯಿಂದ ಹೊರಬರುತ್ತಿರುವುದು ಸೆರೆಯಾಗಿದೆ.

@Yoda4ever ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 80 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ