Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

Viral Video: ಗಾಢ ನಿದ್ದೆಯಲ್ಲಿದ್ದ ಯುವಕನ  ಮನೆಯೊಳಗೆ ನುಗ್ಗಿದ ಕರಡಿ; ಮುಂದೇನಾಯಿತು ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Aug 27, 2024 | 5:18 PM

ಗಾಢ ನಿದ್ದೆಯಲ್ಲಿದ್ದ ಯುವಕನ ಮನೆಯೊಳಗೆ ಕರಡಿಯೊಂದು ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕ ಕಂಬಳಿ ಸುತ್ತಿಕೊಂಡು ಗೊರಕೆ ಹೊಡೆಯುತ್ತಾ ಮಲಗಿದ್ದು, ದೈತ್ಯ ಕರಡಿ ಮನೆಯೊಳಗೆ ನುಗ್ಗಿ ಹೊರ ಹೋಗಲು ದಾರಿ ಕಾಣದೇ ಮನೆಯೊಳಗೆ ಏನೋ ಹುಡುಕಿತ್ತಿದ್ದಂತೆ ಸುತ್ತುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕರಡಿ ಹೊರಗಿನಿಂದ ಬಂದು ಬಾಗಿಲು ತೆರೆದು ಯಾವುದೇ ಹಿಂಜರಿಕೆಯಿಲ್ಲದೆ ಮನೆಯೊಳಗೆ ನುಗ್ಗಿದೆ. ಕರಡಿ ಕೋಣೆಯೊಳಗೆ ಬಂದು ಕೋಣೆಯ ಸುತ್ತಲೂ ಮೇಜಿನ ಕೆಳಗೆ, ಏನೋ ಹುಡುಕುತ್ತಿರುವುದು ಕಂಡುಬಂದಿದೆ. ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದ ಯುವಕನಿಗೆ ಮೊದಲು ಏನೂ ಅರ್ಥವಾಗಲಿಲ್ಲ. ಬಳಿಕ ಕಣ್ಣು ತೆರೆದು ಗಾಬರಿಯಾದ ಯುವಕ, ಕೂಡಲೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

ಗಾಬರಿಗೊಂಡ ಯುವಕ ತಕ್ಷಣ ಅಲ್ಲಿಂದ ತನ್ನ ಮೊಬೈಲ್ ತೆಗೆದುಕೊಂಡು ಕ್ಷಣಮಾತ್ರದಲ್ಲಿ ಅಲ್ಲಿಂದ ಓಡಿ ಹೋಗಿದ್ದಾನೆ. ಕರಡಿ ಕೂಡ ಅವನನ್ನು ಹಿಂಬಾಲಿಸಿಕೊಂಡು ಹೋಗಿದ್ದು, ವಿಡಿಯೋದ ಕೊನೆಯಲ್ಲಿ ಕರಡಿ ಕೂಡ ಮನೆಯಿಂದ ಹೊರಬರುತ್ತಿರುವುದು ಸೆರೆಯಾಗಿದೆ.

@Yoda4ever ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​ 26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 80 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ